Peenya Flyover Mess: ಕೇವಲ 12 ವರ್ಷಕ್ಕೆ ಇದೆಂಥಾ ದುಸ್ಥಿತಿ: ಡೆಮಾಲಿಷ್‌ ಆಗುತ್ತಾ  ಫ್ಲೈಓವರ್?

Peenya Flyover Mess: ಕೇವಲ 12 ವರ್ಷಕ್ಕೆ ಇದೆಂಥಾ ದುಸ್ಥಿತಿ: ಡೆಮಾಲಿಷ್‌ ಆಗುತ್ತಾ ಫ್ಲೈಓವರ್?

Published : Feb 17, 2022, 09:24 AM ISTUpdated : Feb 17, 2022, 09:28 AM IST

*ಸದನದಲ್ಲಿ ಬೆಂಗಳೂರಿನ ಪೀಣ್ಯ ಫ್ಲೈಓವರ್ ಧ್ವಂಸದ ಬಗ್ಗೆ ಸಿಎಂ ಮಾತು 
*ಲೋಡ್‌ ಪರೀಕ್ಷೆ ವೇಳೆ ಸಂಚಾರಕ್ಕೆ ಸುರಕ್ಷಿತವಲ್ಲ ಎಂದು ಎಂಜಿನಿಯರ್‌ಗಳಿಂದ ವರದಿ
*ದುರಸ್ತಿ ಕಾರ್ಯ ಪೂರ್ಣಗೊಂಡರೂ ಸಂಚಾರಕ್ಕೆ ಅವಕಾಶ ನೀಡಿಲ್ಲ

ಬೆಂಗಳೂರು(ಫೆ.16): ತುಮಕೂರು ರಸ್ತೆ ಮೇಲ್ಸೇತುವೆಯ(Flyover) ಎರಡು ಪಿಲ್ಲರ್‌ಗಳ ನಡುವಿನ ಕೇಬಲ್‌ ದುರಸ್ತಿಗೊಂಡಿದೆ. ಆದರೆ, ದುರಸ್ತಿ ಕಾಮಗಾರಿ ಮುಗಿದಿದ್ದರೂ ಲೋಡ್‌ ಪರೀಕ್ಷೆ ವೇಳೆ ವಾಹನ ಸಂಚಾರ ಸುರಕ್ಷಿತವಲ್ಲ ಎಂದು ವರದಿ ಬಂದಿರುವ ಹಿನ್ನೆಲೆಯಲ್ಲಿ ವಾಹನಗಳಿಗೆ ಅವಕಾಶ ನೀಡಿಲ್ಲ. ಯಾವುದಾದರೂ ಅನಾಹುತ ಉಂಟಾದರೆ ಯಾರು ಹೊಣೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಪ್ರಶ್ನಿಸಿದ್ದಾರೆ.

ಕಳಪೆ ಕಾಮಗಾರಿಯಿಂದಲೇ ಎರಡು ಪಿಲ್ಲರ್‌ ನಡುವಿನ ಭಾಗಕ್ಕೆ ಸಮಸ್ಯೆಯಾಗಿದೆ. ಅದನ್ನು ಹೊಸದಾಗಿಯೇ ಮಾಡಬೇಕು ಎಂದು ಎಂಜಿನಿಯರ್‌ಗಳು ಹೇಳುತ್ತಿದ್ದಾರೆ. ತಾತ್ಕಾಲಿಕವಾಗಿ ಲಘು ವಾಹನಗಳಿಗಾದರೂ ಅವಕಾಶ ನೀಡುವಂತೆ ಕೇಂದ್ರ ಹೆದ್ದಾರಿ ಖಾತೆ ಸಚಿವರಿಗೆ ಪತ್ರ ಬರೆದಿದ್ದೇನೆ. ಎರಡು ದಿನದೊಳಗೆ ಅಂತಿಮ ತೀರ್ಮಾನ ಬರಲಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Bengaluru: ಪೀಣ್ಯ ಫ್ಲೈಓವರ್‌ ಟೆಸ್ಟ್‌ಗೇ 9 ತಿಂಗಳು ಬೇಕು..!

 ರಸ್ತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ(National Highway Authority) ವ್ಯಾಪ್ತಿಗೆ ಬರುತ್ತದೆ. ಕಳಪೆ ಕಾಮಗಾರಿಯಿಂದ ಉಂಟಾಗಿರುವ ಸಮಸ್ಯೆಯಿಂದ ಲಕ್ಷಾಂತರ ಮಂದಿ ನರಳುತ್ತಿದ್ದಾರೆ. ರಿಪೇರಿ ಮುಗಿದ ಮೇಲೆ ಲೋಡ್‌ ಟೆಸ್ಟಿಂಗ್‌ ನಡೆಸಿದ್ದು, ಹೆದ್ದಾರಿ ಪ್ರಾಧಿಕಾರದ ಎಂಜಿನಿಯರ್‌ಗಳು, ಐಐಎಸ್ಸಿ ಎಂಜಿನಿಯರ್‌ಗಳು ಪರೀಕ್ಷೆ ನಡೆಸಿದ್ದಾರೆ. 102-103 ಪಿಲ್ಲರ್‌ ನಡುವಿನ ಕೇಬಲ್‌ ಹೆಚ್ಚು ಗಾತ್ರದ ವಾಹನ ಸಂಚರಿಸಿದರೆ ಈಗಲೂ ಬಕಲ್‌ ಆಗುತ್ತಿದೆ. ಯಾವುದಾದರೂ ಅನಾಹುತ ಆದರೆ ಯಾರು ಹೊಣೆ ಎಂಬ ಕಾರಣಕ್ಕೆ ಅನುಮತಿ ನೀಡುತ್ತಿಲ್ಲ ಎಂದು ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more