Bengaluru Rain Updates: ಮಹಾಮಳೆಗೆ ಕಳಚಿತು ಮಹಾನಗರದ ಅಸಲಿ ಮುಖ!

Bengaluru Rain Updates: ಮಹಾಮಳೆಗೆ ಕಳಚಿತು ಮಹಾನಗರದ ಅಸಲಿ ಮುಖ!

Published : Sep 06, 2022, 06:15 PM IST

Bengaluru Rain Updates: ರಾಜಧಾನಿ ಬೆಂಗಳೂರಿನಲ್ಲಿ ಅಬ್ಬರಿಸುತ್ತಿರುವ ವರುಣನ ಆರ್ಭಟಕ್ಕೆ ಜನರು ಅಕ್ಷರಶಃ ತತ್ತರಿಸಿ ಹೋಗಿದ್ದಾರೆ
 

ಬೆಂಗಳೂರು (ಸೆ. 06):  ರಾಜಧಾನಿ ಬೆಂಗಳೂರಿನಲ್ಲಿ (Bengaluru) ಅಬ್ಬರಿಸುತ್ತಿರುವ ವರುಣನ ಆರ್ಭಟಕ್ಕೆ ಜನರು ಅಕ್ಷರಶಃ ತತ್ತರಿಸಿ ಹೋಗಿದ್ದಾರೆ. ಪಾಲಿಕೆ ವ್ಯಾಪ್ತಿಯ 160ಕ್ಕೂ ಹೆಚ್ಚು ಕೆರೆಗಳು ತುಂಬಿ ಕೋಡಿ ಬಿದ್ದಿದ್ದು ಮಹದೇವಪುರ, ಬೊಮ್ಮನಹಳ್ಳಿ, ಪೂರ್ವ ವಲಯದ ಅನೇಕ ಜನವಸತಿ ಪ್ರದೇಶಗಳು ಮುಳುಗಡೆಯಾಗಿವೆ. ಮಳೆ ಜನಜೀವನವನ್ನಷ್ಟೇ ಅಲ್ಲಲ್ಲೇ ಐಟಿ ಹಬ್‌ (IT Hub)ಎಂದೇ ಪರಿಗಣಿಸಲಾಗಿರುವ ಪ್ರದೇಶಗಳು ಜಲಾವೃತಗೊಂಡು ಕೋಟ್ಯಾಂತರ ರು. ನಷ್ಟ ಸಂಭವಿಸಿದೆ. 

ಬೆಳ್ಳಂದೂರು, ವರ್ತೂರು, ವಿಭೂತಿಪುರ, ಕನ್ಹಹಳ್ಳಿ, ಸವಳುಕೆರೆ, ಬೇಗೂರು ಕೆರೆ, ಯಲಹಂಕ ಕೆರೆ, ದೊರೆ ಕೆರೆ, ಜಕ್ಕೂರು ಕೆರೆ ಸೇರಿದಂತೆ 160ಕ್ಕೂ ಹೆಚ್ಚು ಕೆರೆಗಳು ಇದೇ ಮೊದಲ ಬಾರಿಗೆ ಏಕಕಾಲದಲ್ಲಿ ಭರ್ತಿಯಾಗಿವೆ. ಇವುಗಳಲ್ಲಿ ಬಹುತೇಕ ಕೆರೆಗಳು ಕೋಡಿ ಬಿದ್ದಿದ್ದು, ಹೊರ ಹರಿವು ಹೆಚ್ಚಾಗಿದೆ. ಜೊತೆಗೆ ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ರಾಜಕಾಲುವೆಗಳು ಕೂಡ ತುಂಬಿ ಹರಿಯುತ್ತಿವೆ. ಪರಿಣಾಮ ಕೆಲವು ಬಡಾವಣೆಗಳು ಜಲಾವೃತಗೊಂಡಿದ್ದರೆ, ಹಲವು ಮನೆಗಳಿಗೆ ನೀರು ನುಗ್ಗಿ ಸಂಕಷ್ಟತಂದೊಡ್ಡಿದೆ. 

Bengaluru Rain: ರೈನ್‌ಕೋಟು ಧರಿಸಿ ನಾಯಿಮರಿ ವಾಕಿಂಗ್ ವೀಡಿಯೋ ವೈರಲ್

ಮಳೆಗೆ ಬೆಳಂದೂರಿನ ಮುನೇನಕೊಳಲಿನ ತಗ್ಗು ಪ್ರದೇಶವೊಂದರಲ್ಲೇ 1500ಕ್ಕೂ ಹೆಚ್ಚು ಮನೆಗಳು ಜಲಾವೃತಗೊಂಡಿವೆ. ಮಳೆಯಾದಾಗಲೆಲ್ಲಾ ಬೆಂಗಳೂರಿಗೆ ಮಹಾ ಜಲಕಂಟಕ ಎದುರಾಗುತ್ತಿದೆ. ಸ್ವಲ್ಪ ಮಳೆಯಾದ್ರೂ ಸಾಕು  ಬೆಂಗಳೂರು ಮುಳುಗಿ ಹೋಗುತ್ತಿದೆ. ರಾಜಧಾನಿಗೆ ಎದುರಾಗಿದ್ದೇಕೆ ಇಂಥಾ ದುಸ್ಥಿತಿ? ಇದು ಟ್ರೈಲರ್, ಮುಂದೆ ಕಾದಿದೆ ಅಸಲಿ ಸಿನಿಮಾ ಅಂತ ವಾರ್ನಿಗ್ ಕೊಟ್ಟನಾ ವರುಣದೇವ? ಈ ಎಲ್ಲಾ ಪ್ರಶ್ನೆಗಳಿಗೆ ಉತ್ತರವೇ ಇವತ್ತಿನ ಸುವರ್ಣ ಫೋಕಸ್, ಜಲಸಮಾಧಿ ರಹಸ್ಯ

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more