Bidar: ಕಾರಂಜಾ ಜಲಾಶಯ ಸೇರುತ್ತಿದೆ ಕೆಮಿಕಲ್ ಫ್ಯಾಕ್ಟರಿ ನೀರು, ಸಾರ್ವಜನಿಕರಿಗೆ ನರಕಯಾತನೆ

Bidar: ಕಾರಂಜಾ ಜಲಾಶಯ ಸೇರುತ್ತಿದೆ ಕೆಮಿಕಲ್ ಫ್ಯಾಕ್ಟರಿ ನೀರು, ಸಾರ್ವಜನಿಕರಿಗೆ ನರಕಯಾತನೆ

Suvarna News   | Asianet News
Published : Mar 01, 2022, 05:15 PM ISTUpdated : Mar 01, 2022, 05:29 PM IST

ಬೀದರ್ ಕೈಗಾರಿಕಾ ಪ್ರದೇಶದಲ್ಲಿರುವ ಕೆಮಿಕಲ್ ಫ್ಯಾಕ್ಟರಿ ಜನರ ಪಾಲಿಗೆ ಕರಿನೆರಳಾಗಿ ಪರಿಣಮಿಸಿವೆ.ಆ ಕಾರ್ಖಾನೆಯಿಂದ ಹೊರ ಬಿಡುತ್ತಿರುವ ವಿಷಕಾರಿ ತ್ಯಾಜ್ಯದಿಂದ ಅಲ್ಲಿನ ಜನ ಚರ್ಮ ರೋಗಕ್ಕೆ ತುತ್ತಾಗ್ತಿದ್ದಾರೆ. ರೈತರು ನರಕಯಾತನೆ ಅನುಭವಿಸುವಂತಾಗಿದೆ,. 

ಬೀದರ್ (ಮಾ. 01): ಇಲ್ಲಿ ಕೈಗಾರಿಕಾ ಪ್ರದೇಶದಲ್ಲಿರುವ ಕೆಮಿಕಲ್ ಫ್ಯಾಕ್ಟರಿ ಜನರ ಪಾಲಿಗೆ ಕರಿನೆರಳಾಗಿ ಪರಿಣಮಿಸಿವೆ. ಆ ಕಾರ್ಖಾನೆಯಿಂದ ಹೊರ ಬಿಡುತ್ತಿರುವ ವಿಷಕಾರಿ ತ್ಯಾಜ್ಯದಿಂದ ಅಲ್ಲಿನ ಜನ ಚರ್ಮ ರೋಗಕ್ಕೆ ತುತ್ತಾಗ್ತಿದ್ದಾರೆ,. ರೈತರು ನರಕಯಾತನೆ ಅನುಭವಿಸುವಂತಾಗಿದೆ,. ಕೆಮಿಕಲ್ ಪ್ಯಾಕ್ಟರಿ ಹಟಾವ್ ಜನತಾ ಕೊ ಬಚಾವ್ ಎಂದು ಬೀದಿಗಿಳಿದಿದ್ದಾರೆ ಅಲ್ಲಿನ ಜನರು,.

ಇಲ್ಲಿಯವರೆಗೂ ಪ್ರಾಣಿ, ಪಕ್ಷಿಗಳು, ಜಾನುವಾರುಗಳ ಸಾವಿಗಂತೂ ಲೆಕ್ಕವೇ ಇಲ್ಲ,. ಫಲವತ್ತಾಗಿ ಬೆಳೆಯುವ ಬೆಳೆಗಳು ಕೂಡ ಅಲ್ಲಿನ ಪ್ರದೇಶದಲ್ಲಿ ಕುಂಟಿತವಾಗ್ತಿವೆ,. ಅಂತಹ ದುಷ್ಪರಿಣಾಮ ಬೀರುವ ವಿಷಕಾರಿ ತ್ಯಾಜ್ಯ ಕಾರಂಜಾ ಜಲಾಶಯಕ್ಕೆ ಸೇರುತ್ತಿದೆ. ಕಾರಂಜಾ ಜಲಾಶಯದ ನೀರು ಇಡೀ ಬೀದರ್  ನಗರ ಸೇರಿದಂತೆ ಜಿಲ್ಲೆಯ ಜನ ಕುಡಿಯಲು ಉಪಯೋಗಿಸುತ್ತಾರೆ,.

