ಆನ್‌ಲೈನ್ ಗೇಮ್‌ ಹುಚ್ಚು, ಆತ್ಮಹತ್ಯೆಗೆ ಯತ್ನಿಸಿದ ಯುವಕ ಸಾವು

ಆನ್‌ಲೈನ್ ಗೇಮ್‌ ಹುಚ್ಚು, ಆತ್ಮಹತ್ಯೆಗೆ ಯತ್ನಿಸಿದ ಯುವಕ ಸಾವು

Published : Dec 28, 2024, 09:50 PM ISTUpdated : Dec 28, 2024, 09:51 PM IST

ಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಬೀದರ್‌ನಲ್ಲಿ ನಡೆದಿದೆ. 25 ವರ್ಷದ ವಿಜಯ್‌ಕುಮಾರ್ ಹೊಳ್ಳೆ ಎಂಬ ಯುವಕ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು.

ಬೀದರ್‌ (ಡಿ.28): ಆನ್‌ಲೈನ್ ಗೇಮ್‌ ಹುಚ್ಚಿನಿಂದಾಗಿ, ಆತ್ಮಹತ್ಯೆಗೆ ಯತ್ನಿಸಿದ ಯುವಕ ಸಾವು ಕಂಡಿರುವ ಘಟನೆ ನಡೆದಿದೆ. ಚಿಕಿತ್ಸೆ ಫಲಕಾರಿಯಾಗದೇ ಶನಿವಾರ ಮುಂಜಾನೆ 25 ವರ್ಷದ ವಿಜಯ್‌ಕುಮಾರ್ ಹೊಳ್ಳೆ ಸಾವು ಕಂಡಿದ್ದಾರೆ. ಬೀದರ್ ಜಿಲ್ಲೆಯ ಹುಲಸೂರು ತಾಲೂಕಿನ ಬೇಲೂರು ಗ್ರಾಮದ ಯುವಕ, .25ರಂದು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ. ಭಾಲ್ಕಿ ತಾಲೂಕಿನ ಜ್ಯೋತಿ ತಾಂಡಾ ಬಳಿ ಆತ್ಮಹತ್ಯೆಗೆ ಪ್ರಯತ್ನ ಮಾಡಿದ್ದ.

ಎರಡು ದಿನಗಳ ಕಾಲ ಬೀದರ್ ಬ್ರಿಮ್ಸ್ ಆಸ್ಪತ್ರೆಯಲ್ಲಿ ಸಾವು ಬದುಕಿನ ಮಧ್ಯೆ ಹೋರಾಡಿದ್ದ ಯುವಕನನ್ನು ಬಸವಕಲ್ಯಾಣ ಶಾಸಕ ಶರಣು ಸಲಗರ್ ಭೇಟಿ ಮಾಡಿದ್ದರು. ಆನ್‌ಲೈನ್‌ ಗೇಮ್‌ಗೆ ಯುವಕರು ಬಲಿಯಾಗುತ್ತಿದ್ದು, ಸರ್ಕಾರ ಆನ್‌ಲೈನ್ ಗೇಮ್‌ಗಳಿಗೆ ಕಡಿವಾಣ ಹಾಕುವಂತೆ ಆಗ್ರಹಿಸಿದ್ದರು. ಬಿ.ಫಾರ್ಮಸಿ ಪದವೀಧರನಾಗಿದ್ದ ವಿಜಯ್‌ಕುಮಾರ್ ಹೊಳ್ಳೆ, ಮೊದಲಿಗೆ ಹತ್ತು ಲಕ್ಷ ಸಾಲ ಮಾಡಿ ಆನ್‌ಲೈನ್ ಗೇಮ್‌ನಲ್ಲಿ ಹಣ‌ ಕಳೆದುಕೊಂಡಿದ್ದ.

ನಿವೇದಿತಾ ಗೌಡ VS ಜ್ಯೋತಿ ರೈ: ಹಾಟ್‌ನೆಸ್‌ನಲ್ಲಿ ಯಾರು ಬೆಸ್ಟ್‌!

ಕುಟುಂಬಸ್ಥರು ಈ ಹತ್ತು ಲಕ್ಷ ಸಾಲ ತೀರಿಸಿದ‌ ಮೇಲೆ ಮತ್ತೆ 2 ಲಕ್ಷ ಸಾಲ‌ ಮಾಡಿಕೊಂಡಿದ್ದ. ಈ ಸಾಲದ ವಿಷಯ ಮನೆಯಲ್ಲಿ ಗೊತ್ತಾದ್ರೆ ತೊಂದ್ರೆ ಆಗುತ್ತೆ ಅಂತಾ ಯುವ ಆತ್ಮಹತ್ಯೆಗೆ ಯತ್ನ ಮಾಡಿದ್ದ. ಗಂಭೀರ ಗಾಯಗೊಂಡ ಯುವಕನನ್ನು ಬೀದರ್ ಬ್ರಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಈ ಕುರಿತು ಮೇಹಕರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು
 

23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
Read more