ರಾಜಧಾನಿ ಬೆಂಗಳೂರಲ್ಲಿ ಮೊದಲ ಬಾರಿಗೆ ಕಂಬಳ: ಇಂದು, ನಾಳೆ ‘ಬೆಂಗಳೂರು ಕಂಬಳ’ದ ಸಂಭ್ರಮ

ರಾಜಧಾನಿ ಬೆಂಗಳೂರಲ್ಲಿ ಮೊದಲ ಬಾರಿಗೆ ಕಂಬಳ: ಇಂದು, ನಾಳೆ ‘ಬೆಂಗಳೂರು ಕಂಬಳ’ದ ಸಂಭ್ರಮ

Published : Nov 25, 2023, 10:18 AM IST

ಬೆಂಗಳೂರು ಕಂಬಳಕ್ಕೆ ಅರಮನೆ ಮೈದಾನದಲ್ಲಿ ಅಖಾಡ ರೆಡಿಯಾಗಿದೆ. ಸುಮಾರು 200 ಜೊತೆ ಕೋಣಗಳು ಇತಿಹಾಸದಲ್ಲೇ ಮೊದಲ ಬಾರಿ ನಡೆಯುತ್ತಿರುವ ಬೆಂಗಳೂರು ಕಂಬಳದಲ್ಲಿ ಓಡಲು ರೆಡಿಯಾಗಿವೆ. ಇಂದು ಮತ್ತು ನಾಳೆ ಕಂಬಳ ಸಂಭ್ರಮ ರಂಗೇರಲಿದೆ.
 

ಕಂಬಳ..ತುಳುನಾಡಿನ ಸಾಂಪ್ರದಾಯಿಕ ಕ್ರೀಡೆ. ಕರಾವಳಿಗರ ಸಾಂಸ್ಕೃತಿಕ ಜೀವನದ ಅವಿಭಾಜ್ಯ ಅಂಗ. ಕೋಣಗಳ ಜೊತೆಗೆ ಕಂಬಳದ ಅಖಾಡಕ್ಕೆ ಧುಮುಕುವ ಮಾಲೀಕ ಗೆದ್ದು ಬೀಗಬೇಕೆಂಬ ಛಲದೊಂದಿಗೆ ಮಿಂಚಿನ ಓಟ ಓಡುತ್ತಿದ್ದರೆ, ನೋಡುಗರ ಮೈ-ಮನ ರೋಮಾಂಚನಗೊಳ್ಳುತ್ತದೆ. ಇಂಥ ಐತಿಹಾಸಿಕ ಕಂಬಳ ಇದೇ ಮೊದಲ ಬಾರಿಗೆ ರಾಜಧಾನಿ ಬೆಂಗಳೂರಲ್ಲಿ(Bengaluru) ನಡೆಯುತ್ತಿದೆ. ಇಂದು ಮತ್ತು ನಾಳೆ ಪ್ಯಾಲೇಸ್ ಗ್ರೌಂಡ್ನಲ್ಲಿ ಅದ್ದೂರಿ ಕಂಬಳಾಚರಣೆ ನಡೆಯಲಿದೆ. ಮೊದಲ ಬಾರಿಗೆ ನಡೆಯುತ್ತಿರುವ ಕಂಬಳಕ್ಕೆ ಭರ್ಜರಿ ಸಿದ್ಧತೆ ಮಾಡಿಕೊಳ್ಳಲಾಗಿದೆ. ಅರಮನೆ ಮೈದಾನದಲ್ಲಿ ತುಳುನಾಡಿನ ಸಾಂಸ್ಕೃತಿಕ ಲೋಕ ಅನಾವರಣಗೊಳ್ಳಲಿದೆ. ಈಗಾಗಲೇ ಕಂಬಳದ ಕೋಣಗಳು, ಮಾಲೀಕರ ಜೊತೆಗೆ ರಾಜಧಾನಿಯನ್ನ ತಲುಪಿವೆ. ಸುಮಾರು 1 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಬೃಹತ್ ಕಂಬಳ(Kambala) ಕರೆಗೆ ಇಂದು ಬೆಳಗ್ಗೆ 10:30ಕ್ಕೆ ಅಶ್ವಿನಿ ಪುನೀತ್ ರಾಜ್ಕುಮಾರ್ ಚಾಲನೆ ನೀಡಲಿದ್ದಾರೆ. ಬಳಿಕ ಕಂಬಳದ ಓಟ ಆರಂಭವಾಗಲಿದೆ. ಬೆಳಗ್ಗೆ 11 ಗಂಟೆಗೆ ಹಲವು ನಟ-ನಟಿಯರು ಭೇಟಿ ನೀಡಲಿದ್ದು, ಸಂಜೆ ನಡೆಯುವ ಕಂಬಳದ ಸ್ಪರ್ಧೆಗೆ ಸಿಎಂ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಸಾಕ್ಷಿಯಾಗಲಿದ್ದಾರೆ. 55 ಎಕರೆಗೂ ಅಧಿಕ ವಿಸ್ತೀರ್ಣವಿರುವ ಪ್ಯಾಲೇಸ್ ಮೈದಾನದಲ್ಲಿ ಕಂಬಳದ ಕೋಣಗಳ ಓಟಕ್ಕೆ 155 ಮೀಟರ್ ಅಗಲದ ಕರೆ ನಿರ್ಮಾಣವಾಗಿದ್ದು, ಈ ಜೋಡು ಕರೆಗೆ ರಾಜ, ಮಹಾರಾಜ ಅಂತಾ ಹೆಸರಿಡಲಾಗಿದೆ. ನೂರಕ್ಕೂ ಅಧಿಕ ಸ್ಟಾಲ್‌ಗಳನ್ನ ಹಾಕಲಾಗಿದ್ದು, ಕರಾವಳಿಯ ವಿವಿಧ ಬಗೆಯ ಖಾದ್ಯಗಳನ್ನ ಉಣಬಡಿಸೋಕೆ ಸಿದ್ಧತೆ ನಡೆದಿದೆ. ಇನ್ನು ಕಂಬಳದ ಗ್ಯಾಲರಿಯಲ್ಲಿ ಸುಮಾರು 8 ಸಾವಿರ ವಿಐಪಿ ಆಸನಗಳ ವ್ಯವಸ್ಥೆ ಇದ್ದು, ಜನಸಾಮಾನ್ಯರಿಗೆ ಪ್ರತೇಕ ವ್ಯವಸ್ಥೆ ಮಾಡಲಾಗಿದೆ. ಕಂಬಳದ ಭಾಗವಹಿಸುವ ಕೋಣಗಳ ಆರೋಗ್ಯದತ್ತಲ್ಲೂ ವಿಶೇಷ ಕಾಳಜಿ ವಹಿಸಲಾಗಿದೆ. ಕೋಣಗಳ ಆರೋಗ್ಯದಲ್ಲಿ ವ್ಯತ್ಯಯ ಆಗದಂತೆ ಮಂಗಳೂರಿನಿಂದಲೇ ತಂದಿರುವ ನೀರು,ಆಹಾರ  ನೀಡಲಾಗುತ್ತಿದೆ. 

ಇದನ್ನೂ ವೀಕ್ಷಿಸಿ:  ತವರಿಗೆ ಹುತಾತ್ಮ ಯೋಧ ಪ್ರಾಂಜಲ್ ಪಾರ್ಥಿವ: ಸಿಎಂ, ಗವರ್ನರ್ ಸೇರಿ ಗಣ್ಯರಿಂದ ಅಂತಿಮ ಗೌರವ

22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!