BIG 3: ಸೇತುವೆ ಕುಸಿದು 6 ತಿಂಗಳಾದ್ರೂ ಡೋಂಟ್ ಕೇರ್: ಕೊಡಗು ಜನರ ಸಮಸ್ಯೆ ಕೇಳುವವರು ಯಾರು?

BIG 3: ಸೇತುವೆ ಕುಸಿದು 6 ತಿಂಗಳಾದ್ರೂ ಡೋಂಟ್ ಕೇರ್: ಕೊಡಗು ಜನರ ಸಮಸ್ಯೆ ಕೇಳುವವರು ಯಾರು?

Published : Dec 21, 2022, 02:46 PM IST

ಕೊಡಗು ಕುಶಾಲನಗರ ತಾಲೂಕಿನ ಯಡವನಾಡು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯಲ್ಲಿ, ಸೇತುವೆ ಕುಸಿದು ಬಿದ್ದು ಆರು ತಿಂಗಳಾದರೂ ಇಂದಿಗೂ ಸೇತುವೆ ನಿರ್ಮಿಸಿಲ್ಲ.
 

ಯಡವನಾಡು ಕುಶಾಲನಗರ ತಾಲ್ಲೂಕು ಕೇಂದ್ರದಿಂದ 15 ಕಿಲೋ ಮೀಟರ್ ದೂರದಲ್ಲಿರುವ ಗ್ರಾಮ. ಕಳೆದ ಆಗಸ್ಟ್ ತಿಂಗಳಲ್ಲಿ ಸುರಿದ ಧಾರಾಕಾರ ಮಳೆಗೆ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿರುವ ಸೇತುವೆ ಸಂಪೂರ್ಣ ಕುಸಿದು ಬಿದ್ದಿದೆ. ಕುಸಿದು ಬಿದ್ದು 6 ತಿಂಗಳಾದರೂ ಸೇತುವೆ ನಿರ್ಮಿಸಿಲ್ಲ.  ಯಡವನಾಡು ಗ್ರಾಮದಲ್ಲಿ 75 ಕ್ಕೂ ಹೆಚ್ಚು ಕುಟುಂಬಗಳಿದ್ದು 50ಕ್ಕೂ ಹೆಚ್ಚು ಮಕ್ಕಳು ಶಾಲಾ, ಕಾಲೇಜಿಗೆ ಕುಶಾಲನಗರ, ಸೋಮವಾರಪೇಟೆ ಹೋಗುತ್ತಾರೆ. ಇವರೆಲ್ರೂ ಕುಸಿದು ಹೋಗಿರುವ ಈ ಸೇತುವೆಯ ಹಳ್ಳ ಇಳಿದು ನೀರು ದಾಟಿ ಹೋಗಬೇಕು. ಅದಕ್ಕಾಗಿ ಹಳೆಯ ವಿದ್ಯುತ್ ಕಂಬಗಳು ಮತ್ತು ಮರದ ದಿಮ್ಮಿಯನ್ನು ಹಳ್ಳದಲ್ಲಿ ಅಡ್ಡವಾಗಿ ಹಾಕಿ ರಸ್ತೆದಾಟಬೇಕಾದ ಪರಿಸ್ಥಿತಿ ಇದೆ. ಇಂತಹ ಅತ್ಯಂತ ಅಪಾಯಕಾರಿ ಪರಿಸ್ಥಿತಿ ಇದ್ದು, ಚಿಕ್ಕಪುಟ್ಟ ಮಕ್ಕಳು ಈ ಹಳ್ಳ ದಾಟಿ ಹೋಗಿ ಬರಬೇಕಾದರೆ, ಪೋಷಕರು ಜೊತೆಗೆ ಇದ್ದು, ಈ ಹಳ್ಳವನ್ನು ದಾಟಿಸಬೇಕು. ಒಂದು ವೇಳೆ ಮಳೆ ಬಂತೆಂದರೆ ಹಳ್ಳದಲ್ಲಿ ಭಾರೀ ನೀರು ಹರಿಯುವುದರಿಂದ ಒಂದು ಭಾಗದಿಂದ ಮತ್ತೊಂದು ಭಾಗಕ್ಕೆ ದಾಟಲು ಸಾಧ್ಯವೇ ಇಲ್ಲ. ಈ ಬಗ್ಗೆ ಹಲವು ಬಾರಿ ಪಂಚಾಯಿತಿ ಅಧಿಕಾರಿಗಳು, ಕಂದಾಯ ಇಲಾಖೆ ಅಧಿಕಾರಿಗಳು ಮತ್ತು ಶಾಸಕರಿಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಇನ್ನು  ಸೇತುವೆ ಕುಸಿದು ಬಿದ್ದಿರುವ ಬಗ್ಗೆ ಶಾಸಕರಿಗೂ ಹಲವು ಬಾರಿ ಮನವಿ ಮಾಡಲಾಗಿದೆ. ಆದರೆ ಇದುವರೆಗೆ ಶಾಸಕರು ಗಮನಹರಿಸಿಲ್ಲ. ಕೇಳಿದಾಗಲೆಲ್ಲಾ ಸೇತುವೆ ಮಾಡಿಕೊಡುವುದಾಗಿ ಹೇಳುತ್ತಾರೆ ವಿನಃ ಸೇತುವೆ ನಿರ್ಮಿಸಿಲ್ಲ.

ವಾರದಲ್ಲಿ ಭೂ ಪರಿವರ್ತನೆಗಾಗಿ ವಿಧಾನಸಭೆಯಲ್ಲಿ ಮಸೂದೆ ಮಂಡನೆ

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more