ಆನ್‌ಲೈನ್ ಗೇಮ್‌ ಹುಚ್ಚು, ಆತ್ಮಹತ್ಯೆಗೆ ಯತ್ನಿಸಿದ ಯುವಕ ಸಾವು

ಆನ್‌ಲೈನ್ ಗೇಮ್‌ ಹುಚ್ಚು, ಆತ್ಮಹತ್ಯೆಗೆ ಯತ್ನಿಸಿದ ಯುವಕ ಸಾವು

Published : Dec 28, 2024, 09:50 PM ISTUpdated : Dec 28, 2024, 09:51 PM IST

ಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಬೀದರ್‌ನಲ್ಲಿ ನಡೆದಿದೆ. 25 ವರ್ಷದ ವಿಜಯ್‌ಕುಮಾರ್ ಹೊಳ್ಳೆ ಎಂಬ ಯುವಕ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು.

ಬೀದರ್‌ (ಡಿ.28): ಆನ್‌ಲೈನ್ ಗೇಮ್‌ ಹುಚ್ಚಿನಿಂದಾಗಿ, ಆತ್ಮಹತ್ಯೆಗೆ ಯತ್ನಿಸಿದ ಯುವಕ ಸಾವು ಕಂಡಿರುವ ಘಟನೆ ನಡೆದಿದೆ. ಚಿಕಿತ್ಸೆ ಫಲಕಾರಿಯಾಗದೇ ಶನಿವಾರ ಮುಂಜಾನೆ 25 ವರ್ಷದ ವಿಜಯ್‌ಕುಮಾರ್ ಹೊಳ್ಳೆ ಸಾವು ಕಂಡಿದ್ದಾರೆ. ಬೀದರ್ ಜಿಲ್ಲೆಯ ಹುಲಸೂರು ತಾಲೂಕಿನ ಬೇಲೂರು ಗ್ರಾಮದ ಯುವಕ, .25ರಂದು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ. ಭಾಲ್ಕಿ ತಾಲೂಕಿನ ಜ್ಯೋತಿ ತಾಂಡಾ ಬಳಿ ಆತ್ಮಹತ್ಯೆಗೆ ಪ್ರಯತ್ನ ಮಾಡಿದ್ದ.

ಎರಡು ದಿನಗಳ ಕಾಲ ಬೀದರ್ ಬ್ರಿಮ್ಸ್ ಆಸ್ಪತ್ರೆಯಲ್ಲಿ ಸಾವು ಬದುಕಿನ ಮಧ್ಯೆ ಹೋರಾಡಿದ್ದ ಯುವಕನನ್ನು ಬಸವಕಲ್ಯಾಣ ಶಾಸಕ ಶರಣು ಸಲಗರ್ ಭೇಟಿ ಮಾಡಿದ್ದರು. ಆನ್‌ಲೈನ್‌ ಗೇಮ್‌ಗೆ ಯುವಕರು ಬಲಿಯಾಗುತ್ತಿದ್ದು, ಸರ್ಕಾರ ಆನ್‌ಲೈನ್ ಗೇಮ್‌ಗಳಿಗೆ ಕಡಿವಾಣ ಹಾಕುವಂತೆ ಆಗ್ರಹಿಸಿದ್ದರು. ಬಿ.ಫಾರ್ಮಸಿ ಪದವೀಧರನಾಗಿದ್ದ ವಿಜಯ್‌ಕುಮಾರ್ ಹೊಳ್ಳೆ, ಮೊದಲಿಗೆ ಹತ್ತು ಲಕ್ಷ ಸಾಲ ಮಾಡಿ ಆನ್‌ಲೈನ್ ಗೇಮ್‌ನಲ್ಲಿ ಹಣ‌ ಕಳೆದುಕೊಂಡಿದ್ದ.

ನಿವೇದಿತಾ ಗೌಡ VS ಜ್ಯೋತಿ ರೈ: ಹಾಟ್‌ನೆಸ್‌ನಲ್ಲಿ ಯಾರು ಬೆಸ್ಟ್‌!

ಕುಟುಂಬಸ್ಥರು ಈ ಹತ್ತು ಲಕ್ಷ ಸಾಲ ತೀರಿಸಿದ‌ ಮೇಲೆ ಮತ್ತೆ 2 ಲಕ್ಷ ಸಾಲ‌ ಮಾಡಿಕೊಂಡಿದ್ದ. ಈ ಸಾಲದ ವಿಷಯ ಮನೆಯಲ್ಲಿ ಗೊತ್ತಾದ್ರೆ ತೊಂದ್ರೆ ಆಗುತ್ತೆ ಅಂತಾ ಯುವ ಆತ್ಮಹತ್ಯೆಗೆ ಯತ್ನ ಮಾಡಿದ್ದ. ಗಂಭೀರ ಗಾಯಗೊಂಡ ಯುವಕನನ್ನು ಬೀದರ್ ಬ್ರಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಈ ಕುರಿತು ಮೇಹಕರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು
 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more