BIG 3ಸಾರಿಗೆ ವ್ಯವಸ್ಥೆ ಇಲ್ಲದೆ ಶಾಲೆ ಬಿಟ್ಟ 14 ಮಕ್ಕಳು: ವಿದ್ಯಾರ್ಥಿಗಳ ಗೋಳು ಕೇಳುವವರು ಯಾರು?

BIG 3ಸಾರಿಗೆ ವ್ಯವಸ್ಥೆ ಇಲ್ಲದೆ ಶಾಲೆ ಬಿಟ್ಟ 14 ಮಕ್ಕಳು: ವಿದ್ಯಾರ್ಥಿಗಳ ಗೋಳು ಕೇಳುವವರು ಯಾರು?

Published : Feb 02, 2023, 03:48 PM ISTUpdated : Feb 02, 2023, 04:23 PM IST

ಸಾರಿಗೆ ಸೌಲಭ್ಯವಿಲ್ಲದೆ 14 ವಿದ್ಯಾರ್ಥಿಗಳು ಶಾಲೆಯಿಂದ ಹೊರಗುಳಿದ ಘಟನೆ, ಕೊಡಗು ಜಿಲ್ಲೆ ಕುಶಾಲನಗರ ತಾಲ್ಲೂಕಿನ ಹೆರೂರು ಹಾಡಿಯಲ್ಲಿ ನಡೆದಿದೆ.

ಹೆರೂರು ಹಾಡಿಯಲ್ಲಿ 120ಕ್ಕೂ ಕುಟುಂಬಗಳಿವೆ. ಇಲ್ಲಿಂದ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು 6 ರಿಂದ 8 ಕಿಲೋ ಮೀಟರ್ ದೂರದಲ್ಲಿರುವ ಬಸವನಹಳ್ಳಿ, ಕಾನ್‍ಬೈಲು ಮತ್ತು ಏಳನೇ ಹೊಸಕೋಟೆ ಶಾಲೆಗಳಿಗೆ ಹೋಗಬೇಕು. ಶಾಲೆಗೆ ಹೋಗಬೇಕೆಂದರೆ ನಾಲ್ಕು ಕಿಲೋ ಮೀಟರ್ ಉದ್ದದ ವನ್ಯಜೀವಿ ಕಾಡಿನಲ್ಲಿ ನಡೆದು ಸಾಗಬೇಕು. ನಿತ್ಯ ಆನೆ, ಹುಲಿಗಳು ಓಡಾಡುವ ಈ ಕಾಡಿನಲ್ಲಿ ನಡೆದು ಶಾಲೆಗೆ ಹೋಗುವುದಾದರೂ ಹೇಗೆ ಎನ್ನುವ ದೊಡ್ಡ ಸಮಸ್ಯೆ ಎದುರಾಗಿದೆ. ಕಾಡಿನಲ್ಲಿ ನಾಲ್ಕು ಕಿಲೋ ಮೀಟರ್ ನಡೆಯುವ ಜೊತೆಗೆ ಇನ್ನೆರಡು ಕಿಲೋ ಮೀಟರ್ ಮಾಮೂಲಿ ರಸ್ತೆಯಲ್ಲಿಯೇ ನಡೆಯಬೇಕು. ಹೀಗಾಗಿ ಬಸವನಹಳ್ಳಿ ಶಾಲೆಗೆ ಹೋಗುತ್ತಿದ್ದ 12 ವಿದ್ಯಾರ್ಥಿಗಳು ಶಾಲೆಗೆ ದಾಖಲಾಗಿದ್ದಷ್ಟೇ ಬಾಕಿ, ಮತ್ತೆ ಆ ಶಾಲೆಯತ್ತ ತಿರುಗಿ ನೋಡಿಲ್ಲ. ಗ್ರಾಮಕ್ಕೆ ಬಸ್ಸಿನ ವ್ಯವಸ್ಥೆ ಇಲ್ಲದೆ ಇರುವುದರಿಂದ ಯಾರೂ ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ಮುಂದೆ ಬರುತ್ತಿಲ್ಲ. ಆರ್ಥಿಕವಾಗಿ ತೀವ್ರ ಸಂಕಷ್ಟದಲ್ಲಿರುವ ಕುಟುಂಬಗಳು ಆಗಿರುವುದರಿಂದ ಆಟೋಗಳಿಗೆ ಹಣ ನೀಡಿ ಶಾಲೆಗೆ ಕಳುಹಿಸುವುದಿಲ್ಲ. ಸಾರಿಗೆ ಸೌಲಭ್ಯದ ಕೊರತೆಯಿಂದ ಆ ವಿದ್ಯಾರ್ಥಿಗಳು ಶಿಕ್ಷಣದಿಂದ ಹೊರಗುಳಿಯುವಂತೆ ಆಗಿರುವುದು ವಿಪರ್ಯಾಸದ ಸಂಗತಿ.

25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
Read more