Bidar: ಕಾರಂಜಾ ಜಲಾಶಯ ಸೇರುತ್ತಿದೆ ಕೆಮಿಕಲ್ ಫ್ಯಾಕ್ಟರಿ ನೀರು, ಸಾರ್ವಜನಿಕರಿಗೆ ನರಕಯಾತನೆ

Bidar: ಕಾರಂಜಾ ಜಲಾಶಯ ಸೇರುತ್ತಿದೆ ಕೆಮಿಕಲ್ ಫ್ಯಾಕ್ಟರಿ ನೀರು, ಸಾರ್ವಜನಿಕರಿಗೆ ನರಕಯಾತನೆ

Suvarna News   | Asianet News
Published : Mar 01, 2022, 05:15 PM ISTUpdated : Mar 01, 2022, 05:29 PM IST

ಬೀದರ್ ಕೈಗಾರಿಕಾ ಪ್ರದೇಶದಲ್ಲಿರುವ ಕೆಮಿಕಲ್ ಫ್ಯಾಕ್ಟರಿ ಜನರ ಪಾಲಿಗೆ ಕರಿನೆರಳಾಗಿ ಪರಿಣಮಿಸಿವೆ.ಆ ಕಾರ್ಖಾನೆಯಿಂದ ಹೊರ ಬಿಡುತ್ತಿರುವ ವಿಷಕಾರಿ ತ್ಯಾಜ್ಯದಿಂದ ಅಲ್ಲಿನ ಜನ ಚರ್ಮ ರೋಗಕ್ಕೆ ತುತ್ತಾಗ್ತಿದ್ದಾರೆ. ರೈತರು ನರಕಯಾತನೆ ಅನುಭವಿಸುವಂತಾಗಿದೆ,. 

ಬೀದರ್ (ಮಾ. 01): ಇಲ್ಲಿ ಕೈಗಾರಿಕಾ ಪ್ರದೇಶದಲ್ಲಿರುವ ಕೆಮಿಕಲ್ ಫ್ಯಾಕ್ಟರಿ ಜನರ ಪಾಲಿಗೆ ಕರಿನೆರಳಾಗಿ ಪರಿಣಮಿಸಿವೆ. ಆ ಕಾರ್ಖಾನೆಯಿಂದ ಹೊರ ಬಿಡುತ್ತಿರುವ ವಿಷಕಾರಿ ತ್ಯಾಜ್ಯದಿಂದ ಅಲ್ಲಿನ ಜನ ಚರ್ಮ ರೋಗಕ್ಕೆ ತುತ್ತಾಗ್ತಿದ್ದಾರೆ,. ರೈತರು ನರಕಯಾತನೆ ಅನುಭವಿಸುವಂತಾಗಿದೆ,. ಕೆಮಿಕಲ್ ಪ್ಯಾಕ್ಟರಿ ಹಟಾವ್ ಜನತಾ ಕೊ ಬಚಾವ್ ಎಂದು ಬೀದಿಗಿಳಿದಿದ್ದಾರೆ ಅಲ್ಲಿನ ಜನರು,.

ಇಲ್ಲಿಯವರೆಗೂ ಪ್ರಾಣಿ, ಪಕ್ಷಿಗಳು, ಜಾನುವಾರುಗಳ ಸಾವಿಗಂತೂ ಲೆಕ್ಕವೇ ಇಲ್ಲ,. ಫಲವತ್ತಾಗಿ ಬೆಳೆಯುವ ಬೆಳೆಗಳು ಕೂಡ ಅಲ್ಲಿನ ಪ್ರದೇಶದಲ್ಲಿ ಕುಂಟಿತವಾಗ್ತಿವೆ,. ಅಂತಹ ದುಷ್ಪರಿಣಾಮ ಬೀರುವ ವಿಷಕಾರಿ ತ್ಯಾಜ್ಯ ಕಾರಂಜಾ ಜಲಾಶಯಕ್ಕೆ ಸೇರುತ್ತಿದೆ. ಕಾರಂಜಾ ಜಲಾಶಯದ ನೀರು ಇಡೀ ಬೀದರ್  ನಗರ ಸೇರಿದಂತೆ ಜಿಲ್ಲೆಯ ಜನ ಕುಡಿಯಲು ಉಪಯೋಗಿಸುತ್ತಾರೆ,.

