BIG 3: 4 ವರ್ಷ ಕಳೆದರೂ ಕೊಡಗು ಪ್ರವಾಹ ಸಂತ್ರಸ್ತರಿಗೆ ಸಿಕ್ಕಿಲ್ಲ ಸೂರು!

BIG 3: 4 ವರ್ಷ ಕಳೆದರೂ ಕೊಡಗು ಪ್ರವಾಹ ಸಂತ್ರಸ್ತರಿಗೆ ಸಿಕ್ಕಿಲ್ಲ ಸೂರು!

Published : Nov 23, 2022, 04:35 PM ISTUpdated : Nov 23, 2022, 05:57 PM IST

Big 3 Kodagu Flood Victims Story: ಕೊಡಗು  ಜಿಲ್ಲೆಯಲ್ಲಿ  ಮನೆ  ಕಳೆದುಕೊಂಡವರಿಗೆ  ಸರ್ಕಾರದಿಂದ ನಿರ್ಮಿಸಿದ ಆಶ್ರಯ ಮನೆಗಳನ್ನ ಹಂತ ಹಂತವಾಗಿ ನೀಡಲಾಗಿದೆ. ಆದ್ರೆ, ಮಡಿಕೇರಿ ತಾಲೂಕಿನ .ಕೆ. ನಿಡುಗಣೆ  ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಮನೆ ನಿರ್ಮಾಣ ಆಗಿದ್ರು ಇಲ್ಲಿ ತನಕ ಹಂಚಿಕೆ ಮಾಡಿಲ್ಲ.  

ಕೊಡಗು (ನ. 23): ಬಡವರಿಗಾಗಿ ಸರ್ಕಾರ ನೂರೆಂಟು ಯೋಜನೆಗಳನ್ನ ತರುತ್ತೆ. ಇಂಪ್ಲಿಮೆಂಟ್ ಕೂಡ ಆಗುತ್ತೆ. ಆದ್ರೆ, ಅದನ್ನ ಫಲಾನುಭವಿಗಳಿಗೆ ಕೊಡದೇ ಹೇಗೆಲ್ಲ ಸತಾಯಿಸ್ತಾರೆ ಗೊತ್ತಾ? ಯೆಸ್, 2018, ಅಂದು  ಇಡೀ  ರಾಜ್ಯದ ಜನರನ್ನ ಕಂಗೆಡಿಸಿದ ದಿನ, ಎಲ್ರಲ್ಲೂ, ಭಯ, ಆತಂಕ, ದುಗುಡ, ಕಣ್ಣೀರು,  ಯಾಕಂದ್ರೆ ಕೊಡಗಿನಲ್ಲಿ ಭೀಕರ ಪ್ರವಾಹದ ಹೊಡೆತಕ್ಕೆ ಭೂ ಕುಸಿತ ಉಂಟಾಯ್ತು. ಭೂ ಕುಸಿತಕ್ಕೆ ಅದೆಷ್ಟೋ ಜನ ಮನೆಗಳನ್ನ ಕಳೆದುಕೊಂಡ್ರು. ದಿಕ್ಕು ತೋಚದಂತೆ ಆಯ್ತು.  ಇಡೀ ಕರುನಾಡು ಅವತ್ತು ಕೊಡಗಿನ  ಜನರ ಸಂಕಷ್ಟಕ್ಕೆ ಮಿಡಿಯಿತು. 2018ರ ಸಮ್ಮಿಶ್ರ  ಸರ್ಕಾರ ಕೂಡ ಜನರ ನೆರವಿಗೆ ಧಾವಿಸಿತು. ಮನೆ ಕಳೆದುಕೊಂಡವರಿಗೆ ಮನೆ ಕಟ್ಟಿ ಕೊಡುವ ಭರವಸೆಯನ್ನು ನೀಡಿತು. ಅದರಂತೆ ಮನೆಗಳ ನಿರ್ಮಾಣ ಕಾಮಗಾರಿ ಶುರು ಆಯ್ತು. 

