BIG 3: ಸೇತುವೆ ಕುಸಿದು 6 ತಿಂಗಳಾದ್ರೂ ಡೋಂಟ್ ಕೇರ್: ಕೊಡಗು ಜನರ ಸಮಸ್ಯೆ ಕೇಳುವವರು ಯಾರು?

BIG 3: ಸೇತುವೆ ಕುಸಿದು 6 ತಿಂಗಳಾದ್ರೂ ಡೋಂಟ್ ಕೇರ್: ಕೊಡಗು ಜನರ ಸಮಸ್ಯೆ ಕೇಳುವವರು ಯಾರು?

Published : Dec 21, 2022, 02:46 PM IST

ಕೊಡಗು ಕುಶಾಲನಗರ ತಾಲೂಕಿನ ಯಡವನಾಡು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯಲ್ಲಿ, ಸೇತುವೆ ಕುಸಿದು ಬಿದ್ದು ಆರು ತಿಂಗಳಾದರೂ ಇಂದಿಗೂ ಸೇತುವೆ ನಿರ್ಮಿಸಿಲ್ಲ.
 

ಯಡವನಾಡು ಕುಶಾಲನಗರ ತಾಲ್ಲೂಕು ಕೇಂದ್ರದಿಂದ 15 ಕಿಲೋ ಮೀಟರ್ ದೂರದಲ್ಲಿರುವ ಗ್ರಾಮ. ಕಳೆದ ಆಗಸ್ಟ್ ತಿಂಗಳಲ್ಲಿ ಸುರಿದ ಧಾರಾಕಾರ ಮಳೆಗೆ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿರುವ ಸೇತುವೆ ಸಂಪೂರ್ಣ ಕುಸಿದು ಬಿದ್ದಿದೆ. ಕುಸಿದು ಬಿದ್ದು 6 ತಿಂಗಳಾದರೂ ಸೇತುವೆ ನಿರ್ಮಿಸಿಲ್ಲ.  ಯಡವನಾಡು ಗ್ರಾಮದಲ್ಲಿ 75 ಕ್ಕೂ ಹೆಚ್ಚು ಕುಟುಂಬಗಳಿದ್ದು 50ಕ್ಕೂ ಹೆಚ್ಚು ಮಕ್ಕಳು ಶಾಲಾ, ಕಾಲೇಜಿಗೆ ಕುಶಾಲನಗರ, ಸೋಮವಾರಪೇಟೆ ಹೋಗುತ್ತಾರೆ. ಇವರೆಲ್ರೂ ಕುಸಿದು ಹೋಗಿರುವ ಈ ಸೇತುವೆಯ ಹಳ್ಳ ಇಳಿದು ನೀರು ದಾಟಿ ಹೋಗಬೇಕು. ಅದಕ್ಕಾಗಿ ಹಳೆಯ ವಿದ್ಯುತ್ ಕಂಬಗಳು ಮತ್ತು ಮರದ ದಿಮ್ಮಿಯನ್ನು ಹಳ್ಳದಲ್ಲಿ ಅಡ್ಡವಾಗಿ ಹಾಕಿ ರಸ್ತೆದಾಟಬೇಕಾದ ಪರಿಸ್ಥಿತಿ ಇದೆ. ಇಂತಹ ಅತ್ಯಂತ ಅಪಾಯಕಾರಿ ಪರಿಸ್ಥಿತಿ ಇದ್ದು, ಚಿಕ್ಕಪುಟ್ಟ ಮಕ್ಕಳು ಈ ಹಳ್ಳ ದಾಟಿ ಹೋಗಿ ಬರಬೇಕಾದರೆ, ಪೋಷಕರು ಜೊತೆಗೆ ಇದ್ದು, ಈ ಹಳ್ಳವನ್ನು ದಾಟಿಸಬೇಕು. ಒಂದು ವೇಳೆ ಮಳೆ ಬಂತೆಂದರೆ ಹಳ್ಳದಲ್ಲಿ ಭಾರೀ ನೀರು ಹರಿಯುವುದರಿಂದ ಒಂದು ಭಾಗದಿಂದ ಮತ್ತೊಂದು ಭಾಗಕ್ಕೆ ದಾಟಲು ಸಾಧ್ಯವೇ ಇಲ್ಲ. ಈ ಬಗ್ಗೆ ಹಲವು ಬಾರಿ ಪಂಚಾಯಿತಿ ಅಧಿಕಾರಿಗಳು, ಕಂದಾಯ ಇಲಾಖೆ ಅಧಿಕಾರಿಗಳು ಮತ್ತು ಶಾಸಕರಿಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಇನ್ನು  ಸೇತುವೆ ಕುಸಿದು ಬಿದ್ದಿರುವ ಬಗ್ಗೆ ಶಾಸಕರಿಗೂ ಹಲವು ಬಾರಿ ಮನವಿ ಮಾಡಲಾಗಿದೆ. ಆದರೆ ಇದುವರೆಗೆ ಶಾಸಕರು ಗಮನಹರಿಸಿಲ್ಲ. ಕೇಳಿದಾಗಲೆಲ್ಲಾ ಸೇತುವೆ ಮಾಡಿಕೊಡುವುದಾಗಿ ಹೇಳುತ್ತಾರೆ ವಿನಃ ಸೇತುವೆ ನಿರ್ಮಿಸಿಲ್ಲ.

ವಾರದಲ್ಲಿ ಭೂ ಪರಿವರ್ತನೆಗಾಗಿ ವಿಧಾನಸಭೆಯಲ್ಲಿ ಮಸೂದೆ ಮಂಡನೆ

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more