ಕಾಮಗಾರಿ ನೆಪದಲ್ಲಿ ಕೋಟಿ ಕೋಟಿ ಖರ್ಚು? ಹಣ ಹೊಡೆಯಲು ಮುಂದಾದ್ರ ವಿವಿ ಕುಲಪತಿ?

ಕಾಮಗಾರಿ ನೆಪದಲ್ಲಿ ಕೋಟಿ ಕೋಟಿ ಖರ್ಚು? ಹಣ ಹೊಡೆಯಲು ಮುಂದಾದ್ರ ವಿವಿ ಕುಲಪತಿ?

Published : Nov 17, 2023, 10:49 AM IST

ಸ್ಕಾಲರ್ ಶಿಪ್, ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಹಾಸಿಗೆ, ದಿಂಬು ಕೊಡಲು ವಿವಿಯಲ್ಲಿ ಹಣ ಇಲ್ಲ ಅಂತಾರೆ. ಆದ್ರೆ ವಿಸಿ ಕೊಠಡಿಯನ್ನ ಹೈಟೆಕ್ ಮರು ನವೀಕರಣಕ್ಕೆ ‌ಕೋಟಿ ಕೋಟಿ ಹಣ ಖರ್ಚು ಮಾಡುತ್ತಿದೆ. ವಿವಿ ಕುಲಪತಿ ವಿರುದ್ಧ ಕಾಲೇಜು ವಿದ್ಯಾರ್ಥಿಗಳು ಆಕ್ರೋಶ ಹೊರಹಾಕುತ್ತಿದ್ದಾರೆ.
 

ಜ್ಞಾನಭಾರತಿಯಲ್ಲಿರುವ ಬೆಂಗಳೂರು ವಿಶ್ವವಿದ್ಯಾಲಯ(Bangalore University) ಸದಾ ಒಂದಲ್ಲ ಒಂದು ವಿಚಾರದಲ್ಲಿ ಸುದ್ದಿಯಲ್ಲಿರುತ್ತೆ..ವಿಶ್ವವಿದ್ಯಾಲಯದ ಕುಲಪತಿ ಡಾ.ಜಯಕರ್ ಶೆಟ್ಟಿ(Dr.Jayakar Shetty), ವಿವಿ ಆಡಳಿತ ವಿಭಾಗದ ವಿಸಿ, ರಿಜಿಸ್ಟ್ರಾರ್ ಹಾಗೂ ಬೋರ್ಡ್ ‌ಕೊಠಡಿ ಮರು ನವೀಕರಣ ಮಾಡಲು ಮುಂದಾಗಿದ್ದಾರೆ. ಮರು ನವೀಕರಣಕ್ಕೆ 1 ಕೋಟಿ ಹಣ ಖರ್ಚು ಮಾಡಿ ಹೈಟೆಕ್ ‌ಕೊಠಡಿ ಮಾಡಲು ನಿರ್ಧರಿಸಿದ್ದು, ಕುಲಪತಿ ನಡೆ ವಿರುದ್ಧ ವಿದ್ಯಾರ್ಥಿಗಳೇ (Students)ಆಕ್ರೋಶ ವ್ಯಕ್ತ ಪಡಿಸುತ್ತಿದ್ದಾರೆ. ವಿದ್ಯಾರ್ಥಿಗಳಿಗೆ ಕೊಡಬೇಕಾದ ಸ್ಕಾಲರ್ ಶಿಪ್ ಹಾಗೂ ಹಾಸ್ಟೆಲ್ ವಿದ್ಯಾರ್ಥಿಗಳ ಸಮಸ್ಯೆ ಬಗೆ ಹರಿಸಲು ಇವರ ಬಳಿ ಹಣ ಇಲ್ಲ. ಆದ್ರೀಗ ಒಂದು ಕೋಟಿ ಹಣದಲ್ಲಿ ನವೀಕರಣ ಕಾಮಗಾರಿ ಮಾಡಿಸುತ್ತಿದ್ದಾರೆ. ಇನ್ನು 10 ,20 ಲಕ್ಷದಲ್ಲಿ ಮುಗಿಯುವ ಕೆಲಸಕ್ಕೆ ಒಂದು ಕೋಟಿ ಖರ್ಚು ಮಾಡಲು ಹೊರಟಿದ್ದಾರೆ.. ಇದು ಮೇಲ್ನೋಟಕ್ಕೆ ಹಣ ಹೊಡೆಯುವ ಹುನ್ನಾರವಿದ್ದಂತೆ ಕಾಣುತ್ತಿದೆ ಅನ್ನೋದು ವಿದ್ಯಾರ್ಥಿಗಳ ಆರೋಪವಾಗಿದೆ. 6 ವರ್ಷಗಳ ಹಿಂದೆ ಬೆಂಗಳೂರು ವಿವಿಯ ಆಡಳಿತ ವಿಭಾಗದ ಕಟ್ಟಡವನ್ನ ಸಂಪೂರ್ಣವಾಗಿ ಮರು ನವೀಕರಣ ‌ಮಾಡಲಾಗಿತ್ತು.ಇದೀಗ ಮತ್ತೆ ನವೀಕರಣಕ್ಕೆ ಕುಲಪತಿಗಳು ಮುಂದಾಗಿದ್ದಾರೆ. ಈಗಾಗಲೇ ನವೀಕರಣ ಕೆಲಸ ಪ್ರಾರಂಭಿಸಲಾಗಿದ್ದು, ಭರದಿಂದ ಸಾಗಿದೆ. ಈ ಹಿಂದೆಯೇ ನವೀಕರಣಕ್ಕೆ ಟೆಂಡರ್ ಕರೆಯಲಾಗಿತ್ತು. ನ್ಯಾಕ್ ಕಮಿಟಿ ವಿಸಿಟ್ ಹಿನ್ನೆಲೆಯಲ್ಲಿ ನವೀಕರಣ ಕೆಲಸ ಪ್ರಾರಂಭಿಸಲು ಸಾಧ್ಯವಾಗಿರಲಿಲ್ಲ ಎನ್ನುತ್ತಾರೆ ಕುಲಪತಿಗಳು. ನವೀಕರಣ ‌ಕಾಮಗಾರಿ ನೆಪದಲ್ಲಿ  ಕುಲಪತಿಗಳು ಹಣ ಹೊಡೆಯಲು ಹೊರಟಿದ್ದಾರೆ ಅನ್ನೋದು ವಿದ್ಯಾರ್ಥಿಗಳ ಆರೋಪ.  ಒಂದಲ್ಲ ಒಂದು ವಿಷ್ಯಕ್ಕೆ ಸುದ್ದಿಯಾಗುತ್ತಿರುವ ಬೆಂಗಳೂರು ವಿವಿ ಈಗ ನವೀಕರಣ ವಿಷ್ಯದಲ್ಲೂ ಸದ್ದು ಮಾಡುತ್ತಿದ್ದು, ವಿದ್ಯಾರ್ಥಿಗಳ ಈ ಆರೋಪದ ಬಗ್ಗೆ ಸರ್ಕಾರ ಗಮನ ಹರಿಸಬೇಕಿದೆ.

ಇದನ್ನೂ ವೀಕ್ಷಿಸಿ:  ರಾಜ್ಯಾಧ್ಯಕ್ಷರ ಬಳಿಕ ವಿಪಕ್ಷ ನಾಯಕನ ಆಯ್ಕೆ ಸರ್ಕಸ್‌ ! ಇಂದೇ ಬಿಜೆಪಿ ಶಾಸಕಾಂಗ ಸಭೆ ? ಯಾರಿಗೆ ಲಕ್‌ ?

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more