ಅಂದು, ಮನೆ ಕಳೆದುಕೊಂಡವರಿಗೆ 10 ತಿಂಗಳಲ್ಲಿಯೇ ಮನೆ ನಿರ್ಮಿಸಿ ಕೊಡೋ ಭರವಸೆಯನ್ನು ನೀಡಿತ್ತು. ಅದುವರೆಗೆ ಪ್ರತಿ ತಿಂಗಳು ಮನೆಯ ಬಾಡಿಗೆ ಕೊಡುವ ಭರವಸೆ ನೀಡಿತ್ತು.ಆದ್ರೆ, 10 ತಿಂಗಳ ನಂತರ ಸರ್ಕಾರ ಬಾಡಿಗೆ ಕೊಡೋದನ್ನ ನಿಲ್ಲಿಸಿ ಬಿಟ್ಟಿತು. ಕೊಡಗು  ಜಿಲ್ಲೆಯಲ್ಲಿ  ಮನೆ  ಕಳೆದುಕೊಂಡವರಿಗೆ  ಸರ್ಕಾರದಿಂದ ನಿರ್ಮಿಸಿದ ಆಶ್ರಯ ಮನೆಗಳನ್ನ ಹಂತ ಹಂತವಾಗಿ ನೀಡಲಾಗಿದೆ. ಆದ್ರೆ, ಮಡಿಕೇರಿ ತಾಲೂಕಿನ .ಕೆ. ನಿಡುಗಣೆ  ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಮನೆ ನಿರ್ಮಾಣ ಆಗಿದ್ರು ಇಲ್ಲಿ ತನಕ ಹಂಚಿಕೆ ಮಾಡಿಲ್ಲ. 

10 ಅಲ್ಲ, 20 ಅಲ್ಲ ಬರೋಬ್ಬರಿ 70 ಮನೆಗಳು ನಿರ್ಮಾಣ ಆಗಿದೆ. ಫಲಾನುಭವಿಗಳಿಗೆ ಇಲ್ಲಿ ತನಕ ಹಸ್ತಾಂತರ ಮಾಡಿಲ್ಲ. ಹೀಗಾಗಿ ಇವರೆಲ್ಲ ಇವತ್ತಿಗೂ ಅದೆಂಥ ದುಸ್ಥಿಯಲ್ಲಿ ಇದ್ದಾರೆ ನೋಡಿ. ಒಂದು ಕಡೇ ಮೂಲಭೂತ ಸೌಕರ್ಯವಿಲ್ಲ. ಮತ್ತೊಂದು ಕಡೇ ಕೂಲಿನಾಲಿ ಮಾಡಿ ಬಾಡಿಗೆ ಕಟ್ಟಬೇಕಾದ ಪರಿಸ್ಥಿತಿ ಇವರದ್ದು. 

ಇದನ್ನೂ ನೋಡಿBIG 3: ಉದ್ಘಾಟನೆಯಾಗದೆ ಪಾಳು ಬಿದ್ದಿರುವ ರಾಯಚೂರಿನ ಅಂಬೇಡ್ಕರ್ ಭವನ

ಈಗಾಗಲೇ ಈ ಫಲಾನುಭವಿಗಳು 2022ರ ಜೂನ್ ತಿಂಗಳಲ್ಲಿ ಅಂದರೇ ಈ ವರ್ಷದ ಮಳೆಗಾಲಕ್ಕೂ ಮುನ್ನವೇ ಈ  70 ಕುಟುಂಬಗಳು ಅಧಿಕಾರಿಗಳನ್ನ ಭೇಟಿ ಮಾಡಿದ್ರು. ಆಗ ಸಂಬಂಧಪಟ್ಟ ಅಧಿಕಾರಿಗಳು, ಜನಪ್ರತಿನಿಧಿಗಳನ್ನ ಕೇಳಿದ್ರೆ ಸಣ್ಣಪುಟ್ಟ ಕೆಲಸ ಇದ್ದು ಹಸ್ತಾಂತರ ಮಾಡೋದಾಗಿ ಭರವಸೆ ನೀಡಿದ್ರು. ಆದ್ರೆ, ಇಲ್ಲಿ ತನಕವು ಯಾರಿಗೂ ಹಂಚಿಕೆ ಮಾಡದೇ ಉಡಾಫೆ ಮಾಡ್ತಿದ್ದಾರೆ ಅಂತಾರೆ ಫಲಾನುಭವಿಗಳು.  ಒಟ್ಟಿನಲ್ಲಿ ಸರ್ಕಾರದಿಂದ ಮನೆಗಳು ನಿರ್ಮಾಣ ಆಗಿದ್ರು ಫಲಾನುಭವಿಗಳಿಗೆ ಹಂಚಿಕೆ ಮಾಡೋಕೆ ಇಷ್ಟು ದಿನ ಬೇಕ. ಸಂಬಂಧಪಟ್ಟ ಅಧಿಕಾರಿಗಳೇ, ಜನಪ್ರತಿನಿಧಿಗಳೇ ಏಷ್ಯಾನೆಟ್ ಸುವರ್ಣ ನ್ಯೂಸ್ ಬಿಗ್3ಯಲ್ಲಿ  ವರದಿ ಪ್ರಸಾರ ಆದ್ಮೇಲಾದ್ರೂ ಎಚ್ಚೆತ್ತುಕೊಳ್ತಾರಾ ನೋಡೋಣ 

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more