Bidar: ಉದ್ಯೋಗ ಬಿಟ್ಟು ಬರಡು ಭೂಮಿಯಲ್ಲಿ  ಬೆಳೆ ಬೆಳೆದು ಯಶಸ್ವಿಯಾದ ಯುವ ರೈತ!

Bidar: ಉದ್ಯೋಗ ಬಿಟ್ಟು ಬರಡು ಭೂಮಿಯಲ್ಲಿ ಬೆಳೆ ಬೆಳೆದು ಯಶಸ್ವಿಯಾದ ಯುವ ರೈತ!

Suvarna News   | Asianet News
Published : Nov 21, 2021, 04:36 PM ISTUpdated : Nov 21, 2021, 05:29 PM IST

- ಬರದ ನಾಡು, ಬರಡು ಭೂಮಿಯಲ್ಲಿ ಬಂಗಾರದಂತಹ ಬೆಳೆ

- ಕೃಷಿ ಹೊಂಡ ನಿರ್ಮಿಸಿ ನೀರಿನ ಕಾರಂಜಿ ಹರಿಸಿ ಚಿನ್ನದಂತಹ ಬೆಳೆ 

- ಎಂ.ಕಾಮ್ ಪದವಿ ಪಡೆದು ಕೈತುಂಬಾ ಸಂಬಳ ಗಳಿಸುತ್ತಿದ್ದ ರೈತ

- ಉದ್ಯೋಗ ಬಿಟ್ಟು ಕೈ ಕೆಸರುಮಾಡಿಕೊಂಡು ಈಗ ಯಶಸ್ವಿ ಕೃಷಿಕ

ಬೀದರ್ (ನ. 21): ಕೈ ಕೆಸರಾದರೆ ಬಾಯಿ ಮೊಸರು ಎಂಬ ಗಾದೆ ಮಾತನ್ನ ಗಡಿ ಜಿಲ್ಲೆ ಬೀದರ್ ನ (Bidar) ಔರಾದ್ ತಾಲೂಕಿನ ನಾಗೂರು ಗ್ರಾಮದ ರೈತ ಸಂತೋಷ ಖಂದಾಡೆ ಮತ್ತೊಮ್ಮೆ ಸಾಬೀತು ಮಾಡಿದ್ದಾರೆ. 

ಎಂ.ಕಾಮ್ ಪದವಿಧರನಾಗಿರುವ ಸಂತೋಷ್ ಖಾಸಗಿ ಕಂಪನಿಯಲ್ಲಿ ಕೆಲಸ ಕೈತುಂಬ ಸಂಬಳ ಪಡೆಯುತ್ತಿದ್ದರು. ಕಂಪನಿಯ ಕೆಲಸಕ್ಕೆ ಗುಡ್‌ಬೈ ಹೇಳಿ ಸ್ವಂತ ಹೊಲದಲ್ಲಿ ಬೆವರು ಸುರಿಸಿ ಕೆಲಸ ಮಾಡಬೇಕು ಅಂತ ಪಣತೊಟ್ಟ ಇವರು ಎರಡು ಬಾರಿ ಬೋರ್‌ವೆಲ್ ಕೊರೆಸಿ ಕೈಸುಟ್ಟುಕೊಂಡಿದ್ದರು. ಮೂರನೇ ಪ್ರಯತ್ನದಲ್ಲಿ ಬೋರ್‌ವೆಲ್‌ನಲ್ಲಿ ನೀರು ಬಂದು ಯಶಸ್ವಿಯಾದರು.

ಕಲ್ಲುಗಳಿಂದ ತುಂಬಿಕೊಂಡಿದ್ದ ಈ ಬರಡು ಭೂಮಿಯಲ್ಲಿ ಸತತ ಎರಡು ಮೂರು ವರ್ಷ ಕಠಿಣ ಪರಿಶ್ರಮ ಪಟ್ಟು ಕಲ್ಲುಗಳನ್ನ ಹೊರಗೆದು ಮೂರು ಏಕರೆ ಪ್ರದೇಶದಲ್ಲಿ ಮೂರು ಸಾವಿರ ಪಪ್ಪಾಯಿ ನಾಟಿ ಮಾಡಿದ್ದಾರೆ. ಪಪ್ಪಾಯಿ ಗಿಡಗಳ ಮಧ್ಯೆ ಚೆಂಡು ಹೂವು (Mexican marigold) ಬೆಳಸಿ ಉತ್ತಮ ಆದಾಯ ಪಡೆಯುತ್ತಿದ್ದಾರೆ. ಕೃಷಿ ಹೊಂಡದಿಂದ ಹನಿ ನೀರಾವರಿ ಮೂಲಕ ಗಿಡಗಳಿಗೆ ನೀರುಣಿಸಲಾಗುತ್ತಿದೆ. ಈ ಮೂಲಕ ಭರ್ಜರಿ ಬೆಳೆ ಬೆಳೆಸಿ ಈ ಭಾಗದ ರೈತರಿಂದ ಸೈ ಎನಿಸಿಕೊಂಡಿದ್ದಾರೆ.

 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more