Bidar: ಉದ್ಯೋಗ ಬಿಟ್ಟು ಬರಡು ಭೂಮಿಯಲ್ಲಿ  ಬೆಳೆ ಬೆಳೆದು ಯಶಸ್ವಿಯಾದ ಯುವ ರೈತ!

Bidar: ಉದ್ಯೋಗ ಬಿಟ್ಟು ಬರಡು ಭೂಮಿಯಲ್ಲಿ ಬೆಳೆ ಬೆಳೆದು ಯಶಸ್ವಿಯಾದ ಯುವ ರೈತ!

Suvarna News   | Asianet News
Published : Nov 21, 2021, 04:36 PM ISTUpdated : Nov 21, 2021, 05:29 PM IST

- ಬರದ ನಾಡು, ಬರಡು ಭೂಮಿಯಲ್ಲಿ ಬಂಗಾರದಂತಹ ಬೆಳೆ

- ಕೃಷಿ ಹೊಂಡ ನಿರ್ಮಿಸಿ ನೀರಿನ ಕಾರಂಜಿ ಹರಿಸಿ ಚಿನ್ನದಂತಹ ಬೆಳೆ 

- ಎಂ.ಕಾಮ್ ಪದವಿ ಪಡೆದು ಕೈತುಂಬಾ ಸಂಬಳ ಗಳಿಸುತ್ತಿದ್ದ ರೈತ

- ಉದ್ಯೋಗ ಬಿಟ್ಟು ಕೈ ಕೆಸರುಮಾಡಿಕೊಂಡು ಈಗ ಯಶಸ್ವಿ ಕೃಷಿಕ

ಬೀದರ್ (ನ. 21): ಕೈ ಕೆಸರಾದರೆ ಬಾಯಿ ಮೊಸರು ಎಂಬ ಗಾದೆ ಮಾತನ್ನ ಗಡಿ ಜಿಲ್ಲೆ ಬೀದರ್ ನ (Bidar) ಔರಾದ್ ತಾಲೂಕಿನ ನಾಗೂರು ಗ್ರಾಮದ ರೈತ ಸಂತೋಷ ಖಂದಾಡೆ ಮತ್ತೊಮ್ಮೆ ಸಾಬೀತು ಮಾಡಿದ್ದಾರೆ. 

ಎಂ.ಕಾಮ್ ಪದವಿಧರನಾಗಿರುವ ಸಂತೋಷ್ ಖಾಸಗಿ ಕಂಪನಿಯಲ್ಲಿ ಕೆಲಸ ಕೈತುಂಬ ಸಂಬಳ ಪಡೆಯುತ್ತಿದ್ದರು. ಕಂಪನಿಯ ಕೆಲಸಕ್ಕೆ ಗುಡ್‌ಬೈ ಹೇಳಿ ಸ್ವಂತ ಹೊಲದಲ್ಲಿ ಬೆವರು ಸುರಿಸಿ ಕೆಲಸ ಮಾಡಬೇಕು ಅಂತ ಪಣತೊಟ್ಟ ಇವರು ಎರಡು ಬಾರಿ ಬೋರ್‌ವೆಲ್ ಕೊರೆಸಿ ಕೈಸುಟ್ಟುಕೊಂಡಿದ್ದರು. ಮೂರನೇ ಪ್ರಯತ್ನದಲ್ಲಿ ಬೋರ್‌ವೆಲ್‌ನಲ್ಲಿ ನೀರು ಬಂದು ಯಶಸ್ವಿಯಾದರು.

ಕಲ್ಲುಗಳಿಂದ ತುಂಬಿಕೊಂಡಿದ್ದ ಈ ಬರಡು ಭೂಮಿಯಲ್ಲಿ ಸತತ ಎರಡು ಮೂರು ವರ್ಷ ಕಠಿಣ ಪರಿಶ್ರಮ ಪಟ್ಟು ಕಲ್ಲುಗಳನ್ನ ಹೊರಗೆದು ಮೂರು ಏಕರೆ ಪ್ರದೇಶದಲ್ಲಿ ಮೂರು ಸಾವಿರ ಪಪ್ಪಾಯಿ ನಾಟಿ ಮಾಡಿದ್ದಾರೆ. ಪಪ್ಪಾಯಿ ಗಿಡಗಳ ಮಧ್ಯೆ ಚೆಂಡು ಹೂವು (Mexican marigold) ಬೆಳಸಿ ಉತ್ತಮ ಆದಾಯ ಪಡೆಯುತ್ತಿದ್ದಾರೆ. ಕೃಷಿ ಹೊಂಡದಿಂದ ಹನಿ ನೀರಾವರಿ ಮೂಲಕ ಗಿಡಗಳಿಗೆ ನೀರುಣಿಸಲಾಗುತ್ತಿದೆ. ಈ ಮೂಲಕ ಭರ್ಜರಿ ಬೆಳೆ ಬೆಳೆಸಿ ಈ ಭಾಗದ ರೈತರಿಂದ ಸೈ ಎನಿಸಿಕೊಂಡಿದ್ದಾರೆ.

 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more