BIG 3ಸಾರಿಗೆ ವ್ಯವಸ್ಥೆ ಇಲ್ಲದೆ ಶಾಲೆ ಬಿಟ್ಟ 14 ಮಕ್ಕಳು: ವಿದ್ಯಾರ್ಥಿಗಳ ಗೋಳು ಕೇಳುವವರು ಯಾರು?

BIG 3ಸಾರಿಗೆ ವ್ಯವಸ್ಥೆ ಇಲ್ಲದೆ ಶಾಲೆ ಬಿಟ್ಟ 14 ಮಕ್ಕಳು: ವಿದ್ಯಾರ್ಥಿಗಳ ಗೋಳು ಕೇಳುವವರು ಯಾರು?

Published : Feb 02, 2023, 03:48 PM ISTUpdated : Feb 02, 2023, 04:23 PM IST

ಸಾರಿಗೆ ಸೌಲಭ್ಯವಿಲ್ಲದೆ 14 ವಿದ್ಯಾರ್ಥಿಗಳು ಶಾಲೆಯಿಂದ ಹೊರಗುಳಿದ ಘಟನೆ, ಕೊಡಗು ಜಿಲ್ಲೆ ಕುಶಾಲನಗರ ತಾಲ್ಲೂಕಿನ ಹೆರೂರು ಹಾಡಿಯಲ್ಲಿ ನಡೆದಿದೆ.

ಹೆರೂರು ಹಾಡಿಯಲ್ಲಿ 120ಕ್ಕೂ ಕುಟುಂಬಗಳಿವೆ. ಇಲ್ಲಿಂದ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು 6 ರಿಂದ 8 ಕಿಲೋ ಮೀಟರ್ ದೂರದಲ್ಲಿರುವ ಬಸವನಹಳ್ಳಿ, ಕಾನ್‍ಬೈಲು ಮತ್ತು ಏಳನೇ ಹೊಸಕೋಟೆ ಶಾಲೆಗಳಿಗೆ ಹೋಗಬೇಕು. ಶಾಲೆಗೆ ಹೋಗಬೇಕೆಂದರೆ ನಾಲ್ಕು ಕಿಲೋ ಮೀಟರ್ ಉದ್ದದ ವನ್ಯಜೀವಿ ಕಾಡಿನಲ್ಲಿ ನಡೆದು ಸಾಗಬೇಕು. ನಿತ್ಯ ಆನೆ, ಹುಲಿಗಳು ಓಡಾಡುವ ಈ ಕಾಡಿನಲ್ಲಿ ನಡೆದು ಶಾಲೆಗೆ ಹೋಗುವುದಾದರೂ ಹೇಗೆ ಎನ್ನುವ ದೊಡ್ಡ ಸಮಸ್ಯೆ ಎದುರಾಗಿದೆ. ಕಾಡಿನಲ್ಲಿ ನಾಲ್ಕು ಕಿಲೋ ಮೀಟರ್ ನಡೆಯುವ ಜೊತೆಗೆ ಇನ್ನೆರಡು ಕಿಲೋ ಮೀಟರ್ ಮಾಮೂಲಿ ರಸ್ತೆಯಲ್ಲಿಯೇ ನಡೆಯಬೇಕು. ಹೀಗಾಗಿ ಬಸವನಹಳ್ಳಿ ಶಾಲೆಗೆ ಹೋಗುತ್ತಿದ್ದ 12 ವಿದ್ಯಾರ್ಥಿಗಳು ಶಾಲೆಗೆ ದಾಖಲಾಗಿದ್ದಷ್ಟೇ ಬಾಕಿ, ಮತ್ತೆ ಆ ಶಾಲೆಯತ್ತ ತಿರುಗಿ ನೋಡಿಲ್ಲ. ಗ್ರಾಮಕ್ಕೆ ಬಸ್ಸಿನ ವ್ಯವಸ್ಥೆ ಇಲ್ಲದೆ ಇರುವುದರಿಂದ ಯಾರೂ ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ಮುಂದೆ ಬರುತ್ತಿಲ್ಲ. ಆರ್ಥಿಕವಾಗಿ ತೀವ್ರ ಸಂಕಷ್ಟದಲ್ಲಿರುವ ಕುಟುಂಬಗಳು ಆಗಿರುವುದರಿಂದ ಆಟೋಗಳಿಗೆ ಹಣ ನೀಡಿ ಶಾಲೆಗೆ ಕಳುಹಿಸುವುದಿಲ್ಲ. ಸಾರಿಗೆ ಸೌಲಭ್ಯದ ಕೊರತೆಯಿಂದ ಆ ವಿದ್ಯಾರ್ಥಿಗಳು ಶಿಕ್ಷಣದಿಂದ ಹೊರಗುಳಿಯುವಂತೆ ಆಗಿರುವುದು ವಿಪರ್ಯಾಸದ ಸಂಗತಿ.

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more