ಶ್ವೇತಾ ಗೌಡ ಬಂಧನ: ವರ್ತೂರು ಪ್ರಕಾಶ್ ಹೇಳಿದ್ದೇನು?

ಶ್ವೇತಾ ಗೌಡ ಬಂಧನ: ವರ್ತೂರು ಪ್ರಕಾಶ್ ಹೇಳಿದ್ದೇನು?

Published : Dec 22, 2024, 08:55 PM IST

ಸಮಾಜ ಸೇವಕಿ ಎಂದು ಪರಿಚಯ ಮಾಡಿಕೊಂಡಿದ್ದ ಶ್ವೇತಾಗೌಡ, ಗೋಲ್ಡ್ ಬಿಜಿನೆಸ್ ಕೇಸಿನಲ್ಲಿ ವರ್ತೂರು ಪ್ರಕಾಶ್ ಹೆಸರು ಹೇಳಿದ್ದಾರೆ. ಕಳೆದ ನಾಲ್ಕು ತಿಂಗಳ ಹಿಂದೆ ಪರಿಚಯವಾಗಿದ್ದ ಶ್ವೇತಾ, ಒಡವೆ ಖರೀದಿ ಬಗ್ಗೆ ಪ್ರಸ್ತಾಪ ಮಾಡಿರಲಿಲ್ಲ ಎಂದು ಪ್ರಕಾಶ್ ಸ್ಪಷ್ಟಪಡಿಸಿದ್ದಾರೆ. ಪೊಲೀಸರಿಂದ ಮಾಹಿತಿ ಬಂದ ಬಳಿಕವಷ್ಟೇ ಈ ವಿಚಾರ ತಿಳಿದುಬಂದಿದೆ ಎಂದು ಪ್ರಕಾಶ್ ಹೇಳಿದ್ದಾರೆ.

ಬೆಂಗಳೂರು (ಡಿ.22): ಶ್ವೇತಾಗೌಡ ಬಂಧನದ ಬಗ್ಗೆ ನನಗೆ ನಿನ್ನೆಯೇ ಪೊಲೀಸ್ ಠಾಣೆಯಿಂದ ಮಾಹಿತಿ ಬಂದಿದೆ. ಶ್ವೇತಾ ನನಗೆ ಪರಿಚಯ ಆಗಿದ್ದೇ ಕಳೆದ ನಾಲ್ಕು ತಿಂಗಳ ಹಿಂದೆ. ಸಮಾಜ ಸೇವಕಿ ಎಂದು ಪರಿಚಯ ಮಾಡಿಕೊಂಡಿದ್ದು, ಇದೀಗ ಗೋಲ್ಡ್ ಬಿಜಿನೆಸ್ ಕೇಸಿನಲ್ಲಿ ನನ್ನ ಹೆಸರು ಹೇಳಿದ್ದಾಳೆ ಎಂದು ಸ್ವತಃ ವರ್ತೂರು ಪ್ರಕಾಶ್ ಹೇಳಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ವರ್ತೂರ್ ಪ್ರಕಾಶ್ ಅವರು, ನನಗೆ ನಿನ್ನೆ ಸ್ಟೇಷನ್ ನಿಂದ ಮಾಹಿತಿ ಬಂತು. ಮೂರು ನಾಲ್ಕು ತಿಂಗಳ ಮುಂಚೆ ನಮ್ಮ ಮನೆಗೆ ಬಂದಿದ್ದರು. ಸಮಾಜಸೇವಕಿ ಅಂತ ಪರಿಚಯ ಮಾಡಿಕೊಂಡರು. ಆಕೆಯೂ ನನಗೆ ತಿಳಿಸಿ ಒಡವೆ ಖರೀದಿಸಿಲ್ಲ. ಜ್ಯುವೆಲ್ಲರಿ ಮಾಲೀಕರು ನನಗೆ ತಿಳಿಸಿಲ್ಲ. ದೂರು ನೀಡಿರುವ ವಿಚಾರ ಒಡವೆ ಅಂಗಡಿಯವರು ತಿಳಿಸಿದ್ದಾರೆ. ಆಕೆಯ ಬಿಜಿನೆಸ್ ಬಂಗಾರದ ಬಗ್ಗೆ ನನ್ನ ಬಳಿ ಪ್ರಸ್ತಾಪ ಮಾಡಿಯೇ ಇಲ್ಲ ಎಂದು ಹೇಳಿದರು.

ಇನ್ನು ಈ ವಿಚಾರ ನನಗೂ ನಿನ್ನೆಯೇ ಗೊತ್ತಾಗಿದ್ದು. ಮನೆ ಹತ್ತಿರ ಜನ ಬಂದ ಹಾಗೇ ಆಕೆ ಕೂಡ ಬಂದಿದ್ದಾಳೆ ಅಷ್ಟೇ. ನನಗೆ ಪೊಲೀಸರು ಪೋನಿನಲ್ಲಿ ಹೇಳಿದ್ದಾರೆ. ನಾನು ಸೋಮವಾರ ವಿಚಾರಣೆಗೆ ಹೋಗುತ್ತೇನೆ ಎಂದು ಮಾಧ್ಯಮಗಳಿಗೆ ತಿಳಿಸಿದರು.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more