ಬೆಂಗಳೂರು ಕೆರೆ ಶುದ್ಧೀಕರಣ: ಅಧಿಕಾರಿಗಳ ಬೆಂಡೆತ್ತಿದ NGT

ಬೆಂಗಳೂರು ಕೆರೆ ಶುದ್ಧೀಕರಣ: ಅಧಿಕಾರಿಗಳ ಬೆಂಡೆತ್ತಿದ NGT

Suvarna News   | Asianet News
Published : Dec 11, 2019, 04:57 PM ISTUpdated : Dec 11, 2019, 05:00 PM IST

ಕೆರೆ ಶುದ್ಧೀಕರಣ ವಿಚಾರಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ (NGT),  ಬಿಬಿಎಂಪಿ ಮತ್ತು ಜಲಮಂಡಳಿ ಅಧಿಕಾರಿಗಳ ವಿರುದ್ಧ ಗರಂ ಆಗಿದೆ. ಆಯುಕ್ತರನ್ನು ತರಾಟೆಗೆ ತೆಗೆದುಕೊಂಡ ನ್ಯಾಯಾಧೀಶ, ಮಾತಿನಲ್ಲೇ ಅಧಿಕಾರಿಗಳ ಬೆಂಡೆತ್ತಿದ ಘಟನೆ ನಡೆದಿದೆ.

ಬೆಂಗಳೂರು (ಡಿ.11): ಬೆಂಗಳೂರಿನ ಬೆಳ್ಳಂದೂರು ಮತ್ತು ವರ್ತೂರು ಕೆರೆ ಶುದ್ಧೀಕರಣ ಪ್ರಕ್ರಿಯೆ ವಿಳಂಬವಾಗುತ್ತಿರುವುದಕ್ಕೆ  ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ (NGT) ಕೆಂಡಾಮಂಡಲವಾಗಿದೆ.

 ಬಿಬಿಎಂಪಿ ಆಯುಕ್ತರು ಮತ್ತು ಜಲಮಂಡಳಿ ಅಧ್ಯಕ್ಷರನ್ನು ಬುಧವಾರ ತರಾಟೆಗೆ ತೆಗೆದುಕೊಂಡ ನ್ಯಾಯಾಧೀಶರು, ಮಾತಿನಲ್ಲೇ ಬೆಂಡೆತ್ತಿದ ಘಟನೆ ನಡೆದಿದೆ. ಕೆಲಸ ಪೂರ್ಣಗೊಳಿಸಲು NGT ಈಗ ಮಾರ್ಚ್ 31ರ ಗಡುವನ್ನು ವಿಧಿಸಿದ್ದು, ತಪ್ಪಿದ್ದಲ್ಲಿ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದೆ. 

ಅಧಿಕಾರಿಗಳ ನಿರ್ಲಕ್ಷ್ಯದಿಂದ ಬೆಳ್ಳಂದೂರು ಮತ್ತು ವರ್ತೂರು ಕೆರೆಗಳು ಸ್ಥಳೀಯರಿಗೆ ಶಾಪವಾಗಿ ಪರಿಣಮಿಸಿದ್ದು, ಬೆಂಕಿ, ನೊರೆ, ವಾಸನೆ ಮುಂತಾದ ಬೇಡವಾದ ಕಾರಣಗಳಿಗೆ ಆಗಾಗ ಸುದ್ದಿಯಾಗುತ್ತಿರುತ್ತದೆ.

ಕಳೆದ ನವೆಂಬರ್‌ನಲ್ಲಿ ನಗರದ ಹುಳಿಮಾವು ಕೆರೆ ಕೋಡಿ ಒಡೆದು ಮನೆಗಳಿಗೆ ಭಾರೀ ಪ್ರಮಾಣದಲ್ಲಿ ನೀರು ನುಗ್ಗಿ, ಅಪಾರ ನಷ್ಟವಾಗಿರುವುದನ್ನು ಸ್ಮರಿಸಬಹುದು.

26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!