Bidar: ಕಾರಂಜಾ ಜಲಾಶಯ ಸೇರುತ್ತಿದೆ ಕೆಮಿಕಲ್ ಫ್ಯಾಕ್ಟರಿ ನೀರು, ಸಾರ್ವಜನಿಕರಿಗೆ ನರಕಯಾತನೆ

Bidar: ಕಾರಂಜಾ ಜಲಾಶಯ ಸೇರುತ್ತಿದೆ ಕೆಮಿಕಲ್ ಫ್ಯಾಕ್ಟರಿ ನೀರು, ಸಾರ್ವಜನಿಕರಿಗೆ ನರಕಯಾತನೆ

Suvarna News   | Asianet News
Published : Mar 01, 2022, 05:15 PM ISTUpdated : Mar 01, 2022, 05:29 PM IST

ಬೀದರ್ ಕೈಗಾರಿಕಾ ಪ್ರದೇಶದಲ್ಲಿರುವ ಕೆಮಿಕಲ್ ಫ್ಯಾಕ್ಟರಿ ಜನರ ಪಾಲಿಗೆ ಕರಿನೆರಳಾಗಿ ಪರಿಣಮಿಸಿವೆ.ಆ ಕಾರ್ಖಾನೆಯಿಂದ ಹೊರ ಬಿಡುತ್ತಿರುವ ವಿಷಕಾರಿ ತ್ಯಾಜ್ಯದಿಂದ ಅಲ್ಲಿನ ಜನ ಚರ್ಮ ರೋಗಕ್ಕೆ ತುತ್ತಾಗ್ತಿದ್ದಾರೆ. ರೈತರು ನರಕಯಾತನೆ ಅನುಭವಿಸುವಂತಾಗಿದೆ,. 

ಬೀದರ್ (ಮಾ. 01): ಇಲ್ಲಿ ಕೈಗಾರಿಕಾ ಪ್ರದೇಶದಲ್ಲಿರುವ ಕೆಮಿಕಲ್ ಫ್ಯಾಕ್ಟರಿ ಜನರ ಪಾಲಿಗೆ ಕರಿನೆರಳಾಗಿ ಪರಿಣಮಿಸಿವೆ. ಆ ಕಾರ್ಖಾನೆಯಿಂದ ಹೊರ ಬಿಡುತ್ತಿರುವ ವಿಷಕಾರಿ ತ್ಯಾಜ್ಯದಿಂದ ಅಲ್ಲಿನ ಜನ ಚರ್ಮ ರೋಗಕ್ಕೆ ತುತ್ತಾಗ್ತಿದ್ದಾರೆ,. ರೈತರು ನರಕಯಾತನೆ ಅನುಭವಿಸುವಂತಾಗಿದೆ,. ಕೆಮಿಕಲ್ ಪ್ಯಾಕ್ಟರಿ ಹಟಾವ್ ಜನತಾ ಕೊ ಬಚಾವ್ ಎಂದು ಬೀದಿಗಿಳಿದಿದ್ದಾರೆ ಅಲ್ಲಿನ ಜನರು,.

ಇಲ್ಲಿಯವರೆಗೂ ಪ್ರಾಣಿ, ಪಕ್ಷಿಗಳು, ಜಾನುವಾರುಗಳ ಸಾವಿಗಂತೂ ಲೆಕ್ಕವೇ ಇಲ್ಲ,. ಫಲವತ್ತಾಗಿ ಬೆಳೆಯುವ ಬೆಳೆಗಳು ಕೂಡ ಅಲ್ಲಿನ ಪ್ರದೇಶದಲ್ಲಿ ಕುಂಟಿತವಾಗ್ತಿವೆ,. ಅಂತಹ ದುಷ್ಪರಿಣಾಮ ಬೀರುವ ವಿಷಕಾರಿ ತ್ಯಾಜ್ಯ ಕಾರಂಜಾ ಜಲಾಶಯಕ್ಕೆ ಸೇರುತ್ತಿದೆ. ಕಾರಂಜಾ ಜಲಾಶಯದ ನೀರು ಇಡೀ ಬೀದರ್  ನಗರ ಸೇರಿದಂತೆ ಜಿಲ್ಲೆಯ ಜನ ಕುಡಿಯಲು ಉಪಯೋಗಿಸುತ್ತಾರೆ,.

