Peenya Flyover Mess: ಕೇವಲ 12 ವರ್ಷಕ್ಕೆ ಇದೆಂಥಾ ದುಸ್ಥಿತಿ: ಡೆಮಾಲಿಷ್‌ ಆಗುತ್ತಾ  ಫ್ಲೈಓವರ್?

Peenya Flyover Mess: ಕೇವಲ 12 ವರ್ಷಕ್ಕೆ ಇದೆಂಥಾ ದುಸ್ಥಿತಿ: ಡೆಮಾಲಿಷ್‌ ಆಗುತ್ತಾ ಫ್ಲೈಓವರ್?

Published : Feb 17, 2022, 09:24 AM ISTUpdated : Feb 17, 2022, 09:28 AM IST

*ಸದನದಲ್ಲಿ ಬೆಂಗಳೂರಿನ ಪೀಣ್ಯ ಫ್ಲೈಓವರ್ ಧ್ವಂಸದ ಬಗ್ಗೆ ಸಿಎಂ ಮಾತು 
*ಲೋಡ್‌ ಪರೀಕ್ಷೆ ವೇಳೆ ಸಂಚಾರಕ್ಕೆ ಸುರಕ್ಷಿತವಲ್ಲ ಎಂದು ಎಂಜಿನಿಯರ್‌ಗಳಿಂದ ವರದಿ
*ದುರಸ್ತಿ ಕಾರ್ಯ ಪೂರ್ಣಗೊಂಡರೂ ಸಂಚಾರಕ್ಕೆ ಅವಕಾಶ ನೀಡಿಲ್ಲ

ಬೆಂಗಳೂರು(ಫೆ.16): ತುಮಕೂರು ರಸ್ತೆ ಮೇಲ್ಸೇತುವೆಯ(Flyover) ಎರಡು ಪಿಲ್ಲರ್‌ಗಳ ನಡುವಿನ ಕೇಬಲ್‌ ದುರಸ್ತಿಗೊಂಡಿದೆ. ಆದರೆ, ದುರಸ್ತಿ ಕಾಮಗಾರಿ ಮುಗಿದಿದ್ದರೂ ಲೋಡ್‌ ಪರೀಕ್ಷೆ ವೇಳೆ ವಾಹನ ಸಂಚಾರ ಸುರಕ್ಷಿತವಲ್ಲ ಎಂದು ವರದಿ ಬಂದಿರುವ ಹಿನ್ನೆಲೆಯಲ್ಲಿ ವಾಹನಗಳಿಗೆ ಅವಕಾಶ ನೀಡಿಲ್ಲ. ಯಾವುದಾದರೂ ಅನಾಹುತ ಉಂಟಾದರೆ ಯಾರು ಹೊಣೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಪ್ರಶ್ನಿಸಿದ್ದಾರೆ.

ಕಳಪೆ ಕಾಮಗಾರಿಯಿಂದಲೇ ಎರಡು ಪಿಲ್ಲರ್‌ ನಡುವಿನ ಭಾಗಕ್ಕೆ ಸಮಸ್ಯೆಯಾಗಿದೆ. ಅದನ್ನು ಹೊಸದಾಗಿಯೇ ಮಾಡಬೇಕು ಎಂದು ಎಂಜಿನಿಯರ್‌ಗಳು ಹೇಳುತ್ತಿದ್ದಾರೆ. ತಾತ್ಕಾಲಿಕವಾಗಿ ಲಘು ವಾಹನಗಳಿಗಾದರೂ ಅವಕಾಶ ನೀಡುವಂತೆ ಕೇಂದ್ರ ಹೆದ್ದಾರಿ ಖಾತೆ ಸಚಿವರಿಗೆ ಪತ್ರ ಬರೆದಿದ್ದೇನೆ. ಎರಡು ದಿನದೊಳಗೆ ಅಂತಿಮ ತೀರ್ಮಾನ ಬರಲಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Bengaluru: ಪೀಣ್ಯ ಫ್ಲೈಓವರ್‌ ಟೆಸ್ಟ್‌ಗೇ 9 ತಿಂಗಳು ಬೇಕು..!

 ರಸ್ತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ(National Highway Authority) ವ್ಯಾಪ್ತಿಗೆ ಬರುತ್ತದೆ. ಕಳಪೆ ಕಾಮಗಾರಿಯಿಂದ ಉಂಟಾಗಿರುವ ಸಮಸ್ಯೆಯಿಂದ ಲಕ್ಷಾಂತರ ಮಂದಿ ನರಳುತ್ತಿದ್ದಾರೆ. ರಿಪೇರಿ ಮುಗಿದ ಮೇಲೆ ಲೋಡ್‌ ಟೆಸ್ಟಿಂಗ್‌ ನಡೆಸಿದ್ದು, ಹೆದ್ದಾರಿ ಪ್ರಾಧಿಕಾರದ ಎಂಜಿನಿಯರ್‌ಗಳು, ಐಐಎಸ್ಸಿ ಎಂಜಿನಿಯರ್‌ಗಳು ಪರೀಕ್ಷೆ ನಡೆಸಿದ್ದಾರೆ. 102-103 ಪಿಲ್ಲರ್‌ ನಡುವಿನ ಕೇಬಲ್‌ ಹೆಚ್ಚು ಗಾತ್ರದ ವಾಹನ ಸಂಚರಿಸಿದರೆ ಈಗಲೂ ಬಕಲ್‌ ಆಗುತ್ತಿದೆ. ಯಾವುದಾದರೂ ಅನಾಹುತ ಆದರೆ ಯಾರು ಹೊಣೆ ಎಂಬ ಕಾರಣಕ್ಕೆ ಅನುಮತಿ ನೀಡುತ್ತಿಲ್ಲ ಎಂದು ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more