ಬಿಗ್‌ 3 ವರದಿಗೆ ಸರ್ಕಾರ ಅಲರ್ಟ್.. ದುರಂತದಲ್ಲಿ ಮಡಿದವರ ಕುಟುಂಬಕ್ಕೆ ಸಿಕ್ತು ಪರಿಹಾರ !

ಬಿಗ್‌ 3 ವರದಿಗೆ ಸರ್ಕಾರ ಅಲರ್ಟ್.. ದುರಂತದಲ್ಲಿ ಮಡಿದವರ ಕುಟುಂಬಕ್ಕೆ ಸಿಕ್ತು ಪರಿಹಾರ !

Published : Sep 01, 2023, 03:19 PM IST

BIG 3 ಕೈ ಇಟ್ರೆ ಆಗದೇ ಇರೋ ಕೆಲಸ ಇಲ್ಲ. ಅದು ಎಷ್ಟೇ ಕಷ್ಟ ಇರಲಿ ಬಡವರ ಧ್ವನಿಯಾಗಿ ನಿಲ್ಲುತ್ತೆ. ಯಾರ ಪ್ರಭಾವಕ್ಕೂ ಮಣಿಯಲ್ಲ. ಬಿಗ್ 3 ಸುಮ್ಮನೆ ಮಾತಾಡಲ್ಲ, ಮಾಡಿ ತೋರಿಸುತ್ತೆ. ಹಾಗಾದ್ರೆ ಮಾಡಿದ್ದಾದ್ರೂ ಏನು.. ನೋಡಿ ಈ ಇಂಪ್ಯಾಕ್ಟ್ ವರದಿಯಲ್ಲಿ..
 

ಕೊರೊನಾ ವೇಳೆ ಚಾಮರಾಜನಗರದ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದ ಆಕ್ಸಿಜನ್ ದುರಂತದ ಬಗ್ಗೆ ನಿಮಗೆಲ್ಲ ಗೊತ್ತೆ ಇದೆ. ಮಹಾಮಾರಿ ಕೊರೊನಾ ಸಮಯದಲ್ಲಿ ಬಳ್ಳಾರಿಯ(Bellary) ಸರ್ಕಾರಿ ವಿಮ್ಸ್ ಆಸ್ಪತ್ರೆಯಲ್ಲಿ(Vims Hospital) ಕರೆಂಟ್(Current) ಸಪ್ಲೈ ಕಟ್ ಆಗಿ ಆಕ್ಸಿಜನ್  ಸಿಗದೇ ಮೌಲಾ ಹುಸೇನ್, ಚಿಟ್ಟೆಮ್ಮ  ಸಾವನ್ನಪ್ಪಿದ್ರು. ಈ ಘಟನೆ ಕೂಡ ದೊಡ್ಡ ಮಟ್ಟದಲ್ಲಿ ಆಕ್ರೋಶ ಹುಟ್ಟು ಹಾಕಿತ್ತು. ಇನ್ನೂ ಪರಿಹಾರ ಕೊಟ್ಟಿಲ್ವಾ ಅಂತೇಳಿ ಬಿಗ್ 3ಯಲ್ಲಿ(Big 3)  ಆಗಸ್ಟ್ 20ಕ್ಕೆ ಗರಂ ಆಗಿಯೇ ವರದಿ ಪ್ರಸಾರ ಮಾಡಿದ್ವಿ. ಇನ್ನೂ ಈ ಸುದ್ದಿಯನ್ನ ಸಿಎಂ ಸಿದ್ದರಾಮಯ್ಯ ಅವ್ರ ಮಾಧ್ಯಮ ಸಲಹೆಗಾರರಾದ ಪ್ರಭಾಕರ್ ಗಮನಕ್ಕೂ ತಂದ್ವಿ. ತಕ್ಷಣವೇ ಅಲರ್ಟ್ ಆದ ಪ್ರಭಾಕರ್ ಅವ್ರು ಸಮಸ್ಯೆ ಬಗೆ ಹರಿಸೋಣ ಅಂತ ಮೆಸೇಜ್ ಮಾಡಿದ್ರು. ತಕ್ಷಣವೇ ಕಾರ್ಯಪ್ರವೃತ್ತರಾಗಿ ಸಿಎಂ ಪರಿಹಾರ ನಿಧಿಯಿಂದ ಹಣ ಬಿಡುಗಡೆ ಮಾಡಿದ್ರು. ಮೃತ ಮೌಲಾ ಹುಸೇನ್ ಕುಟುಂಬ ಮತ್ತು ಮೃತ ಮಹಿಳೆ ಚಿಟ್ಟೆಮ್ಮ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಬಿಡುಗಡೆಯಾಗಿದೆ. ಇನ್ನು ಕುಟುಂಬಸ್ಥರ ಕೈಗೆ ಹಣ ಸೇರೋದೊಂದೆ ಬಾಕಿಯಿದ್ದು, ಹಣ ಬಿಡುಗಡೆ ಸುದ್ದಿ ಕೇಳಿ ಆ ಎರಡು ಕುಟುಂಬ ನಿಟ್ಟುಸಿರು ಬಿಟ್ಟಿದೆ.

ಇದನ್ನೂ ವೀಕ್ಷಿಸಿ:  'ಹೈ' ಲೆವೆಲ್ ಮೀಟಿಂಗ್‌ಗೆ ಬಿಜೆಪಿ ರೆಬೆಲ್ಸ್ ಚಕ್ಕರ್ ಹಾಕಿದ್ದೇಕೆ..? ನಾಲ್ಕು ಗೋಡೆಗಳ ಮಧ್ಯೆ ಅಸಲಿಗೆ ನಡೆದದ್ದೇನು..?

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more