ತಜ್ಞರು ಹೇಳುವ ಪ್ರಕಾರ ಈ ತ್ಯಾಜ್ಯ ಮಿಶ್ರಿತವಾಗಿರುವ ನೀರು ಕುಡಿಯೋದು ಬಿಡಿ ಉಪಯೋಗಕ್ಕೂ ಯೋಗವಿಲ್ಲ ಎಂದಿದ್ದಾರೆ,. ಹಳ್ಳಿದಲ್ಲಿರುವ ಮೀನು, ಏಡಿ, ಹಾವಿನಂತಹ ಜಲಚರಗಳು ರಾಸಾಯನಿಕ ಬೆರೆತ ನೀರಿನಿಂದಾಗಿ ಸತ್ತು ನೀರಿನ ಮೇಲೆ ತೇಲುತ್ತಿವೆ,. ಹಳ್ಳದಲ್ಲಿ ರಾಸಾಯನಿಕ ಯುಕ್ತ ತ್ಯಾಜ್ಯ ಬಿಡುತ್ತಿರೋದರಿಂದ ಮೇಯಲು ಬರುವ ಜಾನುವಾರುಗಳು ಇದೇ ನೀರನ್ನು  ಕುಡಿದು ಮೃತಪಟ್ಟಿವೆ,.ಈ ಬಗ್ಗೆ ಈಗಾಗಲೇ ಜಿಲ್ಲಾಧಿಕಾರಿಗಳು, ಸಚಿವರು ಸೇರಿದಂತೆ ಯಾರಿಗೆ ಹೇಳಿದರೂ ಸಮಸ್ಯೆ ಮಾತ್ರ ಬಗೆಹರಿಯುತ್ತಿಲ್ಲ.  ಹುಮನಾಬಾದ್ ಶಾಸಕ ರಾಜಶೇಖರ್ ಪಾಟೀಲ್ ಭೇಟಿ ಕೊಟ್ಟು ವಾರ್ನ್ ಮಾಡಿದ್ದರೂ ಡೋಂಟ್ ಕೇರ್ ಎನ್ನುತ್ತಿದ್ದಾರಂತೆ ಕಂಪನಿ ಮಾಲೀಕರು,.

ಒಟ್ಟಿನಲ್ಲಿ ವರವಾಗಬೇಕಿದ್ದ ಕೈಗಾರಿಕಾ ಕಾರ್ಖಾನೆಗಳು ಇಲ್ಲಿನ ಜನರಿಗೆ ವಿಷಕಂಠಕವಾಗಿ ಕಾಡುತ್ತಿವೆ,. ಅಧಿಕಾರಿಗಳಿಗೆ, ಸರ್ಕಾರಕ್ಕೆ ಖುದ್ದಿ ಸ್ಥಳೀಯ ಶಾಸಕರೇ ಎಷ್ಟೇ ಮನವಿ ಮಾಡಿಕೊಂಡು ಗೋಳಾಡಿದ್ರು ಈ ಕಾರ್ಖಾನೆಗಳು ಸ್ಥಳಾಂತರಕ್ಕೆ ಯಾರೊಬ್ಬರು ಮನಸು ಮಾಡುತ್ತಿಲ್ಲ,. ನರಕಯಾತನೆ ಅನುಭವಿಸುತ್ತಿರುವ ಇಲ್ಲಿನ ಜನರಿಗೆ ಈಗಲಾದರು ನ್ಯಾಯ ಸಿಗುತ್ತಾ ಕಾದು ನೋಡಬೇಕಾಗಿದೆ,.

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more