Bengaluru Rain Updates: ಮಹಾಮಳೆಗೆ ಕಳಚಿತು ಮಹಾನಗರದ ಅಸಲಿ ಮುಖ!

Bengaluru Rain Updates: ಮಹಾಮಳೆಗೆ ಕಳಚಿತು ಮಹಾನಗರದ ಅಸಲಿ ಮುಖ!

Published : Sep 06, 2022, 06:15 PM IST

Bengaluru Rain Updates: ರಾಜಧಾನಿ ಬೆಂಗಳೂರಿನಲ್ಲಿ ಅಬ್ಬರಿಸುತ್ತಿರುವ ವರುಣನ ಆರ್ಭಟಕ್ಕೆ ಜನರು ಅಕ್ಷರಶಃ ತತ್ತರಿಸಿ ಹೋಗಿದ್ದಾರೆ
 

ಬೆಂಗಳೂರು (ಸೆ. 06):  ರಾಜಧಾನಿ ಬೆಂಗಳೂರಿನಲ್ಲಿ (Bengaluru) ಅಬ್ಬರಿಸುತ್ತಿರುವ ವರುಣನ ಆರ್ಭಟಕ್ಕೆ ಜನರು ಅಕ್ಷರಶಃ ತತ್ತರಿಸಿ ಹೋಗಿದ್ದಾರೆ. ಪಾಲಿಕೆ ವ್ಯಾಪ್ತಿಯ 160ಕ್ಕೂ ಹೆಚ್ಚು ಕೆರೆಗಳು ತುಂಬಿ ಕೋಡಿ ಬಿದ್ದಿದ್ದು ಮಹದೇವಪುರ, ಬೊಮ್ಮನಹಳ್ಳಿ, ಪೂರ್ವ ವಲಯದ ಅನೇಕ ಜನವಸತಿ ಪ್ರದೇಶಗಳು ಮುಳುಗಡೆಯಾಗಿವೆ. ಮಳೆ ಜನಜೀವನವನ್ನಷ್ಟೇ ಅಲ್ಲಲ್ಲೇ ಐಟಿ ಹಬ್‌ (IT Hub)ಎಂದೇ ಪರಿಗಣಿಸಲಾಗಿರುವ ಪ್ರದೇಶಗಳು ಜಲಾವೃತಗೊಂಡು ಕೋಟ್ಯಾಂತರ ರು. ನಷ್ಟ ಸಂಭವಿಸಿದೆ. 

ಬೆಳ್ಳಂದೂರು, ವರ್ತೂರು, ವಿಭೂತಿಪುರ, ಕನ್ಹಹಳ್ಳಿ, ಸವಳುಕೆರೆ, ಬೇಗೂರು ಕೆರೆ, ಯಲಹಂಕ ಕೆರೆ, ದೊರೆ ಕೆರೆ, ಜಕ್ಕೂರು ಕೆರೆ ಸೇರಿದಂತೆ 160ಕ್ಕೂ ಹೆಚ್ಚು ಕೆರೆಗಳು ಇದೇ ಮೊದಲ ಬಾರಿಗೆ ಏಕಕಾಲದಲ್ಲಿ ಭರ್ತಿಯಾಗಿವೆ. ಇವುಗಳಲ್ಲಿ ಬಹುತೇಕ ಕೆರೆಗಳು ಕೋಡಿ ಬಿದ್ದಿದ್ದು, ಹೊರ ಹರಿವು ಹೆಚ್ಚಾಗಿದೆ. ಜೊತೆಗೆ ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ರಾಜಕಾಲುವೆಗಳು ಕೂಡ ತುಂಬಿ ಹರಿಯುತ್ತಿವೆ. ಪರಿಣಾಮ ಕೆಲವು ಬಡಾವಣೆಗಳು ಜಲಾವೃತಗೊಂಡಿದ್ದರೆ, ಹಲವು ಮನೆಗಳಿಗೆ ನೀರು ನುಗ್ಗಿ ಸಂಕಷ್ಟತಂದೊಡ್ಡಿದೆ. 

Bengaluru Rain: ರೈನ್‌ಕೋಟು ಧರಿಸಿ ನಾಯಿಮರಿ ವಾಕಿಂಗ್ ವೀಡಿಯೋ ವೈರಲ್

ಮಳೆಗೆ ಬೆಳಂದೂರಿನ ಮುನೇನಕೊಳಲಿನ ತಗ್ಗು ಪ್ರದೇಶವೊಂದರಲ್ಲೇ 1500ಕ್ಕೂ ಹೆಚ್ಚು ಮನೆಗಳು ಜಲಾವೃತಗೊಂಡಿವೆ. ಮಳೆಯಾದಾಗಲೆಲ್ಲಾ ಬೆಂಗಳೂರಿಗೆ ಮಹಾ ಜಲಕಂಟಕ ಎದುರಾಗುತ್ತಿದೆ. ಸ್ವಲ್ಪ ಮಳೆಯಾದ್ರೂ ಸಾಕು  ಬೆಂಗಳೂರು ಮುಳುಗಿ ಹೋಗುತ್ತಿದೆ. ರಾಜಧಾನಿಗೆ ಎದುರಾಗಿದ್ದೇಕೆ ಇಂಥಾ ದುಸ್ಥಿತಿ? ಇದು ಟ್ರೈಲರ್, ಮುಂದೆ ಕಾದಿದೆ ಅಸಲಿ ಸಿನಿಮಾ ಅಂತ ವಾರ್ನಿಗ್ ಕೊಟ್ಟನಾ ವರುಣದೇವ? ಈ ಎಲ್ಲಾ ಪ್ರಶ್ನೆಗಳಿಗೆ ಉತ್ತರವೇ ಇವತ್ತಿನ ಸುವರ್ಣ ಫೋಕಸ್, ಜಲಸಮಾಧಿ ರಹಸ್ಯ

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
Read more