ಬೆಂಗಳೂರು ಕೆರೆ ಶುದ್ಧೀಕರಣ: ಅಧಿಕಾರಿಗಳ ಬೆಂಡೆತ್ತಿದ NGT

ಬೆಂಗಳೂರು ಕೆರೆ ಶುದ್ಧೀಕರಣ: ಅಧಿಕಾರಿಗಳ ಬೆಂಡೆತ್ತಿದ NGT

Published : Dec 11, 2019, 04:57 PM ISTUpdated : Dec 11, 2019, 05:00 PM IST

ಕೆರೆ ಶುದ್ಧೀಕರಣ ವಿಚಾರಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ (NGT),  ಬಿಬಿಎಂಪಿ ಮತ್ತು ಜಲಮಂಡಳಿ ಅಧಿಕಾರಿಗಳ ವಿರುದ್ಧ ಗರಂ ಆಗಿದೆ. ಆಯುಕ್ತರನ್ನು ತರಾಟೆಗೆ ತೆಗೆದುಕೊಂಡ ನ್ಯಾಯಾಧೀಶ, ಮಾತಿನಲ್ಲೇ ಅಧಿಕಾರಿಗಳ ಬೆಂಡೆತ್ತಿದ ಘಟನೆ ನಡೆದಿದೆ.

ಬೆಂಗಳೂರು (ಡಿ.11): ಬೆಂಗಳೂರಿನ ಬೆಳ್ಳಂದೂರು ಮತ್ತು ವರ್ತೂರು ಕೆರೆ ಶುದ್ಧೀಕರಣ ಪ್ರಕ್ರಿಯೆ ವಿಳಂಬವಾಗುತ್ತಿರುವುದಕ್ಕೆ  ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ (NGT) ಕೆಂಡಾಮಂಡಲವಾಗಿದೆ.

 ಬಿಬಿಎಂಪಿ ಆಯುಕ್ತರು ಮತ್ತು ಜಲಮಂಡಳಿ ಅಧ್ಯಕ್ಷರನ್ನು ಬುಧವಾರ ತರಾಟೆಗೆ ತೆಗೆದುಕೊಂಡ ನ್ಯಾಯಾಧೀಶರು, ಮಾತಿನಲ್ಲೇ ಬೆಂಡೆತ್ತಿದ ಘಟನೆ ನಡೆದಿದೆ. ಕೆಲಸ ಪೂರ್ಣಗೊಳಿಸಲು NGT ಈಗ ಮಾರ್ಚ್ 31ರ ಗಡುವನ್ನು ವಿಧಿಸಿದ್ದು, ತಪ್ಪಿದ್ದಲ್ಲಿ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದೆ. 

ಅಧಿಕಾರಿಗಳ ನಿರ್ಲಕ್ಷ್ಯದಿಂದ ಬೆಳ್ಳಂದೂರು ಮತ್ತು ವರ್ತೂರು ಕೆರೆಗಳು ಸ್ಥಳೀಯರಿಗೆ ಶಾಪವಾಗಿ ಪರಿಣಮಿಸಿದ್ದು, ಬೆಂಕಿ, ನೊರೆ, ವಾಸನೆ ಮುಂತಾದ ಬೇಡವಾದ ಕಾರಣಗಳಿಗೆ ಆಗಾಗ ಸುದ್ದಿಯಾಗುತ್ತಿರುತ್ತದೆ.

ಕಳೆದ ನವೆಂಬರ್‌ನಲ್ಲಿ ನಗರದ ಹುಳಿಮಾವು ಕೆರೆ ಕೋಡಿ ಒಡೆದು ಮನೆಗಳಿಗೆ ಭಾರೀ ಪ್ರಮಾಣದಲ್ಲಿ ನೀರು ನುಗ್ಗಿ, ಅಪಾರ ನಷ್ಟವಾಗಿರುವುದನ್ನು ಸ್ಮರಿಸಬಹುದು.

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?