BIG 3: ಸೇತುವೆ ಕುಸಿದು 6 ತಿಂಗಳಾದ್ರೂ ಡೋಂಟ್ ಕೇರ್: ಕೊಡಗು ಜನರ ಸಮಸ್ಯೆ ಕೇಳುವವರು ಯಾರು?

BIG 3: ಸೇತುವೆ ಕುಸಿದು 6 ತಿಂಗಳಾದ್ರೂ ಡೋಂಟ್ ಕೇರ್: ಕೊಡಗು ಜನರ ಸಮಸ್ಯೆ ಕೇಳುವವರು ಯಾರು?

Published : Dec 21, 2022, 02:46 PM IST

ಕೊಡಗು ಕುಶಾಲನಗರ ತಾಲೂಕಿನ ಯಡವನಾಡು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯಲ್ಲಿ, ಸೇತುವೆ ಕುಸಿದು ಬಿದ್ದು ಆರು ತಿಂಗಳಾದರೂ ಇಂದಿಗೂ ಸೇತುವೆ ನಿರ್ಮಿಸಿಲ್ಲ.
 

ಯಡವನಾಡು ಕುಶಾಲನಗರ ತಾಲ್ಲೂಕು ಕೇಂದ್ರದಿಂದ 15 ಕಿಲೋ ಮೀಟರ್ ದೂರದಲ್ಲಿರುವ ಗ್ರಾಮ. ಕಳೆದ ಆಗಸ್ಟ್ ತಿಂಗಳಲ್ಲಿ ಸುರಿದ ಧಾರಾಕಾರ ಮಳೆಗೆ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿರುವ ಸೇತುವೆ ಸಂಪೂರ್ಣ ಕುಸಿದು ಬಿದ್ದಿದೆ. ಕುಸಿದು ಬಿದ್ದು 6 ತಿಂಗಳಾದರೂ ಸೇತುವೆ ನಿರ್ಮಿಸಿಲ್ಲ.  ಯಡವನಾಡು ಗ್ರಾಮದಲ್ಲಿ 75 ಕ್ಕೂ ಹೆಚ್ಚು ಕುಟುಂಬಗಳಿದ್ದು 50ಕ್ಕೂ ಹೆಚ್ಚು ಮಕ್ಕಳು ಶಾಲಾ, ಕಾಲೇಜಿಗೆ ಕುಶಾಲನಗರ, ಸೋಮವಾರಪೇಟೆ ಹೋಗುತ್ತಾರೆ. ಇವರೆಲ್ರೂ ಕುಸಿದು ಹೋಗಿರುವ ಈ ಸೇತುವೆಯ ಹಳ್ಳ ಇಳಿದು ನೀರು ದಾಟಿ ಹೋಗಬೇಕು. ಅದಕ್ಕಾಗಿ ಹಳೆಯ ವಿದ್ಯುತ್ ಕಂಬಗಳು ಮತ್ತು ಮರದ ದಿಮ್ಮಿಯನ್ನು ಹಳ್ಳದಲ್ಲಿ ಅಡ್ಡವಾಗಿ ಹಾಕಿ ರಸ್ತೆದಾಟಬೇಕಾದ ಪರಿಸ್ಥಿತಿ ಇದೆ. ಇಂತಹ ಅತ್ಯಂತ ಅಪಾಯಕಾರಿ ಪರಿಸ್ಥಿತಿ ಇದ್ದು, ಚಿಕ್ಕಪುಟ್ಟ ಮಕ್ಕಳು ಈ ಹಳ್ಳ ದಾಟಿ ಹೋಗಿ ಬರಬೇಕಾದರೆ, ಪೋಷಕರು ಜೊತೆಗೆ ಇದ್ದು, ಈ ಹಳ್ಳವನ್ನು ದಾಟಿಸಬೇಕು. ಒಂದು ವೇಳೆ ಮಳೆ ಬಂತೆಂದರೆ ಹಳ್ಳದಲ್ಲಿ ಭಾರೀ ನೀರು ಹರಿಯುವುದರಿಂದ ಒಂದು ಭಾಗದಿಂದ ಮತ್ತೊಂದು ಭಾಗಕ್ಕೆ ದಾಟಲು ಸಾಧ್ಯವೇ ಇಲ್ಲ. ಈ ಬಗ್ಗೆ ಹಲವು ಬಾರಿ ಪಂಚಾಯಿತಿ ಅಧಿಕಾರಿಗಳು, ಕಂದಾಯ ಇಲಾಖೆ ಅಧಿಕಾರಿಗಳು ಮತ್ತು ಶಾಸಕರಿಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಇನ್ನು  ಸೇತುವೆ ಕುಸಿದು ಬಿದ್ದಿರುವ ಬಗ್ಗೆ ಶಾಸಕರಿಗೂ ಹಲವು ಬಾರಿ ಮನವಿ ಮಾಡಲಾಗಿದೆ. ಆದರೆ ಇದುವರೆಗೆ ಶಾಸಕರು ಗಮನಹರಿಸಿಲ್ಲ. ಕೇಳಿದಾಗಲೆಲ್ಲಾ ಸೇತುವೆ ಮಾಡಿಕೊಡುವುದಾಗಿ ಹೇಳುತ್ತಾರೆ ವಿನಃ ಸೇತುವೆ ನಿರ್ಮಿಸಿಲ್ಲ.

ವಾರದಲ್ಲಿ ಭೂ ಪರಿವರ್ತನೆಗಾಗಿ ವಿಧಾನಸಭೆಯಲ್ಲಿ ಮಸೂದೆ ಮಂಡನೆ

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more