BIG 3: ಉದ್ಘಾಟನೆಯಾಗದೆ ಪಾಳು ಬಿದ್ದಿರುವ ರಾಯಚೂರಿನ ಅಂಬೇಡ್ಕರ್ ಭವನ

BIG 3: ಉದ್ಘಾಟನೆಯಾಗದೆ ಪಾಳು ಬಿದ್ದಿರುವ ರಾಯಚೂರಿನ ಅಂಬೇಡ್ಕರ್ ಭವನ

Published : Nov 17, 2022, 03:13 PM IST

Big 3 Raichur Story: ಬಡವರು ಕೂಡ ಗೌರವದಿಂದ ಕಡಿಮೆ ವೆಚ್ಚದಲ್ಲಿ ಸಭೆ-ಸಮಾರಂಭ ಮಾಡಬೇಕೆಂದು ಸರ್ಕಾರ 5 ಕೋಟಿ ವೆಚ್ಚದಲ್ಲಿ ಬಾಬಾ ಜಗಜೀವನರಾಮ್ ಮತ್ತು ಅಂಬೇಡ್ಕರ್ ಭವನ ನಿರ್ಮಾಣ ಮಾಡಿದೆ
 

ರಾಯಚೂರು (ನ. 17): ಬಡವರು ಕೂಡ ಗೌರವದಿಂದ ಕಡಿಮೆ ವೆಚ್ಚದಲ್ಲಿ ಸಭೆ-ಸಮಾರಂಭ ಮಾಡಬೇಕೆಂದು ಸರ್ಕಾರ 5 ಕೋಟಿ ವೆಚ್ಚದಲ್ಲಿ ಬಾಬಾ ಜಗಜೀವನರಾಮ್ ಮತ್ತು ಅಂಬೇಡ್ಕರ್ ಭವನ ನಿರ್ಮಾಣ ಮಾಡಿದೆ. ಭವನದಲ್ಲಿ ಕುರ್ಚಿ ಮತ್ತು ಪಿಠೋಪಕರಣ ಇಲ್ಲವೆಂಬ ಕಾರಣಕ್ಕೆ ವರ್ಷ ಕಳೆದರೂ ಭವನದ ಉದ್ಘಾಟನೆ ಆಗುತ್ತಿಲ್ಲ. ಲಕ್ಷಾಂತರ ರೂಪಾಯಿ ವೆಚ್ಚದ ವಸ್ತುಗಳು ಧೂಳು ಹಿಡಿಯುತ್ತಿದ್ದು, ಈ ಬಗ್ಗೆ ಸ್ಥಳಿಯರು ಅಧಿಕಾರಿ, ಜನಪ್ರತಿನಿಧಿಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.  ರಾಯಚೂರು ನಗರದ ಕೇಂದ್ರ ಭಾಗದಲ್ಲ ಬೃಹತ್ ಭವನದಲ್ಲಿ ಮದುವೆ ಮತ್ತು ವಿವಿಧ ಸಭೆ-ಸಮಾರಂಭಗಳು ನಡೆಯಬೇಕಾಗಿತ್ತು. ಆದ್ರೆ ನಿರ್ಮಾಣಗೊಂಡ ಭವನದಲ್ಲಿ 50-60 ಲಕ್ಷ ರೂಪಾಯಿ ವೆಚ್ಚದ ಪಿಠೋಪಕರಣ ಖರೀದಿಗಾಗಿ ಟೆಂಡರ್ ಮಾಡಿದ್ರೂ ಇನ್ನೂ ಪಿಠೋಪಕರಣ ಅಳವಡಿಕೆ ಮಾತ್ರ ಮಾಡುತ್ತಿಲ್ಲ. ಕಟ್ಟಡದ ಜೊತೆಗೆ ಪಿಠೋಪಕರಣದ ಟೆಂಡರ್ ಮಾಡದೇ ಇರುವುದು ಹೋರಾಟಗಾರರ ಆಕ್ರೋಶಕ್ಕೆ ಮತ್ತಷ್ಟು ಕಾರಣವಾಗಿದೆ.

ಇನ್ನೂ ಬೃಹತ್ ಅಂಬೇಡ್ಕರ್ ಭವನ ನಿರ್ಮಾಣಗೊಂಡು ವರ್ಷಗಳೇ ಕಳೆಯುತ್ತಿದೆ. ಉದ್ಘಾಟನೆ ಆಗದೇ ಇರುವುದರಿಂದ, ಭವನದಲ್ಲಿನ ಬೆಲೆ ಬಾಳುವ ವಸ್ತುಗಳು ಧೂಳು ಹಿಡಿದು ಹಾಳಾಗಿ ಹೋಗುತ್ತಿವೆ. ಇದರಿಂದಾಗಿ ಕೂಡಲೇ ಭವನ ಉದ್ಘಾಟನೆ ಮಾಡಿ ಬಡವರಿಗೆ ಅನುಕೂಲ ಮಾಡಿಕೊಡಿ ಎಂದು ಸ್ಥಳೀಯರು ಆಗ್ರಹಿಸುತ್ತಿದ್ದಾರೆ. 

ಇದನ್ನೂ ಓದಿ: ಬ್ಯಾಲಾಳ ಗ್ರಾಮದಲ್ಲಿ ಇಲ್ಲ ಸ್ಮಶಾನ: ಅಂತ್ಯಕ್ರಿಯೆಗೆ ಪರದಾಟ

ಒಟ್ಟಿನಲ್ಲಿ ಸರ್ಕಾರ ಕೋಟಿ ಕೋಟಿ ರೂಪಾಯಿ ಹಣ ವೆಚ್ಚ ಮಾಡಿ ಅಂಬೇಡ್ಕರ್ ಭವನ ನಿರ್ಮಾಣ ಮಾಡಿದೆ. ಆದ್ರೆ ಪೀಠೋಪಕರಣ ಇಲ್ಲ ಅನ್ನೋ ಕಾರಣಕ್ಕೆ ಭವನ ಉದ್ಘಾಟನೆ ಮಾಡಲು ಹಿಂದೇಟು ಹಾಕಿರೋದು ಬೇಸರದ ಸಂಗತಿ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು, ಜನಪ್ರತಿನಿಧಿಗಳು ಈ ಬಗ್ಗೆ ಗಮನ ಹರಿಸಿ, ಅಲ್ಲಿನ ಸಮಸ್ಯೆ ಬಗೆ ಹರಿಸಿ, ಜನರಿಗೆ ಅನುಕೂಲ ಮಾಡಿಕೊಡಿ ಅನ್ನೋದು ಬಿಗ್-3 ಆಗ್ರಹ. 

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
Read more