ಕಾಮಗಾರಿ ನೆಪದಲ್ಲಿ ಕೋಟಿ ಕೋಟಿ ಖರ್ಚು? ಹಣ ಹೊಡೆಯಲು ಮುಂದಾದ್ರ ವಿವಿ ಕುಲಪತಿ?

ಕಾಮಗಾರಿ ನೆಪದಲ್ಲಿ ಕೋಟಿ ಕೋಟಿ ಖರ್ಚು? ಹಣ ಹೊಡೆಯಲು ಮುಂದಾದ್ರ ವಿವಿ ಕುಲಪತಿ?

Published : Nov 17, 2023, 10:49 AM IST

ಸ್ಕಾಲರ್ ಶಿಪ್, ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಹಾಸಿಗೆ, ದಿಂಬು ಕೊಡಲು ವಿವಿಯಲ್ಲಿ ಹಣ ಇಲ್ಲ ಅಂತಾರೆ. ಆದ್ರೆ ವಿಸಿ ಕೊಠಡಿಯನ್ನ ಹೈಟೆಕ್ ಮರು ನವೀಕರಣಕ್ಕೆ ‌ಕೋಟಿ ಕೋಟಿ ಹಣ ಖರ್ಚು ಮಾಡುತ್ತಿದೆ. ವಿವಿ ಕುಲಪತಿ ವಿರುದ್ಧ ಕಾಲೇಜು ವಿದ್ಯಾರ್ಥಿಗಳು ಆಕ್ರೋಶ ಹೊರಹಾಕುತ್ತಿದ್ದಾರೆ.
 

ಜ್ಞಾನಭಾರತಿಯಲ್ಲಿರುವ ಬೆಂಗಳೂರು ವಿಶ್ವವಿದ್ಯಾಲಯ(Bangalore University) ಸದಾ ಒಂದಲ್ಲ ಒಂದು ವಿಚಾರದಲ್ಲಿ ಸುದ್ದಿಯಲ್ಲಿರುತ್ತೆ..ವಿಶ್ವವಿದ್ಯಾಲಯದ ಕುಲಪತಿ ಡಾ.ಜಯಕರ್ ಶೆಟ್ಟಿ(Dr.Jayakar Shetty), ವಿವಿ ಆಡಳಿತ ವಿಭಾಗದ ವಿಸಿ, ರಿಜಿಸ್ಟ್ರಾರ್ ಹಾಗೂ ಬೋರ್ಡ್ ‌ಕೊಠಡಿ ಮರು ನವೀಕರಣ ಮಾಡಲು ಮುಂದಾಗಿದ್ದಾರೆ. ಮರು ನವೀಕರಣಕ್ಕೆ 1 ಕೋಟಿ ಹಣ ಖರ್ಚು ಮಾಡಿ ಹೈಟೆಕ್ ‌ಕೊಠಡಿ ಮಾಡಲು ನಿರ್ಧರಿಸಿದ್ದು, ಕುಲಪತಿ ನಡೆ ವಿರುದ್ಧ ವಿದ್ಯಾರ್ಥಿಗಳೇ (Students)ಆಕ್ರೋಶ ವ್ಯಕ್ತ ಪಡಿಸುತ್ತಿದ್ದಾರೆ. ವಿದ್ಯಾರ್ಥಿಗಳಿಗೆ ಕೊಡಬೇಕಾದ ಸ್ಕಾಲರ್ ಶಿಪ್ ಹಾಗೂ ಹಾಸ್ಟೆಲ್ ವಿದ್ಯಾರ್ಥಿಗಳ ಸಮಸ್ಯೆ ಬಗೆ ಹರಿಸಲು ಇವರ ಬಳಿ ಹಣ ಇಲ್ಲ. ಆದ್ರೀಗ ಒಂದು ಕೋಟಿ ಹಣದಲ್ಲಿ ನವೀಕರಣ ಕಾಮಗಾರಿ ಮಾಡಿಸುತ್ತಿದ್ದಾರೆ. ಇನ್ನು 10 ,20 ಲಕ್ಷದಲ್ಲಿ ಮುಗಿಯುವ ಕೆಲಸಕ್ಕೆ ಒಂದು ಕೋಟಿ ಖರ್ಚು ಮಾಡಲು ಹೊರಟಿದ್ದಾರೆ.. ಇದು ಮೇಲ್ನೋಟಕ್ಕೆ ಹಣ ಹೊಡೆಯುವ ಹುನ್ನಾರವಿದ್ದಂತೆ ಕಾಣುತ್ತಿದೆ ಅನ್ನೋದು ವಿದ್ಯಾರ್ಥಿಗಳ ಆರೋಪವಾಗಿದೆ. 6 ವರ್ಷಗಳ ಹಿಂದೆ ಬೆಂಗಳೂರು ವಿವಿಯ ಆಡಳಿತ ವಿಭಾಗದ ಕಟ್ಟಡವನ್ನ ಸಂಪೂರ್ಣವಾಗಿ ಮರು ನವೀಕರಣ ‌ಮಾಡಲಾಗಿತ್ತು.ಇದೀಗ ಮತ್ತೆ ನವೀಕರಣಕ್ಕೆ ಕುಲಪತಿಗಳು ಮುಂದಾಗಿದ್ದಾರೆ. ಈಗಾಗಲೇ ನವೀಕರಣ ಕೆಲಸ ಪ್ರಾರಂಭಿಸಲಾಗಿದ್ದು, ಭರದಿಂದ ಸಾಗಿದೆ. ಈ ಹಿಂದೆಯೇ ನವೀಕರಣಕ್ಕೆ ಟೆಂಡರ್ ಕರೆಯಲಾಗಿತ್ತು. ನ್ಯಾಕ್ ಕಮಿಟಿ ವಿಸಿಟ್ ಹಿನ್ನೆಲೆಯಲ್ಲಿ ನವೀಕರಣ ಕೆಲಸ ಪ್ರಾರಂಭಿಸಲು ಸಾಧ್ಯವಾಗಿರಲಿಲ್ಲ ಎನ್ನುತ್ತಾರೆ ಕುಲಪತಿಗಳು. ನವೀಕರಣ ‌ಕಾಮಗಾರಿ ನೆಪದಲ್ಲಿ  ಕುಲಪತಿಗಳು ಹಣ ಹೊಡೆಯಲು ಹೊರಟಿದ್ದಾರೆ ಅನ್ನೋದು ವಿದ್ಯಾರ್ಥಿಗಳ ಆರೋಪ.  ಒಂದಲ್ಲ ಒಂದು ವಿಷ್ಯಕ್ಕೆ ಸುದ್ದಿಯಾಗುತ್ತಿರುವ ಬೆಂಗಳೂರು ವಿವಿ ಈಗ ನವೀಕರಣ ವಿಷ್ಯದಲ್ಲೂ ಸದ್ದು ಮಾಡುತ್ತಿದ್ದು, ವಿದ್ಯಾರ್ಥಿಗಳ ಈ ಆರೋಪದ ಬಗ್ಗೆ ಸರ್ಕಾರ ಗಮನ ಹರಿಸಬೇಕಿದೆ.

ಇದನ್ನೂ ವೀಕ್ಷಿಸಿ:  ರಾಜ್ಯಾಧ್ಯಕ್ಷರ ಬಳಿಕ ವಿಪಕ್ಷ ನಾಯಕನ ಆಯ್ಕೆ ಸರ್ಕಸ್‌ ! ಇಂದೇ ಬಿಜೆಪಿ ಶಾಸಕಾಂಗ ಸಭೆ ? ಯಾರಿಗೆ ಲಕ್‌ ?

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
Read more