ಆನ್‌ಲೈನ್ ಗೇಮ್‌ ಹುಚ್ಚು, ಆತ್ಮಹತ್ಯೆಗೆ ಯತ್ನಿಸಿದ ಯುವಕ ಸಾವು

ಆನ್‌ಲೈನ್ ಗೇಮ್‌ ಹುಚ್ಚು, ಆತ್ಮಹತ್ಯೆಗೆ ಯತ್ನಿಸಿದ ಯುವಕ ಸಾವು

Published : Dec 28, 2024, 09:50 PM ISTUpdated : Dec 28, 2024, 09:51 PM IST

ಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಬೀದರ್‌ನಲ್ಲಿ ನಡೆದಿದೆ. 25 ವರ್ಷದ ವಿಜಯ್‌ಕುಮಾರ್ ಹೊಳ್ಳೆ ಎಂಬ ಯುವಕ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು.

ಬೀದರ್‌ (ಡಿ.28): ಆನ್‌ಲೈನ್ ಗೇಮ್‌ ಹುಚ್ಚಿನಿಂದಾಗಿ, ಆತ್ಮಹತ್ಯೆಗೆ ಯತ್ನಿಸಿದ ಯುವಕ ಸಾವು ಕಂಡಿರುವ ಘಟನೆ ನಡೆದಿದೆ. ಚಿಕಿತ್ಸೆ ಫಲಕಾರಿಯಾಗದೇ ಶನಿವಾರ ಮುಂಜಾನೆ 25 ವರ್ಷದ ವಿಜಯ್‌ಕುಮಾರ್ ಹೊಳ್ಳೆ ಸಾವು ಕಂಡಿದ್ದಾರೆ. ಬೀದರ್ ಜಿಲ್ಲೆಯ ಹುಲಸೂರು ತಾಲೂಕಿನ ಬೇಲೂರು ಗ್ರಾಮದ ಯುವಕ, .25ರಂದು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ. ಭಾಲ್ಕಿ ತಾಲೂಕಿನ ಜ್ಯೋತಿ ತಾಂಡಾ ಬಳಿ ಆತ್ಮಹತ್ಯೆಗೆ ಪ್ರಯತ್ನ ಮಾಡಿದ್ದ.

ಎರಡು ದಿನಗಳ ಕಾಲ ಬೀದರ್ ಬ್ರಿಮ್ಸ್ ಆಸ್ಪತ್ರೆಯಲ್ಲಿ ಸಾವು ಬದುಕಿನ ಮಧ್ಯೆ ಹೋರಾಡಿದ್ದ ಯುವಕನನ್ನು ಬಸವಕಲ್ಯಾಣ ಶಾಸಕ ಶರಣು ಸಲಗರ್ ಭೇಟಿ ಮಾಡಿದ್ದರು. ಆನ್‌ಲೈನ್‌ ಗೇಮ್‌ಗೆ ಯುವಕರು ಬಲಿಯಾಗುತ್ತಿದ್ದು, ಸರ್ಕಾರ ಆನ್‌ಲೈನ್ ಗೇಮ್‌ಗಳಿಗೆ ಕಡಿವಾಣ ಹಾಕುವಂತೆ ಆಗ್ರಹಿಸಿದ್ದರು. ಬಿ.ಫಾರ್ಮಸಿ ಪದವೀಧರನಾಗಿದ್ದ ವಿಜಯ್‌ಕುಮಾರ್ ಹೊಳ್ಳೆ, ಮೊದಲಿಗೆ ಹತ್ತು ಲಕ್ಷ ಸಾಲ ಮಾಡಿ ಆನ್‌ಲೈನ್ ಗೇಮ್‌ನಲ್ಲಿ ಹಣ‌ ಕಳೆದುಕೊಂಡಿದ್ದ.

ನಿವೇದಿತಾ ಗೌಡ VS ಜ್ಯೋತಿ ರೈ: ಹಾಟ್‌ನೆಸ್‌ನಲ್ಲಿ ಯಾರು ಬೆಸ್ಟ್‌!

ಕುಟುಂಬಸ್ಥರು ಈ ಹತ್ತು ಲಕ್ಷ ಸಾಲ ತೀರಿಸಿದ‌ ಮೇಲೆ ಮತ್ತೆ 2 ಲಕ್ಷ ಸಾಲ‌ ಮಾಡಿಕೊಂಡಿದ್ದ. ಈ ಸಾಲದ ವಿಷಯ ಮನೆಯಲ್ಲಿ ಗೊತ್ತಾದ್ರೆ ತೊಂದ್ರೆ ಆಗುತ್ತೆ ಅಂತಾ ಯುವ ಆತ್ಮಹತ್ಯೆಗೆ ಯತ್ನ ಮಾಡಿದ್ದ. ಗಂಭೀರ ಗಾಯಗೊಂಡ ಯುವಕನನ್ನು ಬೀದರ್ ಬ್ರಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಈ ಕುರಿತು ಮೇಹಕರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು
 

21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
Read more