Bidar: ಉದ್ಯೋಗ ಬಿಟ್ಟು ಬರಡು ಭೂಮಿಯಲ್ಲಿ  ಬೆಳೆ ಬೆಳೆದು ಯಶಸ್ವಿಯಾದ ಯುವ ರೈತ!

Bidar: ಉದ್ಯೋಗ ಬಿಟ್ಟು ಬರಡು ಭೂಮಿಯಲ್ಲಿ ಬೆಳೆ ಬೆಳೆದು ಯಶಸ್ವಿಯಾದ ಯುವ ರೈತ!

Suvarna News   | Asianet News
Published : Nov 21, 2021, 04:36 PM ISTUpdated : Nov 21, 2021, 05:29 PM IST

- ಬರದ ನಾಡು, ಬರಡು ಭೂಮಿಯಲ್ಲಿ ಬಂಗಾರದಂತಹ ಬೆಳೆ

- ಕೃಷಿ ಹೊಂಡ ನಿರ್ಮಿಸಿ ನೀರಿನ ಕಾರಂಜಿ ಹರಿಸಿ ಚಿನ್ನದಂತಹ ಬೆಳೆ 

- ಎಂ.ಕಾಮ್ ಪದವಿ ಪಡೆದು ಕೈತುಂಬಾ ಸಂಬಳ ಗಳಿಸುತ್ತಿದ್ದ ರೈತ

- ಉದ್ಯೋಗ ಬಿಟ್ಟು ಕೈ ಕೆಸರುಮಾಡಿಕೊಂಡು ಈಗ ಯಶಸ್ವಿ ಕೃಷಿಕ

ಬೀದರ್ (ನ. 21): ಕೈ ಕೆಸರಾದರೆ ಬಾಯಿ ಮೊಸರು ಎಂಬ ಗಾದೆ ಮಾತನ್ನ ಗಡಿ ಜಿಲ್ಲೆ ಬೀದರ್ ನ (Bidar) ಔರಾದ್ ತಾಲೂಕಿನ ನಾಗೂರು ಗ್ರಾಮದ ರೈತ ಸಂತೋಷ ಖಂದಾಡೆ ಮತ್ತೊಮ್ಮೆ ಸಾಬೀತು ಮಾಡಿದ್ದಾರೆ. 

ಎಂ.ಕಾಮ್ ಪದವಿಧರನಾಗಿರುವ ಸಂತೋಷ್ ಖಾಸಗಿ ಕಂಪನಿಯಲ್ಲಿ ಕೆಲಸ ಕೈತುಂಬ ಸಂಬಳ ಪಡೆಯುತ್ತಿದ್ದರು. ಕಂಪನಿಯ ಕೆಲಸಕ್ಕೆ ಗುಡ್‌ಬೈ ಹೇಳಿ ಸ್ವಂತ ಹೊಲದಲ್ಲಿ ಬೆವರು ಸುರಿಸಿ ಕೆಲಸ ಮಾಡಬೇಕು ಅಂತ ಪಣತೊಟ್ಟ ಇವರು ಎರಡು ಬಾರಿ ಬೋರ್‌ವೆಲ್ ಕೊರೆಸಿ ಕೈಸುಟ್ಟುಕೊಂಡಿದ್ದರು. ಮೂರನೇ ಪ್ರಯತ್ನದಲ್ಲಿ ಬೋರ್‌ವೆಲ್‌ನಲ್ಲಿ ನೀರು ಬಂದು ಯಶಸ್ವಿಯಾದರು.

ಕಲ್ಲುಗಳಿಂದ ತುಂಬಿಕೊಂಡಿದ್ದ ಈ ಬರಡು ಭೂಮಿಯಲ್ಲಿ ಸತತ ಎರಡು ಮೂರು ವರ್ಷ ಕಠಿಣ ಪರಿಶ್ರಮ ಪಟ್ಟು ಕಲ್ಲುಗಳನ್ನ ಹೊರಗೆದು ಮೂರು ಏಕರೆ ಪ್ರದೇಶದಲ್ಲಿ ಮೂರು ಸಾವಿರ ಪಪ್ಪಾಯಿ ನಾಟಿ ಮಾಡಿದ್ದಾರೆ. ಪಪ್ಪಾಯಿ ಗಿಡಗಳ ಮಧ್ಯೆ ಚೆಂಡು ಹೂವು (Mexican marigold) ಬೆಳಸಿ ಉತ್ತಮ ಆದಾಯ ಪಡೆಯುತ್ತಿದ್ದಾರೆ. ಕೃಷಿ ಹೊಂಡದಿಂದ ಹನಿ ನೀರಾವರಿ ಮೂಲಕ ಗಿಡಗಳಿಗೆ ನೀರುಣಿಸಲಾಗುತ್ತಿದೆ. ಈ ಮೂಲಕ ಭರ್ಜರಿ ಬೆಳೆ ಬೆಳೆಸಿ ಈ ಭಾಗದ ರೈತರಿಂದ ಸೈ ಎನಿಸಿಕೊಂಡಿದ್ದಾರೆ.

 

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
Read more