ಕಾಮಗಾರಿ ನೆಪದಲ್ಲಿ ಕೋಟಿ ಕೋಟಿ ಖರ್ಚು? ಹಣ ಹೊಡೆಯಲು ಮುಂದಾದ್ರ ವಿವಿ ಕುಲಪತಿ?

ಕಾಮಗಾರಿ ನೆಪದಲ್ಲಿ ಕೋಟಿ ಕೋಟಿ ಖರ್ಚು? ಹಣ ಹೊಡೆಯಲು ಮುಂದಾದ್ರ ವಿವಿ ಕುಲಪತಿ?

Published : Nov 17, 2023, 10:49 AM IST

ಸ್ಕಾಲರ್ ಶಿಪ್, ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಹಾಸಿಗೆ, ದಿಂಬು ಕೊಡಲು ವಿವಿಯಲ್ಲಿ ಹಣ ಇಲ್ಲ ಅಂತಾರೆ. ಆದ್ರೆ ವಿಸಿ ಕೊಠಡಿಯನ್ನ ಹೈಟೆಕ್ ಮರು ನವೀಕರಣಕ್ಕೆ ‌ಕೋಟಿ ಕೋಟಿ ಹಣ ಖರ್ಚು ಮಾಡುತ್ತಿದೆ. ವಿವಿ ಕುಲಪತಿ ವಿರುದ್ಧ ಕಾಲೇಜು ವಿದ್ಯಾರ್ಥಿಗಳು ಆಕ್ರೋಶ ಹೊರಹಾಕುತ್ತಿದ್ದಾರೆ.
 

ಜ್ಞಾನಭಾರತಿಯಲ್ಲಿರುವ ಬೆಂಗಳೂರು ವಿಶ್ವವಿದ್ಯಾಲಯ(Bangalore University) ಸದಾ ಒಂದಲ್ಲ ಒಂದು ವಿಚಾರದಲ್ಲಿ ಸುದ್ದಿಯಲ್ಲಿರುತ್ತೆ..ವಿಶ್ವವಿದ್ಯಾಲಯದ ಕುಲಪತಿ ಡಾ.ಜಯಕರ್ ಶೆಟ್ಟಿ(Dr.Jayakar Shetty), ವಿವಿ ಆಡಳಿತ ವಿಭಾಗದ ವಿಸಿ, ರಿಜಿಸ್ಟ್ರಾರ್ ಹಾಗೂ ಬೋರ್ಡ್ ‌ಕೊಠಡಿ ಮರು ನವೀಕರಣ ಮಾಡಲು ಮುಂದಾಗಿದ್ದಾರೆ. ಮರು ನವೀಕರಣಕ್ಕೆ 1 ಕೋಟಿ ಹಣ ಖರ್ಚು ಮಾಡಿ ಹೈಟೆಕ್ ‌ಕೊಠಡಿ ಮಾಡಲು ನಿರ್ಧರಿಸಿದ್ದು, ಕುಲಪತಿ ನಡೆ ವಿರುದ್ಧ ವಿದ್ಯಾರ್ಥಿಗಳೇ (Students)ಆಕ್ರೋಶ ವ್ಯಕ್ತ ಪಡಿಸುತ್ತಿದ್ದಾರೆ. ವಿದ್ಯಾರ್ಥಿಗಳಿಗೆ ಕೊಡಬೇಕಾದ ಸ್ಕಾಲರ್ ಶಿಪ್ ಹಾಗೂ ಹಾಸ್ಟೆಲ್ ವಿದ್ಯಾರ್ಥಿಗಳ ಸಮಸ್ಯೆ ಬಗೆ ಹರಿಸಲು ಇವರ ಬಳಿ ಹಣ ಇಲ್ಲ. ಆದ್ರೀಗ ಒಂದು ಕೋಟಿ ಹಣದಲ್ಲಿ ನವೀಕರಣ ಕಾಮಗಾರಿ ಮಾಡಿಸುತ್ತಿದ್ದಾರೆ. ಇನ್ನು 10 ,20 ಲಕ್ಷದಲ್ಲಿ ಮುಗಿಯುವ ಕೆಲಸಕ್ಕೆ ಒಂದು ಕೋಟಿ ಖರ್ಚು ಮಾಡಲು ಹೊರಟಿದ್ದಾರೆ.. ಇದು ಮೇಲ್ನೋಟಕ್ಕೆ ಹಣ ಹೊಡೆಯುವ ಹುನ್ನಾರವಿದ್ದಂತೆ ಕಾಣುತ್ತಿದೆ ಅನ್ನೋದು ವಿದ್ಯಾರ್ಥಿಗಳ ಆರೋಪವಾಗಿದೆ. 6 ವರ್ಷಗಳ ಹಿಂದೆ ಬೆಂಗಳೂರು ವಿವಿಯ ಆಡಳಿತ ವಿಭಾಗದ ಕಟ್ಟಡವನ್ನ ಸಂಪೂರ್ಣವಾಗಿ ಮರು ನವೀಕರಣ ‌ಮಾಡಲಾಗಿತ್ತು.ಇದೀಗ ಮತ್ತೆ ನವೀಕರಣಕ್ಕೆ ಕುಲಪತಿಗಳು ಮುಂದಾಗಿದ್ದಾರೆ. ಈಗಾಗಲೇ ನವೀಕರಣ ಕೆಲಸ ಪ್ರಾರಂಭಿಸಲಾಗಿದ್ದು, ಭರದಿಂದ ಸಾಗಿದೆ. ಈ ಹಿಂದೆಯೇ ನವೀಕರಣಕ್ಕೆ ಟೆಂಡರ್ ಕರೆಯಲಾಗಿತ್ತು. ನ್ಯಾಕ್ ಕಮಿಟಿ ವಿಸಿಟ್ ಹಿನ್ನೆಲೆಯಲ್ಲಿ ನವೀಕರಣ ಕೆಲಸ ಪ್ರಾರಂಭಿಸಲು ಸಾಧ್ಯವಾಗಿರಲಿಲ್ಲ ಎನ್ನುತ್ತಾರೆ ಕುಲಪತಿಗಳು. ನವೀಕರಣ ‌ಕಾಮಗಾರಿ ನೆಪದಲ್ಲಿ  ಕುಲಪತಿಗಳು ಹಣ ಹೊಡೆಯಲು ಹೊರಟಿದ್ದಾರೆ ಅನ್ನೋದು ವಿದ್ಯಾರ್ಥಿಗಳ ಆರೋಪ.  ಒಂದಲ್ಲ ಒಂದು ವಿಷ್ಯಕ್ಕೆ ಸುದ್ದಿಯಾಗುತ್ತಿರುವ ಬೆಂಗಳೂರು ವಿವಿ ಈಗ ನವೀಕರಣ ವಿಷ್ಯದಲ್ಲೂ ಸದ್ದು ಮಾಡುತ್ತಿದ್ದು, ವಿದ್ಯಾರ್ಥಿಗಳ ಈ ಆರೋಪದ ಬಗ್ಗೆ ಸರ್ಕಾರ ಗಮನ ಹರಿಸಬೇಕಿದೆ.

ಇದನ್ನೂ ವೀಕ್ಷಿಸಿ:  ರಾಜ್ಯಾಧ್ಯಕ್ಷರ ಬಳಿಕ ವಿಪಕ್ಷ ನಾಯಕನ ಆಯ್ಕೆ ಸರ್ಕಸ್‌ ! ಇಂದೇ ಬಿಜೆಪಿ ಶಾಸಕಾಂಗ ಸಭೆ ? ಯಾರಿಗೆ ಲಕ್‌ ?

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more