BIG3 : ಶಾಲೆಯ ಆವರಣದಲ್ಲಿ ಶಿಥಿಲಗೊಂಡ ನೀರಿನ ಟ್ಯಾಂಕ್: ಭಯದಲ್ಲಿ ಮಕ್ಕಳ ಓಡಾಟ

BIG3 : ಶಾಲೆಯ ಆವರಣದಲ್ಲಿ ಶಿಥಿಲಗೊಂಡ ನೀರಿನ ಟ್ಯಾಂಕ್: ಭಯದಲ್ಲಿ ಮಕ್ಕಳ ಓಡಾಟ

Published : Feb 24, 2023, 03:16 PM ISTUpdated : Feb 24, 2023, 03:24 PM IST

ಹಲವು ಸಮಸ್ಯೆಗಳ ನಡುವೆಯೇ ಹಾವೇರಿ ಜಿಲ್ಲೆಯ ಶಾಲೆಯೊಂದರಲ್ಲಿ ಮಕ್ಕಳಿಗೆ ಅಪಾಯ ತಲೆ ಮೇಲೆಯೇ ಕಾದು ಕುಳಿತಿದೆ.
 

ಹಾವೇರಿ ಜಿಲ್ಲೆ ಹಾನಗಲ್ ತಾಲೂಕು ಗೆಜ್ಜಿ ಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ  ಶಾಲೆಯಲ್ಲಿ, ಮಕ್ಕಳು ದಿನ ನಿತ್ಯ ಭಯದಲ್ಲಿಯೇ ಬದುಕುತ್ತಿದ್ದಾರೆ. ಯಮರೂಪಿ ಓವರ್ ಹೆಡ್ ಟ್ಯಾಂಕ್ ಮಕ್ಕಳ ತಲೆ ಮೇಲೆಯೇ ಇದ್ದು, ಯಾವ ಕ್ಷಣದಲ್ಲಾದರೂ ಕುಸಿಯಬಹುದು ಎಂಬ ಆತಂಕ ಮನೆ ಮಾಡಿದೆ. ಶಾಲೆಯ ಆವರಣದಲ್ಲೇ ಇರುವ ಈ ಟ್ಯಾಂಕ್ ಸಂಪೂರ್ಣ ಶಿಥಿಲಗೊಂಡಿದೆ. ಎಲ್ಲಿ ನೋಡಿದರೂ ಸಿಮೆಂಟ್ ಕಿತ್ತು ಬರುತ್ತಿದೆ. ಟ್ಯಾಂಕ್ ಒಳಗಿರುವ ಕಬ್ಬಿಣದ ರಾಡ್'ಗಳು ಕೂಡಾ ಕಾಣುತ್ತಿದೆ. ಸಿಮೆಂಟ್ ಉದುರಿ ಬೀಳುತ್ತಿದೆ. ಮಕ್ಕಳು ಬ್ರೇಕ್ ಬಿಟ್ಟಾಗ ಆಟ ಆಡೋದೇ ಟ್ಯಾಂಕ್ ಕೆಳಗೆ. ಸಿಮೆಂಟ್ ಉದುರಿ ಮಕ್ಕಳ ತಲೆ ಮೇಲೆ ಬಿದ್ದರೆ ಗತಿ ಏನು ಎಂಬ ಆತಂಕ ಗ್ರಾಮಸ್ಥರದ್ದು.‌ ಸುಮಾರು 25 ವರ್ಷ ಹಳೆಯದಾದ ಟ್ಯಾಂಕ್ ಶಿಥಿಲಾವಸ್ಥೆ ತಲುಪಿ ನಡುಗುತ್ತಿದೆ. ಸುಮಾರು 50 ಲಕ್ಷ ಲೀಟರ್ ನೀರಿನ ಸಾಮರ್ಥ್ಯದ ಈ ಟ್ಯಾಂಕ್ ನಿಂದ ಮನೆ ಮನೆಗೆ ನೀರು ಸರಬರಾಜು ಮಾಡಲಾಗ್ತಿದೆ. ಹಳೆಯದಾದ ಈ ಟ್ಯಾಂಕ್ ಕೆಡವಿ ಮಕ್ಕಳಿಗೆ ಆಟವಾಡಲು ಅನುಕೂಲ ಮಾಡಿಕೊಡಬೇಕು. ಟ್ಯಾಂಕ್ ತೆರವುಗೊಳಿಸಿದರೆ ಸಂಪೂರ್ಣ ಮೈದಾನ ಮಕ್ಕಳಿಗೆ ಆಟವಾಡೋಕೆ ಲಭ್ಯವಾಗಲಿದೆ ಅನ್ನೋದು ಗ್ರಾಮಸ್ಥರ ಬೇಡಿಕೆ ಆಗಿದೆ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more