Peenya Flyover Mess: ಕೇವಲ 12 ವರ್ಷಕ್ಕೆ ಇದೆಂಥಾ ದುಸ್ಥಿತಿ: ಡೆಮಾಲಿಷ್‌ ಆಗುತ್ತಾ  ಫ್ಲೈಓವರ್?

Peenya Flyover Mess: ಕೇವಲ 12 ವರ್ಷಕ್ಕೆ ಇದೆಂಥಾ ದುಸ್ಥಿತಿ: ಡೆಮಾಲಿಷ್‌ ಆಗುತ್ತಾ ಫ್ಲೈಓವರ್?

Published : Feb 17, 2022, 09:24 AM ISTUpdated : Feb 17, 2022, 09:28 AM IST

*ಸದನದಲ್ಲಿ ಬೆಂಗಳೂರಿನ ಪೀಣ್ಯ ಫ್ಲೈಓವರ್ ಧ್ವಂಸದ ಬಗ್ಗೆ ಸಿಎಂ ಮಾತು 
*ಲೋಡ್‌ ಪರೀಕ್ಷೆ ವೇಳೆ ಸಂಚಾರಕ್ಕೆ ಸುರಕ್ಷಿತವಲ್ಲ ಎಂದು ಎಂಜಿನಿಯರ್‌ಗಳಿಂದ ವರದಿ
*ದುರಸ್ತಿ ಕಾರ್ಯ ಪೂರ್ಣಗೊಂಡರೂ ಸಂಚಾರಕ್ಕೆ ಅವಕಾಶ ನೀಡಿಲ್ಲ

ಬೆಂಗಳೂರು(ಫೆ.16): ತುಮಕೂರು ರಸ್ತೆ ಮೇಲ್ಸೇತುವೆಯ(Flyover) ಎರಡು ಪಿಲ್ಲರ್‌ಗಳ ನಡುವಿನ ಕೇಬಲ್‌ ದುರಸ್ತಿಗೊಂಡಿದೆ. ಆದರೆ, ದುರಸ್ತಿ ಕಾಮಗಾರಿ ಮುಗಿದಿದ್ದರೂ ಲೋಡ್‌ ಪರೀಕ್ಷೆ ವೇಳೆ ವಾಹನ ಸಂಚಾರ ಸುರಕ್ಷಿತವಲ್ಲ ಎಂದು ವರದಿ ಬಂದಿರುವ ಹಿನ್ನೆಲೆಯಲ್ಲಿ ವಾಹನಗಳಿಗೆ ಅವಕಾಶ ನೀಡಿಲ್ಲ. ಯಾವುದಾದರೂ ಅನಾಹುತ ಉಂಟಾದರೆ ಯಾರು ಹೊಣೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಪ್ರಶ್ನಿಸಿದ್ದಾರೆ.

ಕಳಪೆ ಕಾಮಗಾರಿಯಿಂದಲೇ ಎರಡು ಪಿಲ್ಲರ್‌ ನಡುವಿನ ಭಾಗಕ್ಕೆ ಸಮಸ್ಯೆಯಾಗಿದೆ. ಅದನ್ನು ಹೊಸದಾಗಿಯೇ ಮಾಡಬೇಕು ಎಂದು ಎಂಜಿನಿಯರ್‌ಗಳು ಹೇಳುತ್ತಿದ್ದಾರೆ. ತಾತ್ಕಾಲಿಕವಾಗಿ ಲಘು ವಾಹನಗಳಿಗಾದರೂ ಅವಕಾಶ ನೀಡುವಂತೆ ಕೇಂದ್ರ ಹೆದ್ದಾರಿ ಖಾತೆ ಸಚಿವರಿಗೆ ಪತ್ರ ಬರೆದಿದ್ದೇನೆ. ಎರಡು ದಿನದೊಳಗೆ ಅಂತಿಮ ತೀರ್ಮಾನ ಬರಲಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Bengaluru: ಪೀಣ್ಯ ಫ್ಲೈಓವರ್‌ ಟೆಸ್ಟ್‌ಗೇ 9 ತಿಂಗಳು ಬೇಕು..!

 ರಸ್ತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ(National Highway Authority) ವ್ಯಾಪ್ತಿಗೆ ಬರುತ್ತದೆ. ಕಳಪೆ ಕಾಮಗಾರಿಯಿಂದ ಉಂಟಾಗಿರುವ ಸಮಸ್ಯೆಯಿಂದ ಲಕ್ಷಾಂತರ ಮಂದಿ ನರಳುತ್ತಿದ್ದಾರೆ. ರಿಪೇರಿ ಮುಗಿದ ಮೇಲೆ ಲೋಡ್‌ ಟೆಸ್ಟಿಂಗ್‌ ನಡೆಸಿದ್ದು, ಹೆದ್ದಾರಿ ಪ್ರಾಧಿಕಾರದ ಎಂಜಿನಿಯರ್‌ಗಳು, ಐಐಎಸ್ಸಿ ಎಂಜಿನಿಯರ್‌ಗಳು ಪರೀಕ್ಷೆ ನಡೆಸಿದ್ದಾರೆ. 102-103 ಪಿಲ್ಲರ್‌ ನಡುವಿನ ಕೇಬಲ್‌ ಹೆಚ್ಚು ಗಾತ್ರದ ವಾಹನ ಸಂಚರಿಸಿದರೆ ಈಗಲೂ ಬಕಲ್‌ ಆಗುತ್ತಿದೆ. ಯಾವುದಾದರೂ ಅನಾಹುತ ಆದರೆ ಯಾರು ಹೊಣೆ ಎಂಬ ಕಾರಣಕ್ಕೆ ಅನುಮತಿ ನೀಡುತ್ತಿಲ್ಲ ಎಂದು ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
Read more