ತಜ್ಞರು ಹೇಳುವ ಪ್ರಕಾರ ಈ ತ್ಯಾಜ್ಯ ಮಿಶ್ರಿತವಾಗಿರುವ ನೀರು ಕುಡಿಯೋದು ಬಿಡಿ ಉಪಯೋಗಕ್ಕೂ ಯೋಗವಿಲ್ಲ ಎಂದಿದ್ದಾರೆ,. ಹಳ್ಳಿದಲ್ಲಿರುವ ಮೀನು, ಏಡಿ, ಹಾವಿನಂತಹ ಜಲಚರಗಳು ರಾಸಾಯನಿಕ ಬೆರೆತ ನೀರಿನಿಂದಾಗಿ ಸತ್ತು ನೀರಿನ ಮೇಲೆ ತೇಲುತ್ತಿವೆ,. ಹಳ್ಳದಲ್ಲಿ ರಾಸಾಯನಿಕ ಯುಕ್ತ ತ್ಯಾಜ್ಯ ಬಿಡುತ್ತಿರೋದರಿಂದ ಮೇಯಲು ಬರುವ ಜಾನುವಾರುಗಳು ಇದೇ ನೀರನ್ನು  ಕುಡಿದು ಮೃತಪಟ್ಟಿವೆ,.ಈ ಬಗ್ಗೆ ಈಗಾಗಲೇ ಜಿಲ್ಲಾಧಿಕಾರಿಗಳು, ಸಚಿವರು ಸೇರಿದಂತೆ ಯಾರಿಗೆ ಹೇಳಿದರೂ ಸಮಸ್ಯೆ ಮಾತ್ರ ಬಗೆಹರಿಯುತ್ತಿಲ್ಲ.  ಹುಮನಾಬಾದ್ ಶಾಸಕ ರಾಜಶೇಖರ್ ಪಾಟೀಲ್ ಭೇಟಿ ಕೊಟ್ಟು ವಾರ್ನ್ ಮಾಡಿದ್ದರೂ ಡೋಂಟ್ ಕೇರ್ ಎನ್ನುತ್ತಿದ್ದಾರಂತೆ ಕಂಪನಿ ಮಾಲೀಕರು,.

ಒಟ್ಟಿನಲ್ಲಿ ವರವಾಗಬೇಕಿದ್ದ ಕೈಗಾರಿಕಾ ಕಾರ್ಖಾನೆಗಳು ಇಲ್ಲಿನ ಜನರಿಗೆ ವಿಷಕಂಠಕವಾಗಿ ಕಾಡುತ್ತಿವೆ,. ಅಧಿಕಾರಿಗಳಿಗೆ, ಸರ್ಕಾರಕ್ಕೆ ಖುದ್ದಿ ಸ್ಥಳೀಯ ಶಾಸಕರೇ ಎಷ್ಟೇ ಮನವಿ ಮಾಡಿಕೊಂಡು ಗೋಳಾಡಿದ್ರು ಈ ಕಾರ್ಖಾನೆಗಳು ಸ್ಥಳಾಂತರಕ್ಕೆ ಯಾರೊಬ್ಬರು ಮನಸು ಮಾಡುತ್ತಿಲ್ಲ,. ನರಕಯಾತನೆ ಅನುಭವಿಸುತ್ತಿರುವ ಇಲ್ಲಿನ ಜನರಿಗೆ ಈಗಲಾದರು ನ್ಯಾಯ ಸಿಗುತ್ತಾ ಕಾದು ನೋಡಬೇಕಾಗಿದೆ,.

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
Read more