ರಾಜಧಾನಿ ಬೆಂಗಳೂರಲ್ಲಿ ಮೊದಲ ಬಾರಿಗೆ ಕಂಬಳ: ಇಂದು, ನಾಳೆ ‘ಬೆಂಗಳೂರು ಕಂಬಳ’ದ ಸಂಭ್ರಮ

ರಾಜಧಾನಿ ಬೆಂಗಳೂರಲ್ಲಿ ಮೊದಲ ಬಾರಿಗೆ ಕಂಬಳ: ಇಂದು, ನಾಳೆ ‘ಬೆಂಗಳೂರು ಕಂಬಳ’ದ ಸಂಭ್ರಮ

Published : Nov 25, 2023, 10:18 AM IST

ಬೆಂಗಳೂರು ಕಂಬಳಕ್ಕೆ ಅರಮನೆ ಮೈದಾನದಲ್ಲಿ ಅಖಾಡ ರೆಡಿಯಾಗಿದೆ. ಸುಮಾರು 200 ಜೊತೆ ಕೋಣಗಳು ಇತಿಹಾಸದಲ್ಲೇ ಮೊದಲ ಬಾರಿ ನಡೆಯುತ್ತಿರುವ ಬೆಂಗಳೂರು ಕಂಬಳದಲ್ಲಿ ಓಡಲು ರೆಡಿಯಾಗಿವೆ. ಇಂದು ಮತ್ತು ನಾಳೆ ಕಂಬಳ ಸಂಭ್ರಮ ರಂಗೇರಲಿದೆ.
 

ಕಂಬಳ..ತುಳುನಾಡಿನ ಸಾಂಪ್ರದಾಯಿಕ ಕ್ರೀಡೆ. ಕರಾವಳಿಗರ ಸಾಂಸ್ಕೃತಿಕ ಜೀವನದ ಅವಿಭಾಜ್ಯ ಅಂಗ. ಕೋಣಗಳ ಜೊತೆಗೆ ಕಂಬಳದ ಅಖಾಡಕ್ಕೆ ಧುಮುಕುವ ಮಾಲೀಕ ಗೆದ್ದು ಬೀಗಬೇಕೆಂಬ ಛಲದೊಂದಿಗೆ ಮಿಂಚಿನ ಓಟ ಓಡುತ್ತಿದ್ದರೆ, ನೋಡುಗರ ಮೈ-ಮನ ರೋಮಾಂಚನಗೊಳ್ಳುತ್ತದೆ. ಇಂಥ ಐತಿಹಾಸಿಕ ಕಂಬಳ ಇದೇ ಮೊದಲ ಬಾರಿಗೆ ರಾಜಧಾನಿ ಬೆಂಗಳೂರಲ್ಲಿ(Bengaluru) ನಡೆಯುತ್ತಿದೆ. ಇಂದು ಮತ್ತು ನಾಳೆ ಪ್ಯಾಲೇಸ್ ಗ್ರೌಂಡ್ನಲ್ಲಿ ಅದ್ದೂರಿ ಕಂಬಳಾಚರಣೆ ನಡೆಯಲಿದೆ. ಮೊದಲ ಬಾರಿಗೆ ನಡೆಯುತ್ತಿರುವ ಕಂಬಳಕ್ಕೆ ಭರ್ಜರಿ ಸಿದ್ಧತೆ ಮಾಡಿಕೊಳ್ಳಲಾಗಿದೆ. ಅರಮನೆ ಮೈದಾನದಲ್ಲಿ ತುಳುನಾಡಿನ ಸಾಂಸ್ಕೃತಿಕ ಲೋಕ ಅನಾವರಣಗೊಳ್ಳಲಿದೆ. ಈಗಾಗಲೇ ಕಂಬಳದ ಕೋಣಗಳು, ಮಾಲೀಕರ ಜೊತೆಗೆ ರಾಜಧಾನಿಯನ್ನ ತಲುಪಿವೆ. ಸುಮಾರು 1 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಬೃಹತ್ ಕಂಬಳ(Kambala) ಕರೆಗೆ ಇಂದು ಬೆಳಗ್ಗೆ 10:30ಕ್ಕೆ ಅಶ್ವಿನಿ ಪುನೀತ್ ರಾಜ್ಕುಮಾರ್ ಚಾಲನೆ ನೀಡಲಿದ್ದಾರೆ. ಬಳಿಕ ಕಂಬಳದ ಓಟ ಆರಂಭವಾಗಲಿದೆ. ಬೆಳಗ್ಗೆ 11 ಗಂಟೆಗೆ ಹಲವು ನಟ-ನಟಿಯರು ಭೇಟಿ ನೀಡಲಿದ್ದು, ಸಂಜೆ ನಡೆಯುವ ಕಂಬಳದ ಸ್ಪರ್ಧೆಗೆ ಸಿಎಂ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಸಾಕ್ಷಿಯಾಗಲಿದ್ದಾರೆ. 55 ಎಕರೆಗೂ ಅಧಿಕ ವಿಸ್ತೀರ್ಣವಿರುವ ಪ್ಯಾಲೇಸ್ ಮೈದಾನದಲ್ಲಿ ಕಂಬಳದ ಕೋಣಗಳ ಓಟಕ್ಕೆ 155 ಮೀಟರ್ ಅಗಲದ ಕರೆ ನಿರ್ಮಾಣವಾಗಿದ್ದು, ಈ ಜೋಡು ಕರೆಗೆ ರಾಜ, ಮಹಾರಾಜ ಅಂತಾ ಹೆಸರಿಡಲಾಗಿದೆ. ನೂರಕ್ಕೂ ಅಧಿಕ ಸ್ಟಾಲ್‌ಗಳನ್ನ ಹಾಕಲಾಗಿದ್ದು, ಕರಾವಳಿಯ ವಿವಿಧ ಬಗೆಯ ಖಾದ್ಯಗಳನ್ನ ಉಣಬಡಿಸೋಕೆ ಸಿದ್ಧತೆ ನಡೆದಿದೆ. ಇನ್ನು ಕಂಬಳದ ಗ್ಯಾಲರಿಯಲ್ಲಿ ಸುಮಾರು 8 ಸಾವಿರ ವಿಐಪಿ ಆಸನಗಳ ವ್ಯವಸ್ಥೆ ಇದ್ದು, ಜನಸಾಮಾನ್ಯರಿಗೆ ಪ್ರತೇಕ ವ್ಯವಸ್ಥೆ ಮಾಡಲಾಗಿದೆ. ಕಂಬಳದ ಭಾಗವಹಿಸುವ ಕೋಣಗಳ ಆರೋಗ್ಯದತ್ತಲ್ಲೂ ವಿಶೇಷ ಕಾಳಜಿ ವಹಿಸಲಾಗಿದೆ. ಕೋಣಗಳ ಆರೋಗ್ಯದಲ್ಲಿ ವ್ಯತ್ಯಯ ಆಗದಂತೆ ಮಂಗಳೂರಿನಿಂದಲೇ ತಂದಿರುವ ನೀರು,ಆಹಾರ  ನೀಡಲಾಗುತ್ತಿದೆ. 

ಇದನ್ನೂ ವೀಕ್ಷಿಸಿ:  ತವರಿಗೆ ಹುತಾತ್ಮ ಯೋಧ ಪ್ರಾಂಜಲ್ ಪಾರ್ಥಿವ: ಸಿಎಂ, ಗವರ್ನರ್ ಸೇರಿ ಗಣ್ಯರಿಂದ ಅಂತಿಮ ಗೌರವ

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!