BIG 3 Impact: ಶಿವಮೊಗ್ಗದ ಬೀದಿ ವ್ಯಾಪಾರಿಗಳ ಮುಖದಲ್ಲಿ ಮಂದಹಾಸ, ಮಳಿಗೆ ಉದ್ಘಾಟನೆ

BIG 3 Impact: ಶಿವಮೊಗ್ಗದ ಬೀದಿ ವ್ಯಾಪಾರಿಗಳ ಮುಖದಲ್ಲಿ ಮಂದಹಾಸ, ಮಳಿಗೆ ಉದ್ಘಾಟನೆ

Published : Jul 26, 2022, 03:49 PM ISTUpdated : Jul 26, 2022, 04:19 PM IST

Suvarna News BIG 3: ವರದಿ ಪ್ರಸಾರವಾಗುತ್ತಿದ್ದಂತೆ ಪಾಲಿಕೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಎಚ್ಚೆತ್ತುಕೊಂಡಿದ್ದು ಬೀದಿ ವ್ಯಾಪಾರಿಗಳ ಸಮಸ್ಯೆಗೆ  ಈಗ ಪರಿಹಾರ ದೊರಕಿದೆ

ಶಿವಮೊಗ್ಗ (ಜು. 26): ಶಿವಮೊಗ್ಗದ ವಿನೋಬಾ ನಗರದ ಶಿವಾಲಯದ ಬಳಿ ಮಹಾನಗರ ಪಾಲಿಕೆ 70 ಮಳಿಗೆಗಳನ್ನು ನಿರ್ಮಾಣ ಮಾಡಿತ್ತು. ಈ ಮಳಿಗೆ ನಿರ್ಮಾಣ ಮಾಡಿದ್ದು ಬೀದಿ ಬದಿ ವ್ಯಾಪಾರಿಗಳು ಅನುಕೂಲಕ್ಕಾಗಿ. ಮಳಿಗೆಗಳು ಸಿದ್ಧವಾಗಿದ್ದರೂ ವ್ಯಾಪಾರಿಗಳು ಇನ್ನೂ ಬೀದಿ ಬದಿಯಲ್ಲೇ ವ್ಯಾಪಾರ ಮಾಡ್ತಿದ್ರು. ಮಳಿಗೆಗಳನ್ನು ಹಂಚಿಕೆ ಮಾಡಲು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಮನಸ್ಸು ಮಾಡಿರಲಿಲ್ಲ.  ಈ ಬಗ್ಗೆ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಬಿಗ್‌ 3 ಯಲ್ಲಿ ವರದಿ ಬಿತ್ತರಿಸಲಾಗಿತ್ತು. 

ವರದಿ ಪ್ರಸಾರವಾಗುತ್ತಿದ್ದಂತೆ ಪಾಲಿಕೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಎಚ್ಚೆತ್ತುಕೊಂಡರು. ಆಯುಕ್ತ ಸೇರಿದಂತೆ ಹಲವು ಅಧಿಕಾರಿಗಳು ಸ್ಥಳಕ್ಕೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿದರು. ಫಲಾನುಭವಿಗಳ ಪಟ್ಟಿ ಕೂಡ ರೆಡಿಯಾಯ್ತು. ಇನ್ನು ಇಷ್ಟು ವರ್ಷ್ ಮಳಿಗೆಗಳ ಹಂಚಿಕೆ ಮಾಡಲು ಕೆಲವು ಕಾನೂನಿಕ ತೊಡಕಿತ್ತು. ಕೊನೆಗೂ ಇದೊಂದು ವಿಶೇಷ ಪ್ರಕರಣ ಎಂದು ಪರಿಗಣಿಸಿ ಸಚಿವ ಸಂಪುಟದಲ್ಲಿ ಅನುಮೋದನೆ ಪಡೆಯಲಾಯಿತು. 

ವಿದ್ಯುತ್ ಅವಘಡದಿಂದ ಶಾಶ್ವತ ಅಂಗವೈಕಲ್ಯ, ವೇತನವಿಲ್ಲ, ಸೌಲಭ್ಯವಿಲ್ಲ, ಸಿಬ್ಬಂದಿಗೆ ಮೆಸ್ಕಾಂ ಅನ್ಯಾಯ

ನಗರಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿಯಿಂದ ಮಹಾನಗರ ಪಾಲಿಕೆಗೆ ಪತ್ರ ಹಸ್ತಾಂತರ ಮಾಡಿ ಆದೇಶ ನೀಡಲಾಯಿತು. ಈಗ 70 ಹೊಸ ಮಳಿಗೆಗಳಲ್ಲಿ ವ್ಯಾಪಾರಸ್ಥರು ವ್ಯಾಪರ ಶುರು ಮಾಡಿದ್ದು ಈ ಬಗ್ಗೆ ಕಂಪ್ಲೀಟ್‌ ವರದಿ ಇಲ್ಲಿದೆ 

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more