BIG 3 Impact: ಶಿವಮೊಗ್ಗದ ಬೀದಿ ವ್ಯಾಪಾರಿಗಳ ಮುಖದಲ್ಲಿ ಮಂದಹಾಸ, ಮಳಿಗೆ ಉದ್ಘಾಟನೆ

BIG 3 Impact: ಶಿವಮೊಗ್ಗದ ಬೀದಿ ವ್ಯಾಪಾರಿಗಳ ಮುಖದಲ್ಲಿ ಮಂದಹಾಸ, ಮಳಿಗೆ ಉದ್ಘಾಟನೆ

Published : Jul 26, 2022, 03:49 PM ISTUpdated : Jul 26, 2022, 04:19 PM IST

Suvarna News BIG 3: ವರದಿ ಪ್ರಸಾರವಾಗುತ್ತಿದ್ದಂತೆ ಪಾಲಿಕೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಎಚ್ಚೆತ್ತುಕೊಂಡಿದ್ದು ಬೀದಿ ವ್ಯಾಪಾರಿಗಳ ಸಮಸ್ಯೆಗೆ  ಈಗ ಪರಿಹಾರ ದೊರಕಿದೆ

ಶಿವಮೊಗ್ಗ (ಜು. 26): ಶಿವಮೊಗ್ಗದ ವಿನೋಬಾ ನಗರದ ಶಿವಾಲಯದ ಬಳಿ ಮಹಾನಗರ ಪಾಲಿಕೆ 70 ಮಳಿಗೆಗಳನ್ನು ನಿರ್ಮಾಣ ಮಾಡಿತ್ತು. ಈ ಮಳಿಗೆ ನಿರ್ಮಾಣ ಮಾಡಿದ್ದು ಬೀದಿ ಬದಿ ವ್ಯಾಪಾರಿಗಳು ಅನುಕೂಲಕ್ಕಾಗಿ. ಮಳಿಗೆಗಳು ಸಿದ್ಧವಾಗಿದ್ದರೂ ವ್ಯಾಪಾರಿಗಳು ಇನ್ನೂ ಬೀದಿ ಬದಿಯಲ್ಲೇ ವ್ಯಾಪಾರ ಮಾಡ್ತಿದ್ರು. ಮಳಿಗೆಗಳನ್ನು ಹಂಚಿಕೆ ಮಾಡಲು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಮನಸ್ಸು ಮಾಡಿರಲಿಲ್ಲ.  ಈ ಬಗ್ಗೆ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಬಿಗ್‌ 3 ಯಲ್ಲಿ ವರದಿ ಬಿತ್ತರಿಸಲಾಗಿತ್ತು. 

ವರದಿ ಪ್ರಸಾರವಾಗುತ್ತಿದ್ದಂತೆ ಪಾಲಿಕೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಎಚ್ಚೆತ್ತುಕೊಂಡರು. ಆಯುಕ್ತ ಸೇರಿದಂತೆ ಹಲವು ಅಧಿಕಾರಿಗಳು ಸ್ಥಳಕ್ಕೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿದರು. ಫಲಾನುಭವಿಗಳ ಪಟ್ಟಿ ಕೂಡ ರೆಡಿಯಾಯ್ತು. ಇನ್ನು ಇಷ್ಟು ವರ್ಷ್ ಮಳಿಗೆಗಳ ಹಂಚಿಕೆ ಮಾಡಲು ಕೆಲವು ಕಾನೂನಿಕ ತೊಡಕಿತ್ತು. ಕೊನೆಗೂ ಇದೊಂದು ವಿಶೇಷ ಪ್ರಕರಣ ಎಂದು ಪರಿಗಣಿಸಿ ಸಚಿವ ಸಂಪುಟದಲ್ಲಿ ಅನುಮೋದನೆ ಪಡೆಯಲಾಯಿತು. 

ವಿದ್ಯುತ್ ಅವಘಡದಿಂದ ಶಾಶ್ವತ ಅಂಗವೈಕಲ್ಯ, ವೇತನವಿಲ್ಲ, ಸೌಲಭ್ಯವಿಲ್ಲ, ಸಿಬ್ಬಂದಿಗೆ ಮೆಸ್ಕಾಂ ಅನ್ಯಾಯ

ನಗರಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿಯಿಂದ ಮಹಾನಗರ ಪಾಲಿಕೆಗೆ ಪತ್ರ ಹಸ್ತಾಂತರ ಮಾಡಿ ಆದೇಶ ನೀಡಲಾಯಿತು. ಈಗ 70 ಹೊಸ ಮಳಿಗೆಗಳಲ್ಲಿ ವ್ಯಾಪಾರಸ್ಥರು ವ್ಯಾಪರ ಶುರು ಮಾಡಿದ್ದು ಈ ಬಗ್ಗೆ ಕಂಪ್ಲೀಟ್‌ ವರದಿ ಇಲ್ಲಿದೆ 

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more