ತಜ್ಞರು ಹೇಳುವ ಪ್ರಕಾರ ಈ ತ್ಯಾಜ್ಯ ಮಿಶ್ರಿತವಾಗಿರುವ ನೀರು ಕುಡಿಯೋದು ಬಿಡಿ ಉಪಯೋಗಕ್ಕೂ ಯೋಗವಿಲ್ಲ ಎಂದಿದ್ದಾರೆ,. ಹಳ್ಳಿದಲ್ಲಿರುವ ಮೀನು, ಏಡಿ, ಹಾವಿನಂತಹ ಜಲಚರಗಳು ರಾಸಾಯನಿಕ ಬೆರೆತ ನೀರಿನಿಂದಾಗಿ ಸತ್ತು ನೀರಿನ ಮೇಲೆ ತೇಲುತ್ತಿವೆ,. ಹಳ್ಳದಲ್ಲಿ ರಾಸಾಯನಿಕ ಯುಕ್ತ ತ್ಯಾಜ್ಯ ಬಿಡುತ್ತಿರೋದರಿಂದ ಮೇಯಲು ಬರುವ ಜಾನುವಾರುಗಳು ಇದೇ ನೀರನ್ನು  ಕುಡಿದು ಮೃತಪಟ್ಟಿವೆ,.ಈ ಬಗ್ಗೆ ಈಗಾಗಲೇ ಜಿಲ್ಲಾಧಿಕಾರಿಗಳು, ಸಚಿವರು ಸೇರಿದಂತೆ ಯಾರಿಗೆ ಹೇಳಿದರೂ ಸಮಸ್ಯೆ ಮಾತ್ರ ಬಗೆಹರಿಯುತ್ತಿಲ್ಲ.  ಹುಮನಾಬಾದ್ ಶಾಸಕ ರಾಜಶೇಖರ್ ಪಾಟೀಲ್ ಭೇಟಿ ಕೊಟ್ಟು ವಾರ್ನ್ ಮಾಡಿದ್ದರೂ ಡೋಂಟ್ ಕೇರ್ ಎನ್ನುತ್ತಿದ್ದಾರಂತೆ ಕಂಪನಿ ಮಾಲೀಕರು,.

ಒಟ್ಟಿನಲ್ಲಿ ವರವಾಗಬೇಕಿದ್ದ ಕೈಗಾರಿಕಾ ಕಾರ್ಖಾನೆಗಳು ಇಲ್ಲಿನ ಜನರಿಗೆ ವಿಷಕಂಠಕವಾಗಿ ಕಾಡುತ್ತಿವೆ,. ಅಧಿಕಾರಿಗಳಿಗೆ, ಸರ್ಕಾರಕ್ಕೆ ಖುದ್ದಿ ಸ್ಥಳೀಯ ಶಾಸಕರೇ ಎಷ್ಟೇ ಮನವಿ ಮಾಡಿಕೊಂಡು ಗೋಳಾಡಿದ್ರು ಈ ಕಾರ್ಖಾನೆಗಳು ಸ್ಥಳಾಂತರಕ್ಕೆ ಯಾರೊಬ್ಬರು ಮನಸು ಮಾಡುತ್ತಿಲ್ಲ,. ನರಕಯಾತನೆ ಅನುಭವಿಸುತ್ತಿರುವ ಇಲ್ಲಿನ ಜನರಿಗೆ ಈಗಲಾದರು ನ್ಯಾಯ ಸಿಗುತ್ತಾ ಕಾದು ನೋಡಬೇಕಾಗಿದೆ,.

21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
Read more