Bengaluru Rain Updates: ಮಹಾಮಳೆಗೆ ಕಳಚಿತು ಮಹಾನಗರದ ಅಸಲಿ ಮುಖ!

Bengaluru Rain Updates: ಮಹಾಮಳೆಗೆ ಕಳಚಿತು ಮಹಾನಗರದ ಅಸಲಿ ಮುಖ!

Published : Sep 06, 2022, 06:15 PM IST

Bengaluru Rain Updates: ರಾಜಧಾನಿ ಬೆಂಗಳೂರಿನಲ್ಲಿ ಅಬ್ಬರಿಸುತ್ತಿರುವ ವರುಣನ ಆರ್ಭಟಕ್ಕೆ ಜನರು ಅಕ್ಷರಶಃ ತತ್ತರಿಸಿ ಹೋಗಿದ್ದಾರೆ
 

ಬೆಂಗಳೂರು (ಸೆ. 06):  ರಾಜಧಾನಿ ಬೆಂಗಳೂರಿನಲ್ಲಿ (Bengaluru) ಅಬ್ಬರಿಸುತ್ತಿರುವ ವರುಣನ ಆರ್ಭಟಕ್ಕೆ ಜನರು ಅಕ್ಷರಶಃ ತತ್ತರಿಸಿ ಹೋಗಿದ್ದಾರೆ. ಪಾಲಿಕೆ ವ್ಯಾಪ್ತಿಯ 160ಕ್ಕೂ ಹೆಚ್ಚು ಕೆರೆಗಳು ತುಂಬಿ ಕೋಡಿ ಬಿದ್ದಿದ್ದು ಮಹದೇವಪುರ, ಬೊಮ್ಮನಹಳ್ಳಿ, ಪೂರ್ವ ವಲಯದ ಅನೇಕ ಜನವಸತಿ ಪ್ರದೇಶಗಳು ಮುಳುಗಡೆಯಾಗಿವೆ. ಮಳೆ ಜನಜೀವನವನ್ನಷ್ಟೇ ಅಲ್ಲಲ್ಲೇ ಐಟಿ ಹಬ್‌ (IT Hub)ಎಂದೇ ಪರಿಗಣಿಸಲಾಗಿರುವ ಪ್ರದೇಶಗಳು ಜಲಾವೃತಗೊಂಡು ಕೋಟ್ಯಾಂತರ ರು. ನಷ್ಟ ಸಂಭವಿಸಿದೆ. 

ಬೆಳ್ಳಂದೂರು, ವರ್ತೂರು, ವಿಭೂತಿಪುರ, ಕನ್ಹಹಳ್ಳಿ, ಸವಳುಕೆರೆ, ಬೇಗೂರು ಕೆರೆ, ಯಲಹಂಕ ಕೆರೆ, ದೊರೆ ಕೆರೆ, ಜಕ್ಕೂರು ಕೆರೆ ಸೇರಿದಂತೆ 160ಕ್ಕೂ ಹೆಚ್ಚು ಕೆರೆಗಳು ಇದೇ ಮೊದಲ ಬಾರಿಗೆ ಏಕಕಾಲದಲ್ಲಿ ಭರ್ತಿಯಾಗಿವೆ. ಇವುಗಳಲ್ಲಿ ಬಹುತೇಕ ಕೆರೆಗಳು ಕೋಡಿ ಬಿದ್ದಿದ್ದು, ಹೊರ ಹರಿವು ಹೆಚ್ಚಾಗಿದೆ. ಜೊತೆಗೆ ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ರಾಜಕಾಲುವೆಗಳು ಕೂಡ ತುಂಬಿ ಹರಿಯುತ್ತಿವೆ. ಪರಿಣಾಮ ಕೆಲವು ಬಡಾವಣೆಗಳು ಜಲಾವೃತಗೊಂಡಿದ್ದರೆ, ಹಲವು ಮನೆಗಳಿಗೆ ನೀರು ನುಗ್ಗಿ ಸಂಕಷ್ಟತಂದೊಡ್ಡಿದೆ. 

Bengaluru Rain: ರೈನ್‌ಕೋಟು ಧರಿಸಿ ನಾಯಿಮರಿ ವಾಕಿಂಗ್ ವೀಡಿಯೋ ವೈರಲ್

ಮಳೆಗೆ ಬೆಳಂದೂರಿನ ಮುನೇನಕೊಳಲಿನ ತಗ್ಗು ಪ್ರದೇಶವೊಂದರಲ್ಲೇ 1500ಕ್ಕೂ ಹೆಚ್ಚು ಮನೆಗಳು ಜಲಾವೃತಗೊಂಡಿವೆ. ಮಳೆಯಾದಾಗಲೆಲ್ಲಾ ಬೆಂಗಳೂರಿಗೆ ಮಹಾ ಜಲಕಂಟಕ ಎದುರಾಗುತ್ತಿದೆ. ಸ್ವಲ್ಪ ಮಳೆಯಾದ್ರೂ ಸಾಕು  ಬೆಂಗಳೂರು ಮುಳುಗಿ ಹೋಗುತ್ತಿದೆ. ರಾಜಧಾನಿಗೆ ಎದುರಾಗಿದ್ದೇಕೆ ಇಂಥಾ ದುಸ್ಥಿತಿ? ಇದು ಟ್ರೈಲರ್, ಮುಂದೆ ಕಾದಿದೆ ಅಸಲಿ ಸಿನಿಮಾ ಅಂತ ವಾರ್ನಿಗ್ ಕೊಟ್ಟನಾ ವರುಣದೇವ? ಈ ಎಲ್ಲಾ ಪ್ರಶ್ನೆಗಳಿಗೆ ಉತ್ತರವೇ ಇವತ್ತಿನ ಸುವರ್ಣ ಫೋಕಸ್, ಜಲಸಮಾಧಿ ರಹಸ್ಯ

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
Read more