BIG 3: 4 ವರ್ಷ ಕಳೆದರೂ ಕೊಡಗು ಪ್ರವಾಹ ಸಂತ್ರಸ್ತರಿಗೆ ಸಿಕ್ಕಿಲ್ಲ ಸೂರು!

BIG 3: 4 ವರ್ಷ ಕಳೆದರೂ ಕೊಡಗು ಪ್ರವಾಹ ಸಂತ್ರಸ್ತರಿಗೆ ಸಿಕ್ಕಿಲ್ಲ ಸೂರು!

Published : Nov 23, 2022, 04:35 PM ISTUpdated : Nov 23, 2022, 05:57 PM IST

Big 3 Kodagu Flood Victims Story: ಕೊಡಗು  ಜಿಲ್ಲೆಯಲ್ಲಿ  ಮನೆ  ಕಳೆದುಕೊಂಡವರಿಗೆ  ಸರ್ಕಾರದಿಂದ ನಿರ್ಮಿಸಿದ ಆಶ್ರಯ ಮನೆಗಳನ್ನ ಹಂತ ಹಂತವಾಗಿ ನೀಡಲಾಗಿದೆ. ಆದ್ರೆ, ಮಡಿಕೇರಿ ತಾಲೂಕಿನ .ಕೆ. ನಿಡುಗಣೆ  ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಮನೆ ನಿರ್ಮಾಣ ಆಗಿದ್ರು ಇಲ್ಲಿ ತನಕ ಹಂಚಿಕೆ ಮಾಡಿಲ್ಲ.  

ಕೊಡಗು (ನ. 23): ಬಡವರಿಗಾಗಿ ಸರ್ಕಾರ ನೂರೆಂಟು ಯೋಜನೆಗಳನ್ನ ತರುತ್ತೆ. ಇಂಪ್ಲಿಮೆಂಟ್ ಕೂಡ ಆಗುತ್ತೆ. ಆದ್ರೆ, ಅದನ್ನ ಫಲಾನುಭವಿಗಳಿಗೆ ಕೊಡದೇ ಹೇಗೆಲ್ಲ ಸತಾಯಿಸ್ತಾರೆ ಗೊತ್ತಾ? ಯೆಸ್, 2018, ಅಂದು  ಇಡೀ  ರಾಜ್ಯದ ಜನರನ್ನ ಕಂಗೆಡಿಸಿದ ದಿನ, ಎಲ್ರಲ್ಲೂ, ಭಯ, ಆತಂಕ, ದುಗುಡ, ಕಣ್ಣೀರು,  ಯಾಕಂದ್ರೆ ಕೊಡಗಿನಲ್ಲಿ ಭೀಕರ ಪ್ರವಾಹದ ಹೊಡೆತಕ್ಕೆ ಭೂ ಕುಸಿತ ಉಂಟಾಯ್ತು. ಭೂ ಕುಸಿತಕ್ಕೆ ಅದೆಷ್ಟೋ ಜನ ಮನೆಗಳನ್ನ ಕಳೆದುಕೊಂಡ್ರು. ದಿಕ್ಕು ತೋಚದಂತೆ ಆಯ್ತು.  ಇಡೀ ಕರುನಾಡು ಅವತ್ತು ಕೊಡಗಿನ  ಜನರ ಸಂಕಷ್ಟಕ್ಕೆ ಮಿಡಿಯಿತು. 2018ರ ಸಮ್ಮಿಶ್ರ  ಸರ್ಕಾರ ಕೂಡ ಜನರ ನೆರವಿಗೆ ಧಾವಿಸಿತು. ಮನೆ ಕಳೆದುಕೊಂಡವರಿಗೆ ಮನೆ ಕಟ್ಟಿ ಕೊಡುವ ಭರವಸೆಯನ್ನು ನೀಡಿತು. ಅದರಂತೆ ಮನೆಗಳ ನಿರ್ಮಾಣ ಕಾಮಗಾರಿ ಶುರು ಆಯ್ತು. 

