Bengaluru: ಟ್ರಾಫಿಕ್‌ ಪೊಲೀಸರ ಶ್ರಮದಾನ, ವಾಹನ ಸವಾರರಿಗೆ ವರದಾನ!

Bengaluru: ಟ್ರಾಫಿಕ್‌ ಪೊಲೀಸರ ಶ್ರಮದಾನ, ವಾಹನ ಸವಾರರಿಗೆ ವರದಾನ!

Published : Jul 17, 2023, 08:31 PM IST

ಬೆಂಗಳೂರಿನ ಸಂಚಾರಿ ವಿಭಾಗದ ಪೊಲೀಸರು ಕಬ್ಬನ್‌ ಪಾರ್ಕ್‌ ಬಳಿ ಬಿದ್ದ ರಸ್ತೆಗುಂಡಿಯನ್ನು ತಾವೇ ಜಲ್ಲಿಕಲ್ಲು, ಮರಳು ಮಿಶ್ರಣ ಮಾಡಿ ಮುಚ್ಚಿದ್ದಾರೆ.

ಬೆಂಗಳೂರು (ಜು.17): ಬೆಂಗಳೂರಿನಲ್ಲಿ ಇನ್ನೇನು ಮಳೆಗಾಲ ಆರಂಭವಾಗಿದ್ದು, ರಸ್ತೆಗುಂಡಿಗಳ ಹಾವಳಿಯೂ ಹೆಚ್ಚಾಗಲಿದೆ. ಈಗಾಗಲೇ ಬೆಂಗಳೂರಿನ ವಿವಿಧ ರಸ್ತೆಗಳಲ್ಲಿ ರಸ್ತೆ ಗುಂಡಿಗಳು ಬಾಯಿತೆರೆದುಕೊಂಡಿದ್ದು, ಬಿಬಿಎಂಪಿ ಅಧಿಕಾರಿಗಳ ನಿರ್ಲಕ್ಷ್ಯತನ ಮತ್ತೆ ಮುಂದುವರೆದಿದೆ. ಹೀಗಾಗಿ, ಕಬ್ಬನ್‌ ಪಾರ್ಕ್‌ನ ಪ್ರೆಸ್‌ಕ್ಲಬ್‌ ಬಳಿಯ ಸರ್ಕಲ್‌ನಲ್ಲಿ ಉಂಟಾಗಿದ್ದ ಸುಮಾರು 6 ಮೀಟರ್‌ ಉದ್ದದ ರಸ್ತೆ ಗುಂಡಿಯನ್ನು ಟ್ರಾಫಿಕ್‌ ಪೊಲೀಸರೇ ಕಾಂಕ್ರೀಟ್‌ ಹಾಕಿ ಮುಚ್ಚುವ ಮೂಲಕ ವಾಹನ ಸವಾರರಿಗೆ ಸುರಕ್ಷಿತ ಸಂಚಾರಕ್ಕೆ ನೆರವಾಗಿದ್ದಾರೆ. ಗುಂಡಿ ಬಿದ್ದ ರಸ್ತೆಗೆ ಟ್ರಾಫಿಕ್ ಪೋಲಿಸರು ಕಾಂಕ್ರೀಟ್ ಹಾಕಿಸಿದ್ದಾರೆ.

ಕಬ್ಬನ್ ಪಾರ್ಕ್ ಟ್ರಾಫಿಕ್ ‌ಪೋಲಿಸರಿಂದ ಗುಂಡಿ ಮುಚ್ಚುವ ಕಾರ್ಯ ಮಾಡಲಾಗಿದೆ. ವಾಹನಗಳ ‌ಸಂಚಾರಕ್ಕೆ ತೊಂದರೆಯಾಗುತ್ತಿದ್ದ ಹಿನ್ನೆಲೆಯಲ್ಲಿ ಪೊಲೀಸರು ಸ್ವತಃ ತಾವೇ ಸಿಮೆಂಟ್, ಜೆಲ್ಲಿ ಮಿಕ್ಸ್ ಮಾಡಿ ರಸ್ತೆ ಗುಂಡಿಯನ್ನು ಮುಚ್ಚಿದ್ದಾರೆ. ಪ್ರತಿನಿತ್ಯ ನೂರಾರು ವಾಹನಗಳು ಈ ರಸ್ತೆಯಲ್ಲಿ  ಸಂಚಾರ ಮಾಡುತ್ತವೆ. ವಾಹನ ಸಂಚಾರಕ್ಕೆ ಸಮಸ್ಯೆ ಆಗುತ್ತಿದ್ದು, ಬಿಬಿಎಂಪಿ ಅಧಿಕಾರಿಗಳಿಗೆ ಮಾಹಿತಿ ನೀಡಿದರೂ ರಸ್ತೆ ಗುಂಡಿ ಮುಚ್ಚಿರಲಿಲ್ಲ. ಆದ್ದರಿಂದ ವಾಹನ ಸವಾರರ ಸಂಕಷ್ಟ ನೋಡಲಾರದೇ ಪೊಲೀಸರೇ ಶ್ರಮದಾನದ ಮೂಲಕ ರಸ್ತೆ ಗುಂಡಿ ಮುಚ್ಚಿ ಮಾದರಿ ಆಗಿದ್ದಾರೆ.

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
Read more