Bidar: ಉದ್ಯೋಗ ಬಿಟ್ಟು ಬರಡು ಭೂಮಿಯಲ್ಲಿ  ಬೆಳೆ ಬೆಳೆದು ಯಶಸ್ವಿಯಾದ ಯುವ ರೈತ!

Bidar: ಉದ್ಯೋಗ ಬಿಟ್ಟು ಬರಡು ಭೂಮಿಯಲ್ಲಿ ಬೆಳೆ ಬೆಳೆದು ಯಶಸ್ವಿಯಾದ ಯುವ ರೈತ!

Suvarna News   | Asianet News
Published : Nov 21, 2021, 04:36 PM ISTUpdated : Nov 21, 2021, 05:29 PM IST

- ಬರದ ನಾಡು, ಬರಡು ಭೂಮಿಯಲ್ಲಿ ಬಂಗಾರದಂತಹ ಬೆಳೆ

- ಕೃಷಿ ಹೊಂಡ ನಿರ್ಮಿಸಿ ನೀರಿನ ಕಾರಂಜಿ ಹರಿಸಿ ಚಿನ್ನದಂತಹ ಬೆಳೆ 

- ಎಂ.ಕಾಮ್ ಪದವಿ ಪಡೆದು ಕೈತುಂಬಾ ಸಂಬಳ ಗಳಿಸುತ್ತಿದ್ದ ರೈತ

- ಉದ್ಯೋಗ ಬಿಟ್ಟು ಕೈ ಕೆಸರುಮಾಡಿಕೊಂಡು ಈಗ ಯಶಸ್ವಿ ಕೃಷಿಕ

ಬೀದರ್ (ನ. 21): ಕೈ ಕೆಸರಾದರೆ ಬಾಯಿ ಮೊಸರು ಎಂಬ ಗಾದೆ ಮಾತನ್ನ ಗಡಿ ಜಿಲ್ಲೆ ಬೀದರ್ ನ (Bidar) ಔರಾದ್ ತಾಲೂಕಿನ ನಾಗೂರು ಗ್ರಾಮದ ರೈತ ಸಂತೋಷ ಖಂದಾಡೆ ಮತ್ತೊಮ್ಮೆ ಸಾಬೀತು ಮಾಡಿದ್ದಾರೆ. 

ಎಂ.ಕಾಮ್ ಪದವಿಧರನಾಗಿರುವ ಸಂತೋಷ್ ಖಾಸಗಿ ಕಂಪನಿಯಲ್ಲಿ ಕೆಲಸ ಕೈತುಂಬ ಸಂಬಳ ಪಡೆಯುತ್ತಿದ್ದರು. ಕಂಪನಿಯ ಕೆಲಸಕ್ಕೆ ಗುಡ್‌ಬೈ ಹೇಳಿ ಸ್ವಂತ ಹೊಲದಲ್ಲಿ ಬೆವರು ಸುರಿಸಿ ಕೆಲಸ ಮಾಡಬೇಕು ಅಂತ ಪಣತೊಟ್ಟ ಇವರು ಎರಡು ಬಾರಿ ಬೋರ್‌ವೆಲ್ ಕೊರೆಸಿ ಕೈಸುಟ್ಟುಕೊಂಡಿದ್ದರು. ಮೂರನೇ ಪ್ರಯತ್ನದಲ್ಲಿ ಬೋರ್‌ವೆಲ್‌ನಲ್ಲಿ ನೀರು ಬಂದು ಯಶಸ್ವಿಯಾದರು.

ಕಲ್ಲುಗಳಿಂದ ತುಂಬಿಕೊಂಡಿದ್ದ ಈ ಬರಡು ಭೂಮಿಯಲ್ಲಿ ಸತತ ಎರಡು ಮೂರು ವರ್ಷ ಕಠಿಣ ಪರಿಶ್ರಮ ಪಟ್ಟು ಕಲ್ಲುಗಳನ್ನ ಹೊರಗೆದು ಮೂರು ಏಕರೆ ಪ್ರದೇಶದಲ್ಲಿ ಮೂರು ಸಾವಿರ ಪಪ್ಪಾಯಿ ನಾಟಿ ಮಾಡಿದ್ದಾರೆ. ಪಪ್ಪಾಯಿ ಗಿಡಗಳ ಮಧ್ಯೆ ಚೆಂಡು ಹೂವು (Mexican marigold) ಬೆಳಸಿ ಉತ್ತಮ ಆದಾಯ ಪಡೆಯುತ್ತಿದ್ದಾರೆ. ಕೃಷಿ ಹೊಂಡದಿಂದ ಹನಿ ನೀರಾವರಿ ಮೂಲಕ ಗಿಡಗಳಿಗೆ ನೀರುಣಿಸಲಾಗುತ್ತಿದೆ. ಈ ಮೂಲಕ ಭರ್ಜರಿ ಬೆಳೆ ಬೆಳೆಸಿ ಈ ಭಾಗದ ರೈತರಿಂದ ಸೈ ಎನಿಸಿಕೊಂಡಿದ್ದಾರೆ.

 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more