BIG 3: ಸೇತುವೆ ಕುಸಿದು 6 ತಿಂಗಳಾದ್ರೂ ಡೋಂಟ್ ಕೇರ್: ಕೊಡಗು ಜನರ ಸಮಸ್ಯೆ ಕೇಳುವವರು ಯಾರು?

BIG 3: ಸೇತುವೆ ಕುಸಿದು 6 ತಿಂಗಳಾದ್ರೂ ಡೋಂಟ್ ಕೇರ್: ಕೊಡಗು ಜನರ ಸಮಸ್ಯೆ ಕೇಳುವವರು ಯಾರು?

Published : Dec 21, 2022, 02:46 PM IST

ಕೊಡಗು ಕುಶಾಲನಗರ ತಾಲೂಕಿನ ಯಡವನಾಡು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯಲ್ಲಿ, ಸೇತುವೆ ಕುಸಿದು ಬಿದ್ದು ಆರು ತಿಂಗಳಾದರೂ ಇಂದಿಗೂ ಸೇತುವೆ ನಿರ್ಮಿಸಿಲ್ಲ.
 

ಯಡವನಾಡು ಕುಶಾಲನಗರ ತಾಲ್ಲೂಕು ಕೇಂದ್ರದಿಂದ 15 ಕಿಲೋ ಮೀಟರ್ ದೂರದಲ್ಲಿರುವ ಗ್ರಾಮ. ಕಳೆದ ಆಗಸ್ಟ್ ತಿಂಗಳಲ್ಲಿ ಸುರಿದ ಧಾರಾಕಾರ ಮಳೆಗೆ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿರುವ ಸೇತುವೆ ಸಂಪೂರ್ಣ ಕುಸಿದು ಬಿದ್ದಿದೆ. ಕುಸಿದು ಬಿದ್ದು 6 ತಿಂಗಳಾದರೂ ಸೇತುವೆ ನಿರ್ಮಿಸಿಲ್ಲ.  ಯಡವನಾಡು ಗ್ರಾಮದಲ್ಲಿ 75 ಕ್ಕೂ ಹೆಚ್ಚು ಕುಟುಂಬಗಳಿದ್ದು 50ಕ್ಕೂ ಹೆಚ್ಚು ಮಕ್ಕಳು ಶಾಲಾ, ಕಾಲೇಜಿಗೆ ಕುಶಾಲನಗರ, ಸೋಮವಾರಪೇಟೆ ಹೋಗುತ್ತಾರೆ. ಇವರೆಲ್ರೂ ಕುಸಿದು ಹೋಗಿರುವ ಈ ಸೇತುವೆಯ ಹಳ್ಳ ಇಳಿದು ನೀರು ದಾಟಿ ಹೋಗಬೇಕು. ಅದಕ್ಕಾಗಿ ಹಳೆಯ ವಿದ್ಯುತ್ ಕಂಬಗಳು ಮತ್ತು ಮರದ ದಿಮ್ಮಿಯನ್ನು ಹಳ್ಳದಲ್ಲಿ ಅಡ್ಡವಾಗಿ ಹಾಕಿ ರಸ್ತೆದಾಟಬೇಕಾದ ಪರಿಸ್ಥಿತಿ ಇದೆ. ಇಂತಹ ಅತ್ಯಂತ ಅಪಾಯಕಾರಿ ಪರಿಸ್ಥಿತಿ ಇದ್ದು, ಚಿಕ್ಕಪುಟ್ಟ ಮಕ್ಕಳು ಈ ಹಳ್ಳ ದಾಟಿ ಹೋಗಿ ಬರಬೇಕಾದರೆ, ಪೋಷಕರು ಜೊತೆಗೆ ಇದ್ದು, ಈ ಹಳ್ಳವನ್ನು ದಾಟಿಸಬೇಕು. ಒಂದು ವೇಳೆ ಮಳೆ ಬಂತೆಂದರೆ ಹಳ್ಳದಲ್ಲಿ ಭಾರೀ ನೀರು ಹರಿಯುವುದರಿಂದ ಒಂದು ಭಾಗದಿಂದ ಮತ್ತೊಂದು ಭಾಗಕ್ಕೆ ದಾಟಲು ಸಾಧ್ಯವೇ ಇಲ್ಲ. ಈ ಬಗ್ಗೆ ಹಲವು ಬಾರಿ ಪಂಚಾಯಿತಿ ಅಧಿಕಾರಿಗಳು, ಕಂದಾಯ ಇಲಾಖೆ ಅಧಿಕಾರಿಗಳು ಮತ್ತು ಶಾಸಕರಿಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಇನ್ನು  ಸೇತುವೆ ಕುಸಿದು ಬಿದ್ದಿರುವ ಬಗ್ಗೆ ಶಾಸಕರಿಗೂ ಹಲವು ಬಾರಿ ಮನವಿ ಮಾಡಲಾಗಿದೆ. ಆದರೆ ಇದುವರೆಗೆ ಶಾಸಕರು ಗಮನಹರಿಸಿಲ್ಲ. ಕೇಳಿದಾಗಲೆಲ್ಲಾ ಸೇತುವೆ ಮಾಡಿಕೊಡುವುದಾಗಿ ಹೇಳುತ್ತಾರೆ ವಿನಃ ಸೇತುವೆ ನಿರ್ಮಿಸಿಲ್ಲ.

ವಾರದಲ್ಲಿ ಭೂ ಪರಿವರ್ತನೆಗಾಗಿ ವಿಧಾನಸಭೆಯಲ್ಲಿ ಮಸೂದೆ ಮಂಡನೆ

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
Read more