BIG3 : ಶಾಲೆಯ ಆವರಣದಲ್ಲಿ ಶಿಥಿಲಗೊಂಡ ನೀರಿನ ಟ್ಯಾಂಕ್: ಭಯದಲ್ಲಿ ಮಕ್ಕಳ ಓಡಾಟ

BIG3 : ಶಾಲೆಯ ಆವರಣದಲ್ಲಿ ಶಿಥಿಲಗೊಂಡ ನೀರಿನ ಟ್ಯಾಂಕ್: ಭಯದಲ್ಲಿ ಮಕ್ಕಳ ಓಡಾಟ

Published : Feb 24, 2023, 03:16 PM ISTUpdated : Feb 24, 2023, 03:24 PM IST

ಹಲವು ಸಮಸ್ಯೆಗಳ ನಡುವೆಯೇ ಹಾವೇರಿ ಜಿಲ್ಲೆಯ ಶಾಲೆಯೊಂದರಲ್ಲಿ ಮಕ್ಕಳಿಗೆ ಅಪಾಯ ತಲೆ ಮೇಲೆಯೇ ಕಾದು ಕುಳಿತಿದೆ.
 

ಹಾವೇರಿ ಜಿಲ್ಲೆ ಹಾನಗಲ್ ತಾಲೂಕು ಗೆಜ್ಜಿ ಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ  ಶಾಲೆಯಲ್ಲಿ, ಮಕ್ಕಳು ದಿನ ನಿತ್ಯ ಭಯದಲ್ಲಿಯೇ ಬದುಕುತ್ತಿದ್ದಾರೆ. ಯಮರೂಪಿ ಓವರ್ ಹೆಡ್ ಟ್ಯಾಂಕ್ ಮಕ್ಕಳ ತಲೆ ಮೇಲೆಯೇ ಇದ್ದು, ಯಾವ ಕ್ಷಣದಲ್ಲಾದರೂ ಕುಸಿಯಬಹುದು ಎಂಬ ಆತಂಕ ಮನೆ ಮಾಡಿದೆ. ಶಾಲೆಯ ಆವರಣದಲ್ಲೇ ಇರುವ ಈ ಟ್ಯಾಂಕ್ ಸಂಪೂರ್ಣ ಶಿಥಿಲಗೊಂಡಿದೆ. ಎಲ್ಲಿ ನೋಡಿದರೂ ಸಿಮೆಂಟ್ ಕಿತ್ತು ಬರುತ್ತಿದೆ. ಟ್ಯಾಂಕ್ ಒಳಗಿರುವ ಕಬ್ಬಿಣದ ರಾಡ್'ಗಳು ಕೂಡಾ ಕಾಣುತ್ತಿದೆ. ಸಿಮೆಂಟ್ ಉದುರಿ ಬೀಳುತ್ತಿದೆ. ಮಕ್ಕಳು ಬ್ರೇಕ್ ಬಿಟ್ಟಾಗ ಆಟ ಆಡೋದೇ ಟ್ಯಾಂಕ್ ಕೆಳಗೆ. ಸಿಮೆಂಟ್ ಉದುರಿ ಮಕ್ಕಳ ತಲೆ ಮೇಲೆ ಬಿದ್ದರೆ ಗತಿ ಏನು ಎಂಬ ಆತಂಕ ಗ್ರಾಮಸ್ಥರದ್ದು.‌ ಸುಮಾರು 25 ವರ್ಷ ಹಳೆಯದಾದ ಟ್ಯಾಂಕ್ ಶಿಥಿಲಾವಸ್ಥೆ ತಲುಪಿ ನಡುಗುತ್ತಿದೆ. ಸುಮಾರು 50 ಲಕ್ಷ ಲೀಟರ್ ನೀರಿನ ಸಾಮರ್ಥ್ಯದ ಈ ಟ್ಯಾಂಕ್ ನಿಂದ ಮನೆ ಮನೆಗೆ ನೀರು ಸರಬರಾಜು ಮಾಡಲಾಗ್ತಿದೆ. ಹಳೆಯದಾದ ಈ ಟ್ಯಾಂಕ್ ಕೆಡವಿ ಮಕ್ಕಳಿಗೆ ಆಟವಾಡಲು ಅನುಕೂಲ ಮಾಡಿಕೊಡಬೇಕು. ಟ್ಯಾಂಕ್ ತೆರವುಗೊಳಿಸಿದರೆ ಸಂಪೂರ್ಣ ಮೈದಾನ ಮಕ್ಕಳಿಗೆ ಆಟವಾಡೋಕೆ ಲಭ್ಯವಾಗಲಿದೆ ಅನ್ನೋದು ಗ್ರಾಮಸ್ಥರ ಬೇಡಿಕೆ ಆಗಿದೆ.

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
Read more