BIG3: ಬೆಸ್ಕಾಂ ಉಗ್ರಾಣದಲ್ಲಿ ತುಕ್ಕು ಹಿಡಿಯುತ್ತಿವೆ 2 ಸಾವಿರ ಟಿಸಿಗಳು! ರೈತರಿಗೆ ಟಿಸಿ ಕೊಡಲು ಹಿಂದೇಟು!

BIG3: ಬೆಸ್ಕಾಂ ಉಗ್ರಾಣದಲ್ಲಿ ತುಕ್ಕು ಹಿಡಿಯುತ್ತಿವೆ 2 ಸಾವಿರ ಟಿಸಿಗಳು! ರೈತರಿಗೆ ಟಿಸಿ ಕೊಡಲು ಹಿಂದೇಟು!

Published : Feb 16, 2023, 07:11 PM IST

ತುಮಕೂರು ಜಿಲ್ಲೆಯ ಬೆಸ್ಕಾಂ ಗೋದಾಮುಗಳಲ್ಲಿ ಸುಮಾರು 2 ಸಾವಿರ ವಿದ್ಯುತ್‌ ಪರಿವರ್ತಕ (ಟ್ರ್ಯಾನ್ಸ್‌ಫಾರ್ಮರ್‌) ಹಂಚಿಕೆ ಮಾಡದೇ ಇಟ್ಟು ತುಕ್ಕು ಹಿಡಿಯುವಂತೆ ಮಾಡುತ್ತಿದ್ದಾರೆ.

ಬೆಂಗಳೂರು (ಫೆ.16): ರಾಜ್ಯದಲ್ಲಿ ಸುಮಾರು 3 ಲಕ್ಷ ಕೋಟಿ ರೂ. ಬಜೆಟ್‌ ಮಂಡನೆ ಮಾಡಲಾಗುತ್ತದೆ. ಪ್ರತಿಯೊಂದು ಇಲಾಖೆಗೂ, ಯೋಜನೆಗೂ ಇಷ್ಟು ಅನುದಾನ ಮೀಸಲಿಟ್ಟಿದ್ದೇವೆ. ಇದಕ್ಕಾಗಿ ಇಷ್ಟು ಖರ್ಚು ಮಾಡಿದ್ದೇವೆ ಎಂದು ಹೇಳುತ್ತಾರೆ. ಆದರೆ, ಸರ್ಕಾರದ ಹಣ ಸೂಕ್ತ ಫಲಾನುಭವಿಗಳಿಗೆ ತಲುಪುತ್ತಿಲ್ಲ. ದೇವರು ಕೊಟ್ಟರೂ ಪೂಜಾರಿ ಕೊಡುವುದಿಲ್ಲ ಎಂಬ ಗಾದೆಯಂತೆ ಬೆಸ್ಕಾಂ ಹಾಗೂ ವಿದ್ಯುತ್‌ ಇಲಾಖೆ ಹೊಸ ಟ್ರಾನ್ಸ್‌ಫಾರ್ಮರ್‌ಗಳನ್ನು ಅಧಿಕಾರಿಗಳು ರೈತರಿಗೆ ಕೊಡುತ್ತಿಲ್ಲ.

ಸುಮಾರು 2 ಸಾವಿರ ವಿದ್ಯುತ್‌ ಪರಿವರ್ತಕ (ಟ್ರ್ಯಾನ್ಸ್‌ಫಾರ್ಮರ್‌) ಹಂಚಿಕೆ ಮಾಡದೇ ಗೋದಾಮಿನಲ್ಲಿ ಇಟ್ಟು ತುಕ್ಕು ಹಿಡಿಯುವಂತೆ ಮಾಡುತ್ತಿದ್ದಾರೆ. ಸರ್ಕಾರದಿಂದ ಕೋಟ್ಯಂತರ ರೂ. ಅನುದಾನ ಕೊಟ್ಟಿದ್ದರೂ ಅಧಿಕಾರಿಗಳು ರೈತರಿಗೆ ಹಂಚಿಕೆ ಮಾಡದೇ  ನಿರ್ಲಕ್ಷ್ಯವಹಿದಸಿದ್ದಾರೆ. ಇನ್ನು ಕಳೆದ ಮೂರ್ನಾಲ್ಕು ವರ್ಷದಿಂದ ಬೆಳೆಗಳನ್ನು ರಕ್ಷಣೆ ಮಾಡಿಕೊಳ್ಳಲು ಕೊಳವೆ, ಬಾವಿ ಸೇರಿದಂತೆ ವಿವಿಧೆಡೆಯಿಂದ ನೀರು ಹರಿಸಲು ವಿದ್ಯುತ್‌ ಬೇಕೇ ಬೇಕು. ಆದರೆ, ಇದಕ್ಕಾಗಿ ಟ್ರ್ಯಾನ್ಸ್‌ಫಾರ್ಮರ್‌ ಬೇಕಿದ್ದರೂ, ರೈತರಿಗೆ ಕೊಡುತ್ತಿಲ್ಲ. ಸುಮಾರು 8 ತಿಂಗಳ ಹಿಂದೆಯೇ ಟಿಸಿಗಳು ಬಂದಿದ್ದು, ಇನ್ನು ಎರಡು ತಿಂಗಳು ಕಳೆದರೆ ಟಿಸಿ ಕಾರ್ಯಕ್ರಮತೆ ನಿಂತುಹೋಗಲಿದೆ. 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more