Bidar: ಉದ್ಯೋಗ ಬಿಟ್ಟು ಬರಡು ಭೂಮಿಯಲ್ಲಿ  ಬೆಳೆ ಬೆಳೆದು ಯಶಸ್ವಿಯಾದ ಯುವ ರೈತ!

Bidar: ಉದ್ಯೋಗ ಬಿಟ್ಟು ಬರಡು ಭೂಮಿಯಲ್ಲಿ ಬೆಳೆ ಬೆಳೆದು ಯಶಸ್ವಿಯಾದ ಯುವ ರೈತ!

Suvarna News   | Asianet News
Published : Nov 21, 2021, 04:36 PM ISTUpdated : Nov 21, 2021, 05:29 PM IST

- ಬರದ ನಾಡು, ಬರಡು ಭೂಮಿಯಲ್ಲಿ ಬಂಗಾರದಂತಹ ಬೆಳೆ

- ಕೃಷಿ ಹೊಂಡ ನಿರ್ಮಿಸಿ ನೀರಿನ ಕಾರಂಜಿ ಹರಿಸಿ ಚಿನ್ನದಂತಹ ಬೆಳೆ 

- ಎಂ.ಕಾಮ್ ಪದವಿ ಪಡೆದು ಕೈತುಂಬಾ ಸಂಬಳ ಗಳಿಸುತ್ತಿದ್ದ ರೈತ

- ಉದ್ಯೋಗ ಬಿಟ್ಟು ಕೈ ಕೆಸರುಮಾಡಿಕೊಂಡು ಈಗ ಯಶಸ್ವಿ ಕೃಷಿಕ

ಬೀದರ್ (ನ. 21): ಕೈ ಕೆಸರಾದರೆ ಬಾಯಿ ಮೊಸರು ಎಂಬ ಗಾದೆ ಮಾತನ್ನ ಗಡಿ ಜಿಲ್ಲೆ ಬೀದರ್ ನ (Bidar) ಔರಾದ್ ತಾಲೂಕಿನ ನಾಗೂರು ಗ್ರಾಮದ ರೈತ ಸಂತೋಷ ಖಂದಾಡೆ ಮತ್ತೊಮ್ಮೆ ಸಾಬೀತು ಮಾಡಿದ್ದಾರೆ. 

ಎಂ.ಕಾಮ್ ಪದವಿಧರನಾಗಿರುವ ಸಂತೋಷ್ ಖಾಸಗಿ ಕಂಪನಿಯಲ್ಲಿ ಕೆಲಸ ಕೈತುಂಬ ಸಂಬಳ ಪಡೆಯುತ್ತಿದ್ದರು. ಕಂಪನಿಯ ಕೆಲಸಕ್ಕೆ ಗುಡ್‌ಬೈ ಹೇಳಿ ಸ್ವಂತ ಹೊಲದಲ್ಲಿ ಬೆವರು ಸುರಿಸಿ ಕೆಲಸ ಮಾಡಬೇಕು ಅಂತ ಪಣತೊಟ್ಟ ಇವರು ಎರಡು ಬಾರಿ ಬೋರ್‌ವೆಲ್ ಕೊರೆಸಿ ಕೈಸುಟ್ಟುಕೊಂಡಿದ್ದರು. ಮೂರನೇ ಪ್ರಯತ್ನದಲ್ಲಿ ಬೋರ್‌ವೆಲ್‌ನಲ್ಲಿ ನೀರು ಬಂದು ಯಶಸ್ವಿಯಾದರು.

ಕಲ್ಲುಗಳಿಂದ ತುಂಬಿಕೊಂಡಿದ್ದ ಈ ಬರಡು ಭೂಮಿಯಲ್ಲಿ ಸತತ ಎರಡು ಮೂರು ವರ್ಷ ಕಠಿಣ ಪರಿಶ್ರಮ ಪಟ್ಟು ಕಲ್ಲುಗಳನ್ನ ಹೊರಗೆದು ಮೂರು ಏಕರೆ ಪ್ರದೇಶದಲ್ಲಿ ಮೂರು ಸಾವಿರ ಪಪ್ಪಾಯಿ ನಾಟಿ ಮಾಡಿದ್ದಾರೆ. ಪಪ್ಪಾಯಿ ಗಿಡಗಳ ಮಧ್ಯೆ ಚೆಂಡು ಹೂವು (Mexican marigold) ಬೆಳಸಿ ಉತ್ತಮ ಆದಾಯ ಪಡೆಯುತ್ತಿದ್ದಾರೆ. ಕೃಷಿ ಹೊಂಡದಿಂದ ಹನಿ ನೀರಾವರಿ ಮೂಲಕ ಗಿಡಗಳಿಗೆ ನೀರುಣಿಸಲಾಗುತ್ತಿದೆ. ಈ ಮೂಲಕ ಭರ್ಜರಿ ಬೆಳೆ ಬೆಳೆಸಿ ಈ ಭಾಗದ ರೈತರಿಂದ ಸೈ ಎನಿಸಿಕೊಂಡಿದ್ದಾರೆ.

 

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more