ಶ್ವೇತಾ ಗೌಡ ಬಂಧನ: ವರ್ತೂರು ಪ್ರಕಾಶ್ ಹೇಳಿದ್ದೇನು?

ಶ್ವೇತಾ ಗೌಡ ಬಂಧನ: ವರ್ತೂರು ಪ್ರಕಾಶ್ ಹೇಳಿದ್ದೇನು?

Published : Dec 22, 2024, 08:55 PM IST

ಸಮಾಜ ಸೇವಕಿ ಎಂದು ಪರಿಚಯ ಮಾಡಿಕೊಂಡಿದ್ದ ಶ್ವೇತಾಗೌಡ, ಗೋಲ್ಡ್ ಬಿಜಿನೆಸ್ ಕೇಸಿನಲ್ಲಿ ವರ್ತೂರು ಪ್ರಕಾಶ್ ಹೆಸರು ಹೇಳಿದ್ದಾರೆ. ಕಳೆದ ನಾಲ್ಕು ತಿಂಗಳ ಹಿಂದೆ ಪರಿಚಯವಾಗಿದ್ದ ಶ್ವೇತಾ, ಒಡವೆ ಖರೀದಿ ಬಗ್ಗೆ ಪ್ರಸ್ತಾಪ ಮಾಡಿರಲಿಲ್ಲ ಎಂದು ಪ್ರಕಾಶ್ ಸ್ಪಷ್ಟಪಡಿಸಿದ್ದಾರೆ. ಪೊಲೀಸರಿಂದ ಮಾಹಿತಿ ಬಂದ ಬಳಿಕವಷ್ಟೇ ಈ ವಿಚಾರ ತಿಳಿದುಬಂದಿದೆ ಎಂದು ಪ್ರಕಾಶ್ ಹೇಳಿದ್ದಾರೆ.

ಬೆಂಗಳೂರು (ಡಿ.22): ಶ್ವೇತಾಗೌಡ ಬಂಧನದ ಬಗ್ಗೆ ನನಗೆ ನಿನ್ನೆಯೇ ಪೊಲೀಸ್ ಠಾಣೆಯಿಂದ ಮಾಹಿತಿ ಬಂದಿದೆ. ಶ್ವೇತಾ ನನಗೆ ಪರಿಚಯ ಆಗಿದ್ದೇ ಕಳೆದ ನಾಲ್ಕು ತಿಂಗಳ ಹಿಂದೆ. ಸಮಾಜ ಸೇವಕಿ ಎಂದು ಪರಿಚಯ ಮಾಡಿಕೊಂಡಿದ್ದು, ಇದೀಗ ಗೋಲ್ಡ್ ಬಿಜಿನೆಸ್ ಕೇಸಿನಲ್ಲಿ ನನ್ನ ಹೆಸರು ಹೇಳಿದ್ದಾಳೆ ಎಂದು ಸ್ವತಃ ವರ್ತೂರು ಪ್ರಕಾಶ್ ಹೇಳಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ವರ್ತೂರ್ ಪ್ರಕಾಶ್ ಅವರು, ನನಗೆ ನಿನ್ನೆ ಸ್ಟೇಷನ್ ನಿಂದ ಮಾಹಿತಿ ಬಂತು. ಮೂರು ನಾಲ್ಕು ತಿಂಗಳ ಮುಂಚೆ ನಮ್ಮ ಮನೆಗೆ ಬಂದಿದ್ದರು. ಸಮಾಜಸೇವಕಿ ಅಂತ ಪರಿಚಯ ಮಾಡಿಕೊಂಡರು. ಆಕೆಯೂ ನನಗೆ ತಿಳಿಸಿ ಒಡವೆ ಖರೀದಿಸಿಲ್ಲ. ಜ್ಯುವೆಲ್ಲರಿ ಮಾಲೀಕರು ನನಗೆ ತಿಳಿಸಿಲ್ಲ. ದೂರು ನೀಡಿರುವ ವಿಚಾರ ಒಡವೆ ಅಂಗಡಿಯವರು ತಿಳಿಸಿದ್ದಾರೆ. ಆಕೆಯ ಬಿಜಿನೆಸ್ ಬಂಗಾರದ ಬಗ್ಗೆ ನನ್ನ ಬಳಿ ಪ್ರಸ್ತಾಪ ಮಾಡಿಯೇ ಇಲ್ಲ ಎಂದು ಹೇಳಿದರು.

ಇನ್ನು ಈ ವಿಚಾರ ನನಗೂ ನಿನ್ನೆಯೇ ಗೊತ್ತಾಗಿದ್ದು. ಮನೆ ಹತ್ತಿರ ಜನ ಬಂದ ಹಾಗೇ ಆಕೆ ಕೂಡ ಬಂದಿದ್ದಾಳೆ ಅಷ್ಟೇ. ನನಗೆ ಪೊಲೀಸರು ಪೋನಿನಲ್ಲಿ ಹೇಳಿದ್ದಾರೆ. ನಾನು ಸೋಮವಾರ ವಿಚಾರಣೆಗೆ ಹೋಗುತ್ತೇನೆ ಎಂದು ಮಾಧ್ಯಮಗಳಿಗೆ ತಿಳಿಸಿದರು.

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more