Bengaluru: ಟ್ರಾಫಿಕ್‌ ಪೊಲೀಸರ ಶ್ರಮದಾನ, ವಾಹನ ಸವಾರರಿಗೆ ವರದಾನ!

Bengaluru: ಟ್ರಾಫಿಕ್‌ ಪೊಲೀಸರ ಶ್ರಮದಾನ, ವಾಹನ ಸವಾರರಿಗೆ ವರದಾನ!

Published : Jul 17, 2023, 08:31 PM IST

ಬೆಂಗಳೂರಿನ ಸಂಚಾರಿ ವಿಭಾಗದ ಪೊಲೀಸರು ಕಬ್ಬನ್‌ ಪಾರ್ಕ್‌ ಬಳಿ ಬಿದ್ದ ರಸ್ತೆಗುಂಡಿಯನ್ನು ತಾವೇ ಜಲ್ಲಿಕಲ್ಲು, ಮರಳು ಮಿಶ್ರಣ ಮಾಡಿ ಮುಚ್ಚಿದ್ದಾರೆ.

ಬೆಂಗಳೂರು (ಜು.17): ಬೆಂಗಳೂರಿನಲ್ಲಿ ಇನ್ನೇನು ಮಳೆಗಾಲ ಆರಂಭವಾಗಿದ್ದು, ರಸ್ತೆಗುಂಡಿಗಳ ಹಾವಳಿಯೂ ಹೆಚ್ಚಾಗಲಿದೆ. ಈಗಾಗಲೇ ಬೆಂಗಳೂರಿನ ವಿವಿಧ ರಸ್ತೆಗಳಲ್ಲಿ ರಸ್ತೆ ಗುಂಡಿಗಳು ಬಾಯಿತೆರೆದುಕೊಂಡಿದ್ದು, ಬಿಬಿಎಂಪಿ ಅಧಿಕಾರಿಗಳ ನಿರ್ಲಕ್ಷ್ಯತನ ಮತ್ತೆ ಮುಂದುವರೆದಿದೆ. ಹೀಗಾಗಿ, ಕಬ್ಬನ್‌ ಪಾರ್ಕ್‌ನ ಪ್ರೆಸ್‌ಕ್ಲಬ್‌ ಬಳಿಯ ಸರ್ಕಲ್‌ನಲ್ಲಿ ಉಂಟಾಗಿದ್ದ ಸುಮಾರು 6 ಮೀಟರ್‌ ಉದ್ದದ ರಸ್ತೆ ಗುಂಡಿಯನ್ನು ಟ್ರಾಫಿಕ್‌ ಪೊಲೀಸರೇ ಕಾಂಕ್ರೀಟ್‌ ಹಾಕಿ ಮುಚ್ಚುವ ಮೂಲಕ ವಾಹನ ಸವಾರರಿಗೆ ಸುರಕ್ಷಿತ ಸಂಚಾರಕ್ಕೆ ನೆರವಾಗಿದ್ದಾರೆ. ಗುಂಡಿ ಬಿದ್ದ ರಸ್ತೆಗೆ ಟ್ರಾಫಿಕ್ ಪೋಲಿಸರು ಕಾಂಕ್ರೀಟ್ ಹಾಕಿಸಿದ್ದಾರೆ.

ಕಬ್ಬನ್ ಪಾರ್ಕ್ ಟ್ರಾಫಿಕ್ ‌ಪೋಲಿಸರಿಂದ ಗುಂಡಿ ಮುಚ್ಚುವ ಕಾರ್ಯ ಮಾಡಲಾಗಿದೆ. ವಾಹನಗಳ ‌ಸಂಚಾರಕ್ಕೆ ತೊಂದರೆಯಾಗುತ್ತಿದ್ದ ಹಿನ್ನೆಲೆಯಲ್ಲಿ ಪೊಲೀಸರು ಸ್ವತಃ ತಾವೇ ಸಿಮೆಂಟ್, ಜೆಲ್ಲಿ ಮಿಕ್ಸ್ ಮಾಡಿ ರಸ್ತೆ ಗುಂಡಿಯನ್ನು ಮುಚ್ಚಿದ್ದಾರೆ. ಪ್ರತಿನಿತ್ಯ ನೂರಾರು ವಾಹನಗಳು ಈ ರಸ್ತೆಯಲ್ಲಿ  ಸಂಚಾರ ಮಾಡುತ್ತವೆ. ವಾಹನ ಸಂಚಾರಕ್ಕೆ ಸಮಸ್ಯೆ ಆಗುತ್ತಿದ್ದು, ಬಿಬಿಎಂಪಿ ಅಧಿಕಾರಿಗಳಿಗೆ ಮಾಹಿತಿ ನೀಡಿದರೂ ರಸ್ತೆ ಗುಂಡಿ ಮುಚ್ಚಿರಲಿಲ್ಲ. ಆದ್ದರಿಂದ ವಾಹನ ಸವಾರರ ಸಂಕಷ್ಟ ನೋಡಲಾರದೇ ಪೊಲೀಸರೇ ಶ್ರಮದಾನದ ಮೂಲಕ ರಸ್ತೆ ಗುಂಡಿ ಮುಚ್ಚಿ ಮಾದರಿ ಆಗಿದ್ದಾರೆ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more