ಅಂದು, ಮನೆ ಕಳೆದುಕೊಂಡವರಿಗೆ 10 ತಿಂಗಳಲ್ಲಿಯೇ ಮನೆ ನಿರ್ಮಿಸಿ ಕೊಡೋ ಭರವಸೆಯನ್ನು ನೀಡಿತ್ತು. ಅದುವರೆಗೆ ಪ್ರತಿ ತಿಂಗಳು ಮನೆಯ ಬಾಡಿಗೆ ಕೊಡುವ ಭರವಸೆ ನೀಡಿತ್ತು.ಆದ್ರೆ, 10 ತಿಂಗಳ ನಂತರ ಸರ್ಕಾರ ಬಾಡಿಗೆ ಕೊಡೋದನ್ನ ನಿಲ್ಲಿಸಿ ಬಿಟ್ಟಿತು. ಕೊಡಗು  ಜಿಲ್ಲೆಯಲ್ಲಿ  ಮನೆ  ಕಳೆದುಕೊಂಡವರಿಗೆ  ಸರ್ಕಾರದಿಂದ ನಿರ್ಮಿಸಿದ ಆಶ್ರಯ ಮನೆಗಳನ್ನ ಹಂತ ಹಂತವಾಗಿ ನೀಡಲಾಗಿದೆ. ಆದ್ರೆ, ಮಡಿಕೇರಿ ತಾಲೂಕಿನ .ಕೆ. ನಿಡುಗಣೆ  ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಮನೆ ನಿರ್ಮಾಣ ಆಗಿದ್ರು ಇಲ್ಲಿ ತನಕ ಹಂಚಿಕೆ ಮಾಡಿಲ್ಲ. 

10 ಅಲ್ಲ, 20 ಅಲ್ಲ ಬರೋಬ್ಬರಿ 70 ಮನೆಗಳು ನಿರ್ಮಾಣ ಆಗಿದೆ. ಫಲಾನುಭವಿಗಳಿಗೆ ಇಲ್ಲಿ ತನಕ ಹಸ್ತಾಂತರ ಮಾಡಿಲ್ಲ. ಹೀಗಾಗಿ ಇವರೆಲ್ಲ ಇವತ್ತಿಗೂ ಅದೆಂಥ ದುಸ್ಥಿಯಲ್ಲಿ ಇದ್ದಾರೆ ನೋಡಿ. ಒಂದು ಕಡೇ ಮೂಲಭೂತ ಸೌಕರ್ಯವಿಲ್ಲ. ಮತ್ತೊಂದು ಕಡೇ ಕೂಲಿನಾಲಿ ಮಾಡಿ ಬಾಡಿಗೆ ಕಟ್ಟಬೇಕಾದ ಪರಿಸ್ಥಿತಿ ಇವರದ್ದು. 

ಇದನ್ನೂ ನೋಡಿBIG 3: ಉದ್ಘಾಟನೆಯಾಗದೆ ಪಾಳು ಬಿದ್ದಿರುವ ರಾಯಚೂರಿನ ಅಂಬೇಡ್ಕರ್ ಭವನ

ಈಗಾಗಲೇ ಈ ಫಲಾನುಭವಿಗಳು 2022ರ ಜೂನ್ ತಿಂಗಳಲ್ಲಿ ಅಂದರೇ ಈ ವರ್ಷದ ಮಳೆಗಾಲಕ್ಕೂ ಮುನ್ನವೇ ಈ  70 ಕುಟುಂಬಗಳು ಅಧಿಕಾರಿಗಳನ್ನ ಭೇಟಿ ಮಾಡಿದ್ರು. ಆಗ ಸಂಬಂಧಪಟ್ಟ ಅಧಿಕಾರಿಗಳು, ಜನಪ್ರತಿನಿಧಿಗಳನ್ನ ಕೇಳಿದ್ರೆ ಸಣ್ಣಪುಟ್ಟ ಕೆಲಸ ಇದ್ದು ಹಸ್ತಾಂತರ ಮಾಡೋದಾಗಿ ಭರವಸೆ ನೀಡಿದ್ರು. ಆದ್ರೆ, ಇಲ್ಲಿ ತನಕವು ಯಾರಿಗೂ ಹಂಚಿಕೆ ಮಾಡದೇ ಉಡಾಫೆ ಮಾಡ್ತಿದ್ದಾರೆ ಅಂತಾರೆ ಫಲಾನುಭವಿಗಳು.  ಒಟ್ಟಿನಲ್ಲಿ ಸರ್ಕಾರದಿಂದ ಮನೆಗಳು ನಿರ್ಮಾಣ ಆಗಿದ್ರು ಫಲಾನುಭವಿಗಳಿಗೆ ಹಂಚಿಕೆ ಮಾಡೋಕೆ ಇಷ್ಟು ದಿನ ಬೇಕ. ಸಂಬಂಧಪಟ್ಟ ಅಧಿಕಾರಿಗಳೇ, ಜನಪ್ರತಿನಿಧಿಗಳೇ ಏಷ್ಯಾನೆಟ್ ಸುವರ್ಣ ನ್ಯೂಸ್ ಬಿಗ್3ಯಲ್ಲಿ  ವರದಿ ಪ್ರಸಾರ ಆದ್ಮೇಲಾದ್ರೂ ಎಚ್ಚೆತ್ತುಕೊಳ್ತಾರಾ ನೋಡೋಣ 

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
Read more