Bengaluru: ಟ್ರಾಫಿಕ್‌ ಪೊಲೀಸರ ಶ್ರಮದಾನ, ವಾಹನ ಸವಾರರಿಗೆ ವರದಾನ!

Bengaluru: ಟ್ರಾಫಿಕ್‌ ಪೊಲೀಸರ ಶ್ರಮದಾನ, ವಾಹನ ಸವಾರರಿಗೆ ವರದಾನ!

Published : Jul 17, 2023, 08:31 PM IST

ಬೆಂಗಳೂರಿನ ಸಂಚಾರಿ ವಿಭಾಗದ ಪೊಲೀಸರು ಕಬ್ಬನ್‌ ಪಾರ್ಕ್‌ ಬಳಿ ಬಿದ್ದ ರಸ್ತೆಗುಂಡಿಯನ್ನು ತಾವೇ ಜಲ್ಲಿಕಲ್ಲು, ಮರಳು ಮಿಶ್ರಣ ಮಾಡಿ ಮುಚ್ಚಿದ್ದಾರೆ.

ಬೆಂಗಳೂರು (ಜು.17): ಬೆಂಗಳೂರಿನಲ್ಲಿ ಇನ್ನೇನು ಮಳೆಗಾಲ ಆರಂಭವಾಗಿದ್ದು, ರಸ್ತೆಗುಂಡಿಗಳ ಹಾವಳಿಯೂ ಹೆಚ್ಚಾಗಲಿದೆ. ಈಗಾಗಲೇ ಬೆಂಗಳೂರಿನ ವಿವಿಧ ರಸ್ತೆಗಳಲ್ಲಿ ರಸ್ತೆ ಗುಂಡಿಗಳು ಬಾಯಿತೆರೆದುಕೊಂಡಿದ್ದು, ಬಿಬಿಎಂಪಿ ಅಧಿಕಾರಿಗಳ ನಿರ್ಲಕ್ಷ್ಯತನ ಮತ್ತೆ ಮುಂದುವರೆದಿದೆ. ಹೀಗಾಗಿ, ಕಬ್ಬನ್‌ ಪಾರ್ಕ್‌ನ ಪ್ರೆಸ್‌ಕ್ಲಬ್‌ ಬಳಿಯ ಸರ್ಕಲ್‌ನಲ್ಲಿ ಉಂಟಾಗಿದ್ದ ಸುಮಾರು 6 ಮೀಟರ್‌ ಉದ್ದದ ರಸ್ತೆ ಗುಂಡಿಯನ್ನು ಟ್ರಾಫಿಕ್‌ ಪೊಲೀಸರೇ ಕಾಂಕ್ರೀಟ್‌ ಹಾಕಿ ಮುಚ್ಚುವ ಮೂಲಕ ವಾಹನ ಸವಾರರಿಗೆ ಸುರಕ್ಷಿತ ಸಂಚಾರಕ್ಕೆ ನೆರವಾಗಿದ್ದಾರೆ. ಗುಂಡಿ ಬಿದ್ದ ರಸ್ತೆಗೆ ಟ್ರಾಫಿಕ್ ಪೋಲಿಸರು ಕಾಂಕ್ರೀಟ್ ಹಾಕಿಸಿದ್ದಾರೆ.

ಕಬ್ಬನ್ ಪಾರ್ಕ್ ಟ್ರಾಫಿಕ್ ‌ಪೋಲಿಸರಿಂದ ಗುಂಡಿ ಮುಚ್ಚುವ ಕಾರ್ಯ ಮಾಡಲಾಗಿದೆ. ವಾಹನಗಳ ‌ಸಂಚಾರಕ್ಕೆ ತೊಂದರೆಯಾಗುತ್ತಿದ್ದ ಹಿನ್ನೆಲೆಯಲ್ಲಿ ಪೊಲೀಸರು ಸ್ವತಃ ತಾವೇ ಸಿಮೆಂಟ್, ಜೆಲ್ಲಿ ಮಿಕ್ಸ್ ಮಾಡಿ ರಸ್ತೆ ಗುಂಡಿಯನ್ನು ಮುಚ್ಚಿದ್ದಾರೆ. ಪ್ರತಿನಿತ್ಯ ನೂರಾರು ವಾಹನಗಳು ಈ ರಸ್ತೆಯಲ್ಲಿ  ಸಂಚಾರ ಮಾಡುತ್ತವೆ. ವಾಹನ ಸಂಚಾರಕ್ಕೆ ಸಮಸ್ಯೆ ಆಗುತ್ತಿದ್ದು, ಬಿಬಿಎಂಪಿ ಅಧಿಕಾರಿಗಳಿಗೆ ಮಾಹಿತಿ ನೀಡಿದರೂ ರಸ್ತೆ ಗುಂಡಿ ಮುಚ್ಚಿರಲಿಲ್ಲ. ಆದ್ದರಿಂದ ವಾಹನ ಸವಾರರ ಸಂಕಷ್ಟ ನೋಡಲಾರದೇ ಪೊಲೀಸರೇ ಶ್ರಮದಾನದ ಮೂಲಕ ರಸ್ತೆ ಗುಂಡಿ ಮುಚ್ಚಿ ಮಾದರಿ ಆಗಿದ್ದಾರೆ.

23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
Read more