BIG 3: ಉದ್ಘಾಟನೆಯಾಗದೆ ಪಾಳು ಬಿದ್ದಿರುವ ರಾಯಚೂರಿನ ಅಂಬೇಡ್ಕರ್ ಭವನ

BIG 3: ಉದ್ಘಾಟನೆಯಾಗದೆ ಪಾಳು ಬಿದ್ದಿರುವ ರಾಯಚೂರಿನ ಅಂಬೇಡ್ಕರ್ ಭವನ

Published : Nov 17, 2022, 03:13 PM IST

Big 3 Raichur Story: ಬಡವರು ಕೂಡ ಗೌರವದಿಂದ ಕಡಿಮೆ ವೆಚ್ಚದಲ್ಲಿ ಸಭೆ-ಸಮಾರಂಭ ಮಾಡಬೇಕೆಂದು ಸರ್ಕಾರ 5 ಕೋಟಿ ವೆಚ್ಚದಲ್ಲಿ ಬಾಬಾ ಜಗಜೀವನರಾಮ್ ಮತ್ತು ಅಂಬೇಡ್ಕರ್ ಭವನ ನಿರ್ಮಾಣ ಮಾಡಿದೆ
 

ರಾಯಚೂರು (ನ. 17): ಬಡವರು ಕೂಡ ಗೌರವದಿಂದ ಕಡಿಮೆ ವೆಚ್ಚದಲ್ಲಿ ಸಭೆ-ಸಮಾರಂಭ ಮಾಡಬೇಕೆಂದು ಸರ್ಕಾರ 5 ಕೋಟಿ ವೆಚ್ಚದಲ್ಲಿ ಬಾಬಾ ಜಗಜೀವನರಾಮ್ ಮತ್ತು ಅಂಬೇಡ್ಕರ್ ಭವನ ನಿರ್ಮಾಣ ಮಾಡಿದೆ. ಭವನದಲ್ಲಿ ಕುರ್ಚಿ ಮತ್ತು ಪಿಠೋಪಕರಣ ಇಲ್ಲವೆಂಬ ಕಾರಣಕ್ಕೆ ವರ್ಷ ಕಳೆದರೂ ಭವನದ ಉದ್ಘಾಟನೆ ಆಗುತ್ತಿಲ್ಲ. ಲಕ್ಷಾಂತರ ರೂಪಾಯಿ ವೆಚ್ಚದ ವಸ್ತುಗಳು ಧೂಳು ಹಿಡಿಯುತ್ತಿದ್ದು, ಈ ಬಗ್ಗೆ ಸ್ಥಳಿಯರು ಅಧಿಕಾರಿ, ಜನಪ್ರತಿನಿಧಿಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.  ರಾಯಚೂರು ನಗರದ ಕೇಂದ್ರ ಭಾಗದಲ್ಲ ಬೃಹತ್ ಭವನದಲ್ಲಿ ಮದುವೆ ಮತ್ತು ವಿವಿಧ ಸಭೆ-ಸಮಾರಂಭಗಳು ನಡೆಯಬೇಕಾಗಿತ್ತು. ಆದ್ರೆ ನಿರ್ಮಾಣಗೊಂಡ ಭವನದಲ್ಲಿ 50-60 ಲಕ್ಷ ರೂಪಾಯಿ ವೆಚ್ಚದ ಪಿಠೋಪಕರಣ ಖರೀದಿಗಾಗಿ ಟೆಂಡರ್ ಮಾಡಿದ್ರೂ ಇನ್ನೂ ಪಿಠೋಪಕರಣ ಅಳವಡಿಕೆ ಮಾತ್ರ ಮಾಡುತ್ತಿಲ್ಲ. ಕಟ್ಟಡದ ಜೊತೆಗೆ ಪಿಠೋಪಕರಣದ ಟೆಂಡರ್ ಮಾಡದೇ ಇರುವುದು ಹೋರಾಟಗಾರರ ಆಕ್ರೋಶಕ್ಕೆ ಮತ್ತಷ್ಟು ಕಾರಣವಾಗಿದೆ.

ಇನ್ನೂ ಬೃಹತ್ ಅಂಬೇಡ್ಕರ್ ಭವನ ನಿರ್ಮಾಣಗೊಂಡು ವರ್ಷಗಳೇ ಕಳೆಯುತ್ತಿದೆ. ಉದ್ಘಾಟನೆ ಆಗದೇ ಇರುವುದರಿಂದ, ಭವನದಲ್ಲಿನ ಬೆಲೆ ಬಾಳುವ ವಸ್ತುಗಳು ಧೂಳು ಹಿಡಿದು ಹಾಳಾಗಿ ಹೋಗುತ್ತಿವೆ. ಇದರಿಂದಾಗಿ ಕೂಡಲೇ ಭವನ ಉದ್ಘಾಟನೆ ಮಾಡಿ ಬಡವರಿಗೆ ಅನುಕೂಲ ಮಾಡಿಕೊಡಿ ಎಂದು ಸ್ಥಳೀಯರು ಆಗ್ರಹಿಸುತ್ತಿದ್ದಾರೆ. 

ಇದನ್ನೂ ಓದಿ: ಬ್ಯಾಲಾಳ ಗ್ರಾಮದಲ್ಲಿ ಇಲ್ಲ ಸ್ಮಶಾನ: ಅಂತ್ಯಕ್ರಿಯೆಗೆ ಪರದಾಟ

ಒಟ್ಟಿನಲ್ಲಿ ಸರ್ಕಾರ ಕೋಟಿ ಕೋಟಿ ರೂಪಾಯಿ ಹಣ ವೆಚ್ಚ ಮಾಡಿ ಅಂಬೇಡ್ಕರ್ ಭವನ ನಿರ್ಮಾಣ ಮಾಡಿದೆ. ಆದ್ರೆ ಪೀಠೋಪಕರಣ ಇಲ್ಲ ಅನ್ನೋ ಕಾರಣಕ್ಕೆ ಭವನ ಉದ್ಘಾಟನೆ ಮಾಡಲು ಹಿಂದೇಟು ಹಾಕಿರೋದು ಬೇಸರದ ಸಂಗತಿ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು, ಜನಪ್ರತಿನಿಧಿಗಳು ಈ ಬಗ್ಗೆ ಗಮನ ಹರಿಸಿ, ಅಲ್ಲಿನ ಸಮಸ್ಯೆ ಬಗೆ ಹರಿಸಿ, ಜನರಿಗೆ ಅನುಕೂಲ ಮಾಡಿಕೊಡಿ ಅನ್ನೋದು ಬಿಗ್-3 ಆಗ್ರಹ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more