BIG 3: ಸೇತುವೆ ಕುಸಿದು 6 ತಿಂಗಳಾದ್ರೂ ಡೋಂಟ್ ಕೇರ್: ಕೊಡಗು ಜನರ ಸಮಸ್ಯೆ ಕೇಳುವವರು ಯಾರು?

BIG 3: ಸೇತುವೆ ಕುಸಿದು 6 ತಿಂಗಳಾದ್ರೂ ಡೋಂಟ್ ಕೇರ್: ಕೊಡಗು ಜನರ ಸಮಸ್ಯೆ ಕೇಳುವವರು ಯಾರು?

Published : Dec 21, 2022, 02:46 PM IST

ಕೊಡಗು ಕುಶಾಲನಗರ ತಾಲೂಕಿನ ಯಡವನಾಡು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯಲ್ಲಿ, ಸೇತುವೆ ಕುಸಿದು ಬಿದ್ದು ಆರು ತಿಂಗಳಾದರೂ ಇಂದಿಗೂ ಸೇತುವೆ ನಿರ್ಮಿಸಿಲ್ಲ.
 

ಯಡವನಾಡು ಕುಶಾಲನಗರ ತಾಲ್ಲೂಕು ಕೇಂದ್ರದಿಂದ 15 ಕಿಲೋ ಮೀಟರ್ ದೂರದಲ್ಲಿರುವ ಗ್ರಾಮ. ಕಳೆದ ಆಗಸ್ಟ್ ತಿಂಗಳಲ್ಲಿ ಸುರಿದ ಧಾರಾಕಾರ ಮಳೆಗೆ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿರುವ ಸೇತುವೆ ಸಂಪೂರ್ಣ ಕುಸಿದು ಬಿದ್ದಿದೆ. ಕುಸಿದು ಬಿದ್ದು 6 ತಿಂಗಳಾದರೂ ಸೇತುವೆ ನಿರ್ಮಿಸಿಲ್ಲ.  ಯಡವನಾಡು ಗ್ರಾಮದಲ್ಲಿ 75 ಕ್ಕೂ ಹೆಚ್ಚು ಕುಟುಂಬಗಳಿದ್ದು 50ಕ್ಕೂ ಹೆಚ್ಚು ಮಕ್ಕಳು ಶಾಲಾ, ಕಾಲೇಜಿಗೆ ಕುಶಾಲನಗರ, ಸೋಮವಾರಪೇಟೆ ಹೋಗುತ್ತಾರೆ. ಇವರೆಲ್ರೂ ಕುಸಿದು ಹೋಗಿರುವ ಈ ಸೇತುವೆಯ ಹಳ್ಳ ಇಳಿದು ನೀರು ದಾಟಿ ಹೋಗಬೇಕು. ಅದಕ್ಕಾಗಿ ಹಳೆಯ ವಿದ್ಯುತ್ ಕಂಬಗಳು ಮತ್ತು ಮರದ ದಿಮ್ಮಿಯನ್ನು ಹಳ್ಳದಲ್ಲಿ ಅಡ್ಡವಾಗಿ ಹಾಕಿ ರಸ್ತೆದಾಟಬೇಕಾದ ಪರಿಸ್ಥಿತಿ ಇದೆ. ಇಂತಹ ಅತ್ಯಂತ ಅಪಾಯಕಾರಿ ಪರಿಸ್ಥಿತಿ ಇದ್ದು, ಚಿಕ್ಕಪುಟ್ಟ ಮಕ್ಕಳು ಈ ಹಳ್ಳ ದಾಟಿ ಹೋಗಿ ಬರಬೇಕಾದರೆ, ಪೋಷಕರು ಜೊತೆಗೆ ಇದ್ದು, ಈ ಹಳ್ಳವನ್ನು ದಾಟಿಸಬೇಕು. ಒಂದು ವೇಳೆ ಮಳೆ ಬಂತೆಂದರೆ ಹಳ್ಳದಲ್ಲಿ ಭಾರೀ ನೀರು ಹರಿಯುವುದರಿಂದ ಒಂದು ಭಾಗದಿಂದ ಮತ್ತೊಂದು ಭಾಗಕ್ಕೆ ದಾಟಲು ಸಾಧ್ಯವೇ ಇಲ್ಲ. ಈ ಬಗ್ಗೆ ಹಲವು ಬಾರಿ ಪಂಚಾಯಿತಿ ಅಧಿಕಾರಿಗಳು, ಕಂದಾಯ ಇಲಾಖೆ ಅಧಿಕಾರಿಗಳು ಮತ್ತು ಶಾಸಕರಿಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಇನ್ನು  ಸೇತುವೆ ಕುಸಿದು ಬಿದ್ದಿರುವ ಬಗ್ಗೆ ಶಾಸಕರಿಗೂ ಹಲವು ಬಾರಿ ಮನವಿ ಮಾಡಲಾಗಿದೆ. ಆದರೆ ಇದುವರೆಗೆ ಶಾಸಕರು ಗಮನಹರಿಸಿಲ್ಲ. ಕೇಳಿದಾಗಲೆಲ್ಲಾ ಸೇತುವೆ ಮಾಡಿಕೊಡುವುದಾಗಿ ಹೇಳುತ್ತಾರೆ ವಿನಃ ಸೇತುವೆ ನಿರ್ಮಿಸಿಲ್ಲ.

ವಾರದಲ್ಲಿ ಭೂ ಪರಿವರ್ತನೆಗಾಗಿ ವಿಧಾನಸಭೆಯಲ್ಲಿ ಮಸೂದೆ ಮಂಡನೆ

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
Read more