Peenya Flyover Mess: ಕೇವಲ 12 ವರ್ಷಕ್ಕೆ ಇದೆಂಥಾ ದುಸ್ಥಿತಿ: ಡೆಮಾಲಿಷ್‌ ಆಗುತ್ತಾ  ಫ್ಲೈಓವರ್?

Peenya Flyover Mess: ಕೇವಲ 12 ವರ್ಷಕ್ಕೆ ಇದೆಂಥಾ ದುಸ್ಥಿತಿ: ಡೆಮಾಲಿಷ್‌ ಆಗುತ್ತಾ ಫ್ಲೈಓವರ್?

Published : Feb 17, 2022, 09:24 AM ISTUpdated : Feb 17, 2022, 09:28 AM IST

*ಸದನದಲ್ಲಿ ಬೆಂಗಳೂರಿನ ಪೀಣ್ಯ ಫ್ಲೈಓವರ್ ಧ್ವಂಸದ ಬಗ್ಗೆ ಸಿಎಂ ಮಾತು 
*ಲೋಡ್‌ ಪರೀಕ್ಷೆ ವೇಳೆ ಸಂಚಾರಕ್ಕೆ ಸುರಕ್ಷಿತವಲ್ಲ ಎಂದು ಎಂಜಿನಿಯರ್‌ಗಳಿಂದ ವರದಿ
*ದುರಸ್ತಿ ಕಾರ್ಯ ಪೂರ್ಣಗೊಂಡರೂ ಸಂಚಾರಕ್ಕೆ ಅವಕಾಶ ನೀಡಿಲ್ಲ

ಬೆಂಗಳೂರು(ಫೆ.16): ತುಮಕೂರು ರಸ್ತೆ ಮೇಲ್ಸೇತುವೆಯ(Flyover) ಎರಡು ಪಿಲ್ಲರ್‌ಗಳ ನಡುವಿನ ಕೇಬಲ್‌ ದುರಸ್ತಿಗೊಂಡಿದೆ. ಆದರೆ, ದುರಸ್ತಿ ಕಾಮಗಾರಿ ಮುಗಿದಿದ್ದರೂ ಲೋಡ್‌ ಪರೀಕ್ಷೆ ವೇಳೆ ವಾಹನ ಸಂಚಾರ ಸುರಕ್ಷಿತವಲ್ಲ ಎಂದು ವರದಿ ಬಂದಿರುವ ಹಿನ್ನೆಲೆಯಲ್ಲಿ ವಾಹನಗಳಿಗೆ ಅವಕಾಶ ನೀಡಿಲ್ಲ. ಯಾವುದಾದರೂ ಅನಾಹುತ ಉಂಟಾದರೆ ಯಾರು ಹೊಣೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಪ್ರಶ್ನಿಸಿದ್ದಾರೆ.

ಕಳಪೆ ಕಾಮಗಾರಿಯಿಂದಲೇ ಎರಡು ಪಿಲ್ಲರ್‌ ನಡುವಿನ ಭಾಗಕ್ಕೆ ಸಮಸ್ಯೆಯಾಗಿದೆ. ಅದನ್ನು ಹೊಸದಾಗಿಯೇ ಮಾಡಬೇಕು ಎಂದು ಎಂಜಿನಿಯರ್‌ಗಳು ಹೇಳುತ್ತಿದ್ದಾರೆ. ತಾತ್ಕಾಲಿಕವಾಗಿ ಲಘು ವಾಹನಗಳಿಗಾದರೂ ಅವಕಾಶ ನೀಡುವಂತೆ ಕೇಂದ್ರ ಹೆದ್ದಾರಿ ಖಾತೆ ಸಚಿವರಿಗೆ ಪತ್ರ ಬರೆದಿದ್ದೇನೆ. ಎರಡು ದಿನದೊಳಗೆ ಅಂತಿಮ ತೀರ್ಮಾನ ಬರಲಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Bengaluru: ಪೀಣ್ಯ ಫ್ಲೈಓವರ್‌ ಟೆಸ್ಟ್‌ಗೇ 9 ತಿಂಗಳು ಬೇಕು..!

 ರಸ್ತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ(National Highway Authority) ವ್ಯಾಪ್ತಿಗೆ ಬರುತ್ತದೆ. ಕಳಪೆ ಕಾಮಗಾರಿಯಿಂದ ಉಂಟಾಗಿರುವ ಸಮಸ್ಯೆಯಿಂದ ಲಕ್ಷಾಂತರ ಮಂದಿ ನರಳುತ್ತಿದ್ದಾರೆ. ರಿಪೇರಿ ಮುಗಿದ ಮೇಲೆ ಲೋಡ್‌ ಟೆಸ್ಟಿಂಗ್‌ ನಡೆಸಿದ್ದು, ಹೆದ್ದಾರಿ ಪ್ರಾಧಿಕಾರದ ಎಂಜಿನಿಯರ್‌ಗಳು, ಐಐಎಸ್ಸಿ ಎಂಜಿನಿಯರ್‌ಗಳು ಪರೀಕ್ಷೆ ನಡೆಸಿದ್ದಾರೆ. 102-103 ಪಿಲ್ಲರ್‌ ನಡುವಿನ ಕೇಬಲ್‌ ಹೆಚ್ಚು ಗಾತ್ರದ ವಾಹನ ಸಂಚರಿಸಿದರೆ ಈಗಲೂ ಬಕಲ್‌ ಆಗುತ್ತಿದೆ. ಯಾವುದಾದರೂ ಅನಾಹುತ ಆದರೆ ಯಾರು ಹೊಣೆ ಎಂಬ ಕಾರಣಕ್ಕೆ ಅನುಮತಿ ನೀಡುತ್ತಿಲ್ಲ ಎಂದು ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
Read more