ಬೀದರ್:  ಕೆಮಿಕಲ್ ಫ್ಯಾಕ್ಟರಿ ಹಟಾವ್ , ಜನತಾ ಕೊ ಬಚಾವ್.! ಏನಿವರ ಸಮಸ್ಯೆ..?

ಬೀದರ್: ಕೆಮಿಕಲ್ ಫ್ಯಾಕ್ಟರಿ ಹಟಾವ್ , ಜನತಾ ಕೊ ಬಚಾವ್.! ಏನಿವರ ಸಮಸ್ಯೆ..?

Suvarna News   | Asianet News
Published : Sep 04, 2021, 03:12 PM ISTUpdated : Sep 04, 2021, 03:14 PM IST

- ಬೀದರ್: ಜನರ ಪಾಲಿಗೆ ಶಾಪವಾಗಿ ಪರಿಣಮಿಸಿರುವ ಕೆಮಿಕಲ್ ಫ್ಯಾಕ್ಟರಿ

- ವಿಷಕಾರಿ ತ್ಯಾಜ್ಯದಿಂದ ಚರ್ಮ ರೋಗಕ್ಕೆ ತುತ್ತಾಗುತ್ತಿರುವ ಸ್ಥಳೀಯರು

- ಕೆಮಿಕಲ್ ಫ್ಯಾಕ್ಟರಿ ಹಟಾವ್ ಜನತಾ ಕೊ ಬಚಾವ್ ಎನ್ನುತ್ತಿರುವ ಗ್ರಾಮಸ್ಥರು

ಬೀದರ್ (ಸೆ. 04): ಇಲ್ಲಿರುವ ಕೆಮಿಕಲ್ ಕಾರ್ಖಾನೆಗಳು ನೇರವಾಗಿ ಹಳ್ಳ, ಕೊಳ್ಳಗಳಿಗೆ ವಿಷಕಾರಿ ತ್ಯಾಜ್ಯ ಬಿಡುತ್ತಿವೆ. ಆ ವಿಷಕಾರಿ ತ್ಯಾಜ್ಯ ಎಷ್ಟೊಂದು ಡೇಂಜರ್ ಆಗಿದೆ ಅಂದ್ರೆ ಇಲ್ಲಿವರೆಗೂ ಪ್ರಾಣಿ, ಪಕ್ಷಿಗಳು, ಜಾನುವಾರುಗಳ ಸಾವಿಗಂತು ಲೆಕ್ಕವೇ ಇಲ್ಲ,. ಫಲವತ್ತಾಗಿ ಬೆಳೆಯುವ ಬೆಳೆಗಳು ಕೂಡ ಅಲ್ಲಿನ ಪ್ರದೇಶದಲ್ಲಿ ಕುಂಟಿತವಾಗ್ತಿವೆ.


  
ಹಳ್ಳಕ್ಕೆ ಬಿಡಲಾಗುತ್ತಿರುವ ವಿಷಕಾರಿ ತ್ಯಾಜ್ಯದಿಂದ ಎಷ್ಟೋ ಜನರಿಗೆ ಚರ್ಮರೋಗಕ್ಕೆ ತುತ್ತಾಗಿದ್ದಾರೆ.  ತಜ್ಞರು ಹೇಳುವ ಪ್ರಕಾರ ಈ ತ್ಯಾಜ್ಯ ಮಿಶ್ರಿತವಾಗಿರುವ ನೀರು ಕುಡಿಯೋದು ಬಿಡಿ ಉಪಯೋಗಕ್ಕೂ ಯೋಗವಿಲ್ಲ ಎನ್ನುತ್ತಾರೆ. ಈಗಾಗಲೇ ಹುಮನಾಬಾದ್ ಸುತ್ತಲಿನ ಗಡವಂತಿ ಮತ್ತು ಮಾಣಿಕನಗರದಲ್ಲಿನ ನಿವಾಸಿಗಳು ನಮ್ಮ ಊರಿನಲ್ಲಿನ ಬಾವಿಯಲ್ಲಿನ ನೀರುಗಳು ಗಬ್ಬು ನಾರುತ್ತಿವೆ, ಕೆಲವರಂತು ಊರು ಬಿಟ್ಟು ವಲಸೆ ಹೋಗುತ್ತಿದ್ದಾರೆ,. ಕೂಡಲೇ ಇಲ್ಲಿನ ಕಾರ್ಖಾನೆಗಳನ್ನ ಸ್ಥಳಾಂತರಿಸಿ ನಮ್ಮನ್ನು ಉಳಿಸಿ ಎಂದು ಅಂಗಲಾಚುತ್ತಿದ್ದಾರೆ.  ಜನಪ್ರತಿನಿಧಿಗಳೇ ದಯವಿಟ್ಟು ಗಮನ ಹರಿಸಿ. 

01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