BIG 3: ಸೇತುವೆ ಕುಸಿದು 6 ತಿಂಗಳಾದ್ರೂ ಡೋಂಟ್ ಕೇರ್: ಕೊಡಗು ಜನರ ಸಮಸ್ಯೆ ಕೇಳುವವರು ಯಾರು?

BIG 3: ಸೇತುವೆ ಕುಸಿದು 6 ತಿಂಗಳಾದ್ರೂ ಡೋಂಟ್ ಕೇರ್: ಕೊಡಗು ಜನರ ಸಮಸ್ಯೆ ಕೇಳುವವರು ಯಾರು?

Published : Dec 21, 2022, 02:46 PM IST

ಕೊಡಗು ಕುಶಾಲನಗರ ತಾಲೂಕಿನ ಯಡವನಾಡು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯಲ್ಲಿ, ಸೇತುವೆ ಕುಸಿದು ಬಿದ್ದು ಆರು ತಿಂಗಳಾದರೂ ಇಂದಿಗೂ ಸೇತುವೆ ನಿರ್ಮಿಸಿಲ್ಲ.
 

ಯಡವನಾಡು ಕುಶಾಲನಗರ ತಾಲ್ಲೂಕು ಕೇಂದ್ರದಿಂದ 15 ಕಿಲೋ ಮೀಟರ್ ದೂರದಲ್ಲಿರುವ ಗ್ರಾಮ. ಕಳೆದ ಆಗಸ್ಟ್ ತಿಂಗಳಲ್ಲಿ ಸುರಿದ ಧಾರಾಕಾರ ಮಳೆಗೆ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿರುವ ಸೇತುವೆ ಸಂಪೂರ್ಣ ಕುಸಿದು ಬಿದ್ದಿದೆ. ಕುಸಿದು ಬಿದ್ದು 6 ತಿಂಗಳಾದರೂ ಸೇತುವೆ ನಿರ್ಮಿಸಿಲ್ಲ.  ಯಡವನಾಡು ಗ್ರಾಮದಲ್ಲಿ 75 ಕ್ಕೂ ಹೆಚ್ಚು ಕುಟುಂಬಗಳಿದ್ದು 50ಕ್ಕೂ ಹೆಚ್ಚು ಮಕ್ಕಳು ಶಾಲಾ, ಕಾಲೇಜಿಗೆ ಕುಶಾಲನಗರ, ಸೋಮವಾರಪೇಟೆ ಹೋಗುತ್ತಾರೆ. ಇವರೆಲ್ರೂ ಕುಸಿದು ಹೋಗಿರುವ ಈ ಸೇತುವೆಯ ಹಳ್ಳ ಇಳಿದು ನೀರು ದಾಟಿ ಹೋಗಬೇಕು. ಅದಕ್ಕಾಗಿ ಹಳೆಯ ವಿದ್ಯುತ್ ಕಂಬಗಳು ಮತ್ತು ಮರದ ದಿಮ್ಮಿಯನ್ನು ಹಳ್ಳದಲ್ಲಿ ಅಡ್ಡವಾಗಿ ಹಾಕಿ ರಸ್ತೆದಾಟಬೇಕಾದ ಪರಿಸ್ಥಿತಿ ಇದೆ. ಇಂತಹ ಅತ್ಯಂತ ಅಪಾಯಕಾರಿ ಪರಿಸ್ಥಿತಿ ಇದ್ದು, ಚಿಕ್ಕಪುಟ್ಟ ಮಕ್ಕಳು ಈ ಹಳ್ಳ ದಾಟಿ ಹೋಗಿ ಬರಬೇಕಾದರೆ, ಪೋಷಕರು ಜೊತೆಗೆ ಇದ್ದು, ಈ ಹಳ್ಳವನ್ನು ದಾಟಿಸಬೇಕು. ಒಂದು ವೇಳೆ ಮಳೆ ಬಂತೆಂದರೆ ಹಳ್ಳದಲ್ಲಿ ಭಾರೀ ನೀರು ಹರಿಯುವುದರಿಂದ ಒಂದು ಭಾಗದಿಂದ ಮತ್ತೊಂದು ಭಾಗಕ್ಕೆ ದಾಟಲು ಸಾಧ್ಯವೇ ಇಲ್ಲ. ಈ ಬಗ್ಗೆ ಹಲವು ಬಾರಿ ಪಂಚಾಯಿತಿ ಅಧಿಕಾರಿಗಳು, ಕಂದಾಯ ಇಲಾಖೆ ಅಧಿಕಾರಿಗಳು ಮತ್ತು ಶಾಸಕರಿಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಇನ್ನು  ಸೇತುವೆ ಕುಸಿದು ಬಿದ್ದಿರುವ ಬಗ್ಗೆ ಶಾಸಕರಿಗೂ ಹಲವು ಬಾರಿ ಮನವಿ ಮಾಡಲಾಗಿದೆ. ಆದರೆ ಇದುವರೆಗೆ ಶಾಸಕರು ಗಮನಹರಿಸಿಲ್ಲ. ಕೇಳಿದಾಗಲೆಲ್ಲಾ ಸೇತುವೆ ಮಾಡಿಕೊಡುವುದಾಗಿ ಹೇಳುತ್ತಾರೆ ವಿನಃ ಸೇತುವೆ ನಿರ್ಮಿಸಿಲ್ಲ.

ವಾರದಲ್ಲಿ ಭೂ ಪರಿವರ್ತನೆಗಾಗಿ ವಿಧಾನಸಭೆಯಲ್ಲಿ ಮಸೂದೆ ಮಂಡನೆ

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
Read more