ಇದು ಬಿಗ್-3 ಬಿಗ್ ಇಂಪ್ಯಾಕ್ಟ್: ಭೂಗಳ್ಳರ ಪಾಲಾಗಿದ್ದ ಸರ್ಕಾರಿ ಜಾಗದಲ್ಲಿ ಸರ್ವೆ ಕಾರ್ಯ ಶುರು

ಇದು ಬಿಗ್-3 ಬಿಗ್ ಇಂಪ್ಯಾಕ್ಟ್: ಭೂಗಳ್ಳರ ಪಾಲಾಗಿದ್ದ ಸರ್ಕಾರಿ ಜಾಗದಲ್ಲಿ ಸರ್ವೆ ಕಾರ್ಯ ಶುರು

Published : Jan 06, 2023, 02:25 PM ISTUpdated : Jan 06, 2023, 02:44 PM IST

ಅವರನ್ನು ಹೇಳೋರು ಕೇಳೋರು ಯಾರು ಇರಲಿಲ್ಲ. ಆ ಕೆಲವು ಜನರು ಅಲ್ಲಿ ಆಡಿದ್ದೇ ಆಟ ಆಗಿತ್ತು. ಯಾಕಂದ್ರೆ,  ಕೋಟ್ಯಂತರ ರೂಪಾಯಿಯ ಸಿಕ್ಕ ಸಿಕ್ಕ ಜಾಗವನ್ನು ಕಬಳಿಕೆ ಮಾಡ್ತಿದ್ರೂ, ಈ ಬಗ್ಗೆ ಬಿಗ್3ಯಲ್ಲಿ ವರದಿ ಪ್ರಸಾರ ಆದ್ಮೇಲೆ ಅಲ್ಲಿನ ಚಿತ್ರಣವೇ ಬದಲಾಯ್ತು.

ಕಳೆದ ತಿಂಗಳು ಹುಬ್ಬಳ್ಳಿಯ ಸರ್ಕಾರಿ ಭೂಮಿ ಕಬಳಿಕೆ ಬಗ್ಗೆ ಬಿಗ್3ಯಲ್ಲಿ ವರದಿ ಪ್ರಸಾರ ಮಾಡಿದ್ವಿ. ವಿದ್ಯಾ ನಗರದಲ್ಲಿರೋ ಪ್ರಗತಿ ಕಾಲೋನಿಯ ಕೋಟ್ಯಂತರ ರೂಪಾಯಿ ಮೌಲ್ಯದ ಸರ್ಕಾರಿ ಭೂಮಿ ಭೂಗಳ್ಳರ ಪಾಲಾಗುತ್ತಿದೆ. ಇದನ್ನು ತಡೆದು, ಪಾಲಿಕೆ ಆಸ್ತಿ ಉಳಿಸಿ‌ಕೊಳ್ಳಲು ಇಲ್ಲಿನ‌ ಜನ ದೊಡ್ಡ ಹೋರಾಟಕ್ಕಿಳಿದ್ದಿದ್ದರು‌. ಇದೀಗ ಬಿಗ್-3ಯಲ್ಲಿ ವರದಿ ಇಂಪ್ಯಾಕ್ಟ್ ಆಗಿದ್ದು, ಸರ್ವೆ ಕಾರ್ಯವು ನಡೆದಿದೆ. ಸರ್ಕಾರಿ ದಾಖಲೆಗಳ ಪ್ರಕಾರ ಇದು ಪಾಲಿಕೆ ಆಸ್ತಿ. ಅಷ್ಟೇ ಅಲ್ಲದೇ ಶಾಶ್ವತವಾದ ಗ್ರೀನ್ ಬೆಲ್ಟ್ ಪ್ರದೇಶದ ಈ‌ ಜಾಗವನ್ನು ಅನ್ಯ ಉದ್ದೇಶಕ್ಕೆ ಬಳಕೆ‌ ಮಾಡುವಂತಿಲ್ಲ.. ಆದ್ರೆ, ಭೂ‌‌ಗಳ್ಳರು ಈ ಜಾಗವನ್ನು ಕಬಳಿಸಿ ತಮ್ಮದೇ ಸ್ವಂತ ಆಸ್ತಿ‌ ಎಂಬಂತೆ ಕಾಂಪೌಂಡ್ ಹಾಕಿದ್ರು. ಅಷ್ಟೇ, ಅಲ್ಲದೆ ಸರ್ಕಾರಿ ಜಾಗದಲ್ಲಿ ಬೋರ್ವೆಲ್ ಕೊರೆದು ಕಟ್ಟಡ ನಿರ್ಮಾಣಕ್ಕೆ ಪ್ಲಾನ್ ಮಾಡಿದ್ದರು.‌ ಬಿಗ್-3 ವರದಿ ಪ್ರಸಾರವಾದ ಬಳಿಕ ಇದಕ್ಕೆ ಬ್ರೇಕ್ ಬಿದ್ದಿದೆ.

ಬಿಜೆಪಿಯ ಜಾತಿ ತಂತ್ರ-ಅಭಿವೃದ್ಧಿಯ ಮಂತ್ರ: ಪ್ರಬಲ ಮಠಗಳಿಗೆ ಕೇಸರಿ ದಿಗ್ಗಜರ ಭೇಟಿಯ ಗುಟ್ಟೇನು